ಶುಕ್ರವಾರ, ಮಾರ್ಚ್ 31, 2023
25 °C

ಕೆಕೆಆರ್ ಬಳಿಕ ಚೆನ್ನೈಯಲ್ಲಿ ಅತ್ಯಂತ ಸುರಕ್ಷಿತ ಭಾವನೆ ಉಂಟಾಗಿದೆ: ಉತ್ತಪ್ಪ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ದುಬೈ: ಐಪಿಎಲ್‌ನಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಅತ್ಯಂತ ಸುರಕ್ಷಿತ ಭಾವನೆ ಉಂಟಾಗಿದೆ ಎಂದು ರಾಬಿನ್ ಉತ್ತಪ್ಪ ಅಭಿಪ್ರಾಯಪಟ್ಟಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಮೊದಲ ಕ್ವಾಲಿಫೈಯರ್‌ನಲ್ಲಿ ಅಮೋಘ ಬ್ಯಾಟಿಂಗ್ ಮಾಡಿರುವ ಉತ್ತಪ್ಪ, ಚೆನ್ನೈ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದರು. 44 ಎಸೆತಗಳನ್ನು ಎದುರಿಸಿದ ಉತ್ತಪ್ಪ ಏಳು ಬೌಂಡರಿ ಹಾಗೂ ಎರಡು ಸಿಕ್ಸರ್ ನೆರವಿನಿಂದ 63 ರನ್ ಗಳಿಸಿದರು.

ಇದನ್ನೂ ಓದಿ: 

'ಚೆನ್ನೈ ಅತ್ಯಂತ ಸುರಕ್ಷಿತ ಫ್ರಾಂಚೈಸಿಗಳಲ್ಲಿ ಒಂದಾಗಿದೆ ಎಂದು ನಾನು ನಂಬಿದ್ದೇನೆ. ಇಲ್ಲಿ ಎಲ್ಲರಲ್ಲೂ ಸುರಕ್ಷಿತ ಭಾವನೆ ಉಂಟು ಮಾಡಿದೆ. ಇದರಿಂದಲೇ ಫ್ರಾಂಚೈಸಿಗಾಗಿ ಆಟಗಾರರು ಹಿಂತಿರುಗಿಸಲು ಸಾಧ್ಯವಾಗುತ್ತದೆ' ಎಂದು ಹೇಳಿದ್ದಾರೆ.

 

 

 

'ಕೆಕೆಆರ್‌ನಲ್ಲಿ ಗೌತಿ (ಗೌತಮ್ ಗಂಭೀರ್) ಕ್ಯಾಪ್ಟನ್ ಆಗಿದ್ದಾಗ ನಾನು ತುಂಬಾನೇ ಆನಂದಿಸಿದ್ದೇನೆ. ಅಲ್ಲಿ ನಿಜವಾಗಿಯೂ ಸುರಕ್ಷಿತವಾಗಿದ್ದೇನೆ ಎಂದು ಭಾವಿಸಿದ್ದೆ. ಆದರೆ ಕೆಕೆಆರ್ ಬಳಿಕ ಕ್ರಿಕೆಟ್ ಆಡುವಾಗ ಚೆನ್ನೈಯಲ್ಲಿ ಅತ್ಯಂತ ಸುರಕ್ಷಿತ ಭಾವನೆ ಉಂಟಾಗಿದೆ' ಎಂದು ಹೇಳಿದರು.

 

'ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಸೇರಿದ ಬಳಿಕ ತಮಗೆ ಲಭಿಸಿದ ಅವಕಾಶವನ್ನು ಸಮರ್ಥವಾಗಿ ಬಳಸಿಕೊಳ್ಳಲು ಬಯಸಿದ್ದೆ. ತಂಡಕ್ಕೆ ಕೊಡುಗೆ ನೀಡಲು ಸಾಧ್ಯವಾಗಿರುವುದು ಸಂತಸ ತಂದಿದೆ. ಇಂದು (ಭಾನುವಾರ) ನನ್ನ ಮಗನ ಹುಟ್ಟುಹಬ್ಬ. ನಾನಿದನ್ನು ಮಗನಿಗಾಗಿ ಅರ್ಪಿಸುತ್ತೇನೆ' ಎಂದು ಹೇಳಿದ್ದಾರೆ.

'ನಾನು ಕ್ರೀಸಿಗಿಳಿದಾಗ ಉತ್ತಮ ಆರಂಭದ ಅಗತ್ಯವಿದೆ ಎಂಬುದು ತಿಳಿದಿತ್ತು. ಹಾಗಾಗಿ ಚೆಂಡಿಗೆ ಅದರ ಅಗತ್ಯಕ್ಕೆ ತಕ್ಕಂತೆ ಪ್ರತಿಕ್ರಿಯಿಸಲು ಪ್ರಯತ್ನಿಸಿದ್ದೆ' ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು