<p>ಟೂರ್ನಿಯ ಮಧ್ಯದಲ್ಲಿ ನಾಯಕತ್ವ ಬದಲಾವಣೆ ಮಾಡಿದ ಕೋಲ್ಕತ್ತ ನೈಟ್ರೈಡರ್ಸ್ ಕ್ರಮ ಸರಿಯಾದುದಲ್ಲ ಎಂದು ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಅಜಿತ್ ಅಗರ್ಕರ್ ಅಭಿಪ್ರಾಯಪಟ್ಟಿದ್ದಾರೆ.</p>.<p>ಕೆಕೆಆರ್ ನಾಯಕರಾಗಿದ್ದ ದಿನೇಶ್ ಕಾರ್ತಿಕ್ಅವರು ಕಳೆದವಾರ ನಾಯಕತ್ವದಿಂದ ಕೆಳಗಿಳಿದಿದ್ದರು, ಹಾಗಾಗಿ ಆ ಸ್ಥಾನಕ್ಕೆ ಇಂಗ್ಲೆಂಡ್ ತಂಡದ ನಾಯಕ ಎಯಾನ್ ಮಾರ್ಗನ್ ಅವರನ್ನು ನೇಮಿಸಲಾಗಿತ್ತು. ನಾಯಕತ್ವ ಬದಲಾವಣೆಯಾದ ದಿನವೇ (ಅ.16) ಮುಂಬೈ ಇಂಡಿಯನ್ಸ್ ವಿರುದ್ಧ ಸೆಣಸಿದ್ದ ಕೆಕೆಆರ್, 8 ವಿಕೆಟ್ ಅಂತರದ ಸೋಲು ಅನುಭವಿಸಿತ್ತು. ಆದರೆ, ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಆಡಿದ ನಂತರದ ಪಂದ್ಯದಲ್ಲಿ ಜಯದ ಹಾದಿಗೆ ಮರಳಿತ್ತು.</p>.<p>ಆದಾಗ್ಯೂ ಟೂರ್ನಿಯ ಮಧ್ಯೆ ನಾಯಕತ್ವದಲ್ಲಾದ ಬದಲಾವಣೆ ಬಗ್ಗೆ ಸಾಕಷ್ಟು ಪ್ರಶ್ನೆಗಳು ಎದ್ದಿವೆ. ಇದೀಗ ಅಜಿತ್ ಅಗರ್ಕರ್ ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.</p>.<p>ಕ್ರೀಡಾವಾಹಿನಿ ಸ್ಟಾರ್ಸ್ಪೋರ್ಟ್ನಲ್ಲಿ ಮಾತನಾಡಿರುವ ಅಗರ್ಕರ್, ‘7 ಪಂದ್ಯಗಳ ಆಟ ಮುಕ್ತಾಯವಾಗಿ, ನಿಮ್ಮ ತಂಡ ಪಾಯಿಂಟ್ಸ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾಗ ನಾಯಕತ್ವ ಬದಲಾವಣೆ ಮಾಡುವುದು ಸರಿಯಾದ ಕ್ರಮ ಎಂದು ನನಗನಿಸುವುದಿಲ್ಲ. ಇದರಿಂದ ತಂಡದ ಮೇಲೆ ಮತ್ತಷ್ಟು ಹೊರೆ ಹೆಚ್ಚಾಗುತ್ತದೆ’</p>.<p>‘ನೀವು ಒಬ್ಬ ನಾಯಕನೊಂದಿಗೆ ಸಾಕಷ್ಟು ಚರ್ಚೆ ನಡೆಸಿ ಯೋಜನೆಗಳನ್ನು ಸಿದ್ಧಪಡಿಸಿರುತ್ತೀರಿ. ತಂಡ ನಾಲ್ಕನೇ ಸ್ಥಾನದಲ್ಲಿದ್ದಾಗ ಈ ರೀತಿಯ ನಿರ್ಧಾರ ತೆಗೆದುಕೊಳ್ಳುವುದು ವಿಚಿತ್ರ ಎನಿಸುತ್ತದೆ’ ಎಂದು ಹೇಳಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/sports/cricket/ipl-2020-wicketkeeper-batsmen-dinesh-karthik-hands-over-kkr-captaincy-to-eoin-morgan-771339.html" target="_blank">ಮಾರ್ಗನ್ಗೆ ಕೆಕೆಆರ್ ನಾಯಕತ್ವ ಬಿಟ್ಟುಕೊಟ್ಟ ದಿನೇಶ್ ಕಾರ್ತಿಕ್</a></p>.<p>ಕೆಕೆಆರ್ ತಂಡ ಬುಧವಾರ ರಾಯಲ್ ಚಾಲೆಂಜರ್ಸ್ ವಿರುದ್ಧ ಕಣಕ್ಕಿಳಿಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಟೂರ್ನಿಯ ಮಧ್ಯದಲ್ಲಿ ನಾಯಕತ್ವ ಬದಲಾವಣೆ ಮಾಡಿದ ಕೋಲ್ಕತ್ತ ನೈಟ್ರೈಡರ್ಸ್ ಕ್ರಮ ಸರಿಯಾದುದಲ್ಲ ಎಂದು ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಅಜಿತ್ ಅಗರ್ಕರ್ ಅಭಿಪ್ರಾಯಪಟ್ಟಿದ್ದಾರೆ.</p>.<p>ಕೆಕೆಆರ್ ನಾಯಕರಾಗಿದ್ದ ದಿನೇಶ್ ಕಾರ್ತಿಕ್ಅವರು ಕಳೆದವಾರ ನಾಯಕತ್ವದಿಂದ ಕೆಳಗಿಳಿದಿದ್ದರು, ಹಾಗಾಗಿ ಆ ಸ್ಥಾನಕ್ಕೆ ಇಂಗ್ಲೆಂಡ್ ತಂಡದ ನಾಯಕ ಎಯಾನ್ ಮಾರ್ಗನ್ ಅವರನ್ನು ನೇಮಿಸಲಾಗಿತ್ತು. ನಾಯಕತ್ವ ಬದಲಾವಣೆಯಾದ ದಿನವೇ (ಅ.16) ಮುಂಬೈ ಇಂಡಿಯನ್ಸ್ ವಿರುದ್ಧ ಸೆಣಸಿದ್ದ ಕೆಕೆಆರ್, 8 ವಿಕೆಟ್ ಅಂತರದ ಸೋಲು ಅನುಭವಿಸಿತ್ತು. ಆದರೆ, ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಆಡಿದ ನಂತರದ ಪಂದ್ಯದಲ್ಲಿ ಜಯದ ಹಾದಿಗೆ ಮರಳಿತ್ತು.</p>.<p>ಆದಾಗ್ಯೂ ಟೂರ್ನಿಯ ಮಧ್ಯೆ ನಾಯಕತ್ವದಲ್ಲಾದ ಬದಲಾವಣೆ ಬಗ್ಗೆ ಸಾಕಷ್ಟು ಪ್ರಶ್ನೆಗಳು ಎದ್ದಿವೆ. ಇದೀಗ ಅಜಿತ್ ಅಗರ್ಕರ್ ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.</p>.<p>ಕ್ರೀಡಾವಾಹಿನಿ ಸ್ಟಾರ್ಸ್ಪೋರ್ಟ್ನಲ್ಲಿ ಮಾತನಾಡಿರುವ ಅಗರ್ಕರ್, ‘7 ಪಂದ್ಯಗಳ ಆಟ ಮುಕ್ತಾಯವಾಗಿ, ನಿಮ್ಮ ತಂಡ ಪಾಯಿಂಟ್ಸ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾಗ ನಾಯಕತ್ವ ಬದಲಾವಣೆ ಮಾಡುವುದು ಸರಿಯಾದ ಕ್ರಮ ಎಂದು ನನಗನಿಸುವುದಿಲ್ಲ. ಇದರಿಂದ ತಂಡದ ಮೇಲೆ ಮತ್ತಷ್ಟು ಹೊರೆ ಹೆಚ್ಚಾಗುತ್ತದೆ’</p>.<p>‘ನೀವು ಒಬ್ಬ ನಾಯಕನೊಂದಿಗೆ ಸಾಕಷ್ಟು ಚರ್ಚೆ ನಡೆಸಿ ಯೋಜನೆಗಳನ್ನು ಸಿದ್ಧಪಡಿಸಿರುತ್ತೀರಿ. ತಂಡ ನಾಲ್ಕನೇ ಸ್ಥಾನದಲ್ಲಿದ್ದಾಗ ಈ ರೀತಿಯ ನಿರ್ಧಾರ ತೆಗೆದುಕೊಳ್ಳುವುದು ವಿಚಿತ್ರ ಎನಿಸುತ್ತದೆ’ ಎಂದು ಹೇಳಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/sports/cricket/ipl-2020-wicketkeeper-batsmen-dinesh-karthik-hands-over-kkr-captaincy-to-eoin-morgan-771339.html" target="_blank">ಮಾರ್ಗನ್ಗೆ ಕೆಕೆಆರ್ ನಾಯಕತ್ವ ಬಿಟ್ಟುಕೊಟ್ಟ ದಿನೇಶ್ ಕಾರ್ತಿಕ್</a></p>.<p>ಕೆಕೆಆರ್ ತಂಡ ಬುಧವಾರ ರಾಯಲ್ ಚಾಲೆಂಜರ್ಸ್ ವಿರುದ್ಧ ಕಣಕ್ಕಿಳಿಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>