ಆದರೆ, ಮುಂಬೈ ತಂಡವು ಎರಡನೇ ಸ್ಥಾನದಲ್ಲಿ ಮತ್ತಷ್ಟು ಭದ್ರವಾಗಿ ಹೆಜ್ಜೆಯೂರಲು ಗೆಲುವಿನತ್ತ ಚಿತ್ತ ನೆಟ್ಟಿದೆ. ತಂಡದಲ್ಲಿರುವ ಹಾರ್ದಿಕ್ ಪಾಂಡ್ಯ ಮತ್ತು ಕೃಣಾಲ್ ಪಾಂಡ್ಯ ಸಹೋದರರು, ಕ್ವಿಂಟನ್ ಡಿಕಾಕ್, ರೋಹಿತ್ ಶರ್ಮಾ, ಸೂರ್ಯ ಕುಮಾರ್ ಯಾದವ್ ಮತ್ತು ಪೊಲಾರ್ಡ್ ಅವರು ಉತ್ತಮ ಫಾರ್ಮ್ನಲ್ಲಿದ್ದಾರೆ. ಜಸ್ಪ್ರೀತ್ ಬೂಮ್ರಾ ಮತ್ತು ಲಸಿತ್ ಮಾಲಿಂಗ ಅವರು ಕೊನೆಯ ಹಂತದ ಓವರ್ಗಳಲ್ಲಿ ತಂಡಕ್ಕೆ ಜಯದ ಕಾಣಿಕೆ ನೀಡುವ ಸಮರ್ಥರಾಗಿದ್ದಾರೆ.