<p><strong>ನವದೆಹಲಿ</strong>: ಬೆವರು ಮತ್ತು ಇಬ್ಬನಿ ನಡುವೆ ವಿಕೆಟ್ ಪಡೆಯುವುದು ಬೆಕ್ಕು –ಇಲಿ ಆಟದಂತೆ ಎಂದು ಮುಂಬೈ ಇಂಡಿಯನ್ಸ್ ತಂಡದ ವೇಗಿ ಜಸ್ಪ್ರೀಸ್ ಬೂಮ್ರಾ ಹೇಳಿದ್ದಾರೆ.</p>.<p>ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ 13 ಪಂದ್ಯಗಳನ್ನು ಆಡಿರುವ ಬೂಮ್ರಾ 23 ವಿಕೆಟ್ಗಳನ್ನು ಪಡೆದಿದ್ದಾರೆ.</p>.<p>ಟೂರ್ನಿಯ ಆರಂಭದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಬೂಮ್ರಾ 4 ಓವರ್ಗಳಲ್ಲಿ 43 ರನ್ ನೀಡಿ ಕೇವಲ ಒಂದು ವಿಕೆಟ್ ಪಡೆದಿದ್ದರು. ಬಳಿಕ ಕೋಲ್ಕತ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ 4 ಓವರ್ಗಳಲ್ಲಿ 32 ರನ್ ನೀಡಿ ದುಬಾರಿ ಎನ್ನಿಸಿದ್ದರು.</p>.<p>ಆರ್ಸಿಬಿ ವಿರುದ್ಧದ ಮೂರನೇ ಪಂದ್ಯದಲ್ಲಿ 4 ಓವರ್ಗಳಲ್ಲಿ 42 ರನ್ ನೀಡಿದ್ದರು. ನಾಲ್ಕನೇ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ 18 ರನ್ ನೀಡಿ 2 ವಿಕೆಟ್ ಕಬಳಿಸಿದ್ದರು. ನಂತರ ಆಡಿದ ಪಂದ್ಯಗಳಲ್ಲಿ ಬೂಮ್ರಾ ಪ್ರಾಬಲ್ಯ ಮೆರೆದಿದ್ದರು.</p>.<p>‘ನಮ್ಮ ನಿರ್ಧಾರಗಳ ಮೇಲೆ ವಾತಾವರಣ ಹೆಚ್ಚು ಪರಿಣಾಮ ಬೀರುತ್ತದೆ. ದುಬೈನಲ್ಲಿ ಹೆಚ್ಚು ಬಿಸಿಲಿನ ವಾತಾವರಣವಿದ್ದು, ಒದ್ದೆಯಾದ ಬಾಲ್ನಲ್ಲಿ ಬೌಲಿಂಗ್ ಮಾಡುವುದು ಕಷ್ಟವಾಗುತ್ತದೆ’ ಎಂದು ಬೂಮ್ರಾ ಅಭಿಪ್ರಾಯ ಪಟ್ಟಿದ್ದಾರೆ.</p>.<p>ಮಂಗಳವಾರ ನಡೆದ ಐಪಿಎಲ್–2020 ಟೂರ್ನಿಯ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ <strong> </strong>ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ವಿರುದ್ಧ ಸನ್ರೈಸರ್ಸ್ ಹೈದರಾಬಾದ್ ತಂಡ 10 ವಿಕೆಟ್ಗಳಿಂದ ಗೆಲುವು ಸಾಧಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಬೆವರು ಮತ್ತು ಇಬ್ಬನಿ ನಡುವೆ ವಿಕೆಟ್ ಪಡೆಯುವುದು ಬೆಕ್ಕು –ಇಲಿ ಆಟದಂತೆ ಎಂದು ಮುಂಬೈ ಇಂಡಿಯನ್ಸ್ ತಂಡದ ವೇಗಿ ಜಸ್ಪ್ರೀಸ್ ಬೂಮ್ರಾ ಹೇಳಿದ್ದಾರೆ.</p>.<p>ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ 13 ಪಂದ್ಯಗಳನ್ನು ಆಡಿರುವ ಬೂಮ್ರಾ 23 ವಿಕೆಟ್ಗಳನ್ನು ಪಡೆದಿದ್ದಾರೆ.</p>.<p>ಟೂರ್ನಿಯ ಆರಂಭದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಬೂಮ್ರಾ 4 ಓವರ್ಗಳಲ್ಲಿ 43 ರನ್ ನೀಡಿ ಕೇವಲ ಒಂದು ವಿಕೆಟ್ ಪಡೆದಿದ್ದರು. ಬಳಿಕ ಕೋಲ್ಕತ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ 4 ಓವರ್ಗಳಲ್ಲಿ 32 ರನ್ ನೀಡಿ ದುಬಾರಿ ಎನ್ನಿಸಿದ್ದರು.</p>.<p>ಆರ್ಸಿಬಿ ವಿರುದ್ಧದ ಮೂರನೇ ಪಂದ್ಯದಲ್ಲಿ 4 ಓವರ್ಗಳಲ್ಲಿ 42 ರನ್ ನೀಡಿದ್ದರು. ನಾಲ್ಕನೇ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ 18 ರನ್ ನೀಡಿ 2 ವಿಕೆಟ್ ಕಬಳಿಸಿದ್ದರು. ನಂತರ ಆಡಿದ ಪಂದ್ಯಗಳಲ್ಲಿ ಬೂಮ್ರಾ ಪ್ರಾಬಲ್ಯ ಮೆರೆದಿದ್ದರು.</p>.<p>‘ನಮ್ಮ ನಿರ್ಧಾರಗಳ ಮೇಲೆ ವಾತಾವರಣ ಹೆಚ್ಚು ಪರಿಣಾಮ ಬೀರುತ್ತದೆ. ದುಬೈನಲ್ಲಿ ಹೆಚ್ಚು ಬಿಸಿಲಿನ ವಾತಾವರಣವಿದ್ದು, ಒದ್ದೆಯಾದ ಬಾಲ್ನಲ್ಲಿ ಬೌಲಿಂಗ್ ಮಾಡುವುದು ಕಷ್ಟವಾಗುತ್ತದೆ’ ಎಂದು ಬೂಮ್ರಾ ಅಭಿಪ್ರಾಯ ಪಟ್ಟಿದ್ದಾರೆ.</p>.<p>ಮಂಗಳವಾರ ನಡೆದ ಐಪಿಎಲ್–2020 ಟೂರ್ನಿಯ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ <strong> </strong>ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ವಿರುದ್ಧ ಸನ್ರೈಸರ್ಸ್ ಹೈದರಾಬಾದ್ ತಂಡ 10 ವಿಕೆಟ್ಗಳಿಂದ ಗೆಲುವು ಸಾಧಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>