ಹಿಂದೂಸ್ತಾನ್ ಟೈಮ್ಸ್ ಜೊತೆ ಮಾತನಾಡಿರುವ ಗಂಗೂಲಿ, ಸೂರ್ಯಕುಮಾರ್ ಒಬ್ಬರೇ ಅಲ್ಲ. ಇನ್ನೂ ಸಾಕಷ್ಟು ಯುವ ಆಟಗಾರರು ಗಮನಾರ್ಹ ಪ್ರದರ್ಶನ ನೀಡಿದ್ದಾರೆ. ರಾಜಸ್ಥಾನ ರಾಯಲ್ಸ್ ತಂಡದ ಸಂಜು ಸ್ಯಾಮ್ಸನ್, ಕೋಲ್ಕತ್ತ ನೈಟ್ರೈಡರ್ಸ್ನ ರಾಹುಲ್ ತ್ರಿಪಾಠಿ, ವರುಣ್ ಚಕ್ರವರ್ತಿ, ಶುಭಮನ್ ಗಿಲ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ದೇವದತ್ತ ಪಡಿಕ್ಕಲ್ ಈ ಟೂರ್ನಿಯಲ್ಲಿ ಯಶಸ್ಸು ಸಾಧಿಸಿದ್ದಾರೆ ಎಂದು ತಿಳಿಸಿದ್ದಾರೆ.