ಮುಂಬೈ ಇಂಡಿಯನ್ಸ್ ತಂಡದಲ್ಲಿ ರೋಹಿತ್ ಶರ್ಮಾ ಲಯ ಕಂಡುಕೊಂಡರೆ ರನ್ ಗಳಿಕೆಯು ಸರಾಗವಾಗುತ್ತದೆ. ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ಸೌರಭ್ ತಿವಾರಿ, ಕ್ವಿಂಟನ್ ಡಿ ಕಾಕ್, ಕೀರನ್ ಪೊಲಾರ್ಡ್ ಮತ್ತು ಸೂರ್ಯಕುಮಾರ್ ಯಾದವ್ ರನ್ ಹೊಳೆ ಹರಿಸಬಲ್ಲ ಸಮರ್ಥರು. ಬೌಲಿಂಗ್ನಲ್ಲಿ ಹೆಚ್ಚು ಸುಧಾರಣೆ ಕಾಣುವ ಅವಶ್ಯಕತೆ ಇದೆ. ‘ಡೆತ್ ಓವರ್’ ಪರಿಣತ ಜಸ್ಪ್ರೀತ್ ಬೂಮ್ರಾ, ಟ್ರೆಂಟ್ ಬೌಲ್ಟ್, ಸ್ಪಿನ್ನರ್ ಕೃಣಾಲ್ ಪಾಂಡ್ಯ ಅವರು ಪಂದ್ಯ ಗೆಲ್ಲಿಸಿಕೊಡಬಲ್ಲ ಶಕ್ತಿಯುಳ್ಳವರು. ಆದರೆ ಚೆನ್ನೈ ವಿರುದ್ಧದ ಪಂದ್ಯದಲ್ಲಿ ಅಂಬಟಿ ರಾಯುಡು ಮತ್ತು ಫಾಫ್ ಡು ಪ್ಲೆಸಿ ಅವರ ಮುಂದೆ ವೈಫಲ್ಯ ಅನುಭವಿಸಿದ್ದ ಬೌಲರ್ಗಳು ಈಗ ದಿನೇಶ್ ಬಳಗದ ಮುಂದೆ ಪುಟಿದೇಳುವ ಉತ್ತಾಹದಲ್ಲಿದ್ದಾರೆ.