ಅಲ್ಲದೇ ಮುಂಬೈನ ಬ್ಯಾಟಿಂಗ್ ಪಡೆಯಲ್ಲಿರುವ ರೋಹಿತ್, ಹಾರ್ದಿಕ್, ಇಶಾನ್ ಕಿಶನ್, ಕೀರನ್ ಪೊಲಾರ್ಡ್, ಕ್ವಿಂಟನ್ ಡಿಕಾಕ್ ಮತ್ತು ಸೂರ್ಯಕುಮಾರ್ ಯಾದವ್ ಅವರನ್ನು ಕಟ್ಟಿಹಾಕುವ ಸವಾಲು ಕೆಕೆಆರ್ನ ಪ್ರಸಿದ್ಧ ಕೃಷ್ಣ, ಕುಲದೀಪ್ ಯಾದವ್, ಪ್ಯಾಟ್ ಕಮಿನ್ಸ್ ಮತ್ತು ಕಮಲೇಶ್ ನಾಗರಕೋಟಿ ಅವರ ಮುಂದೆ ಇದೆ. ಚೆಂಡು ನಿಧಾನಗತಿಯಲ್ಲಿ ಪುಟಿದೆದ್ದು ಸಾಗುತ್ತಿರುವ ಪಿಚ್ನಲ್ಲಿ ಬೌಲರ್ಗಳು ಯಾವ ರೀತಿ ತಂತ್ರಗಾರಿಕೆ ಅನುಸರಿಸಲಿದ್ದಾರೆಂಬ ಕುತೂಹಲವೂ ಗರಿಗೆದರಿದೆ.