<p><strong>ಚೆನ್ನೈ: </strong>ಈ ಬಾರಿ ವಿಭಿನ್ನವಾಗಿ ಆಯೋಜನೆಯಾಗತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ), ಅದೃಷ್ಟ ಬದಲಾಗುವ ಬಗ್ಗೆ ನಾಯಕ ವಿರಾಟ್ ಕೊಹ್ಲಿ ಆಶಾವಾದ ವ್ಯಕ್ತಪಡಿಸಿದ್ದಾರೆ.</p>.<p>'ಇದು ನಿಜ ಎಂದು ನಂಬಲು ಸಾಧ್ಯವಾಗುತ್ತಿಲ್ಲ. ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಈ ಮಧ್ಯೆ ಸಾಕಷ್ಟು ಕ್ರಿಕೆಟ್ ಆಡಿದ್ದರೂ, ನಾವು ದೂರ ಹೋಗಿದ್ದೆವು ಎಂಬಂತೆ ಭಾಸವಾಗುತ್ತಿಲ್ಲ. ಹೌದು, ಮತ್ತೆ ಭಾರತದಲ್ಲಿ ಆಡಲು ತುಂಬಾನೇ ಉತ್ಸುಕರಾಗಿದ್ದೇವೆ' ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ.</p>.<p>'ಆದರೂ ಈ ಬಾರಿ ಸಂಪೂರ್ಣ ವಿಭಿನ್ನ ರೀತಿಯಲ್ಲಿ ಹಾಗೂ ವಿಭಿನ್ನ ವ್ಯವಸ್ಥೆಯಲ್ಲಿ ಐಪಿಎಲ್ ಆಡಲಾಗುತ್ತದೆ. ನಾನು ತುಂಬಾ ಆಶಾವಾದಿಯಾಗಿದ್ದು, ಈ ಬಾರಿ ಉತ್ತಮ ಭಾವನೆಯನ್ನುಂಟು ಮಾಡಿದೆ' ಎಂದು ನುಡಿದಿದ್ದಾರೆ.</p>.<p>ಇದೇ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಿರುವ ಎಬಿ ಡಿ ವಿಲಿಯರ್ಸ್, ಇದೊಂದು ಸುದೀರ್ಘ ಪ್ರಯಾಣವಾಗಿತ್ತು. ಆರ್ಸಿಬಿಗೆ ಮರಳಲು ತುಂಬಾ ಸಂತೋಷವಾಗುತ್ತಿದೆ. ನಿನ್ನೆಯಷ್ಟೇ ಐಪಿಎಲ್ ಮುಗಿದಂತೆ ಭಾಸವಾಗುತ್ತಿದೆ. ನನಗನಿಸುತ್ತದೆ ಕಳೆದ ಟೂರ್ನಿಯ ಹುಮ್ಮಸ್ಸು ನಮ್ಮೊಂದಿಗಿದ್ದು, ಈ ಬಾರಿಯೂ ಆನಂದಿಸಲಿದ್ದೇವೆ ಎಂದು ಹೇಳಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/sports/cricket/kohli-reaches-chennai-to-join-rcb-squad-to-be-in-quarantine-for-seven-days-818448.html" itemprop="url">IPL-2021| ಚೆನ್ನೈಗೆ ಬಂದಿಳಿದ ವಿರಾಟ್–ಎಬಿಡಿ </a></p>.<p>ಹಳೆಯ ಹೆಸರುಗಳ ಜೊತೆಗೆ ಕೆಲವು ಹೊಸ ಹೆಸರುಗಳು ಕಾಣಿಸಿಕೊಂಡಿದೆ. ಹಿಂದಿನಿಂದಲೂ ಪರಿಚಿತವಾಗಿರುವ ಕೆಲವು ಆಟಗಾರರು ನಮ್ಮೊಂದಿಗಿದ್ದಾರೆ. ಗ್ಲೆನ್ ಮ್ಯಾಕ್ಸ್ವೆಲ್ ಅವರನ್ನು ನಾವೆಲ್ಲರೂ ಐಪಿಎಲ್ನಲ್ಲಿ ನೋಡಿದ್ದೇವೆ. ನಾವೆಲ್ಲರೂ ಜೊತೆಯಾಗಿ ಅನೇಕ ಪಂದ್ಯಗಳನ್ನು ಗೆಲ್ಲಬೇಕಾಗಿದ್ದು, ತುಂಬಾ ಆಶಾದಾಯಕವಾಗಿದ್ದೇವೆ ಎಂದು ಹೇಳಿದ್ದಾರೆ.</p>.<p>ನಾಯಕ ವಿರಾಟ್ ಕೊಹ್ಲಿ ಮತ್ತು ಎಬಿ ಡಿ ವಿಲಿಯರ್ಸ್ ಗುರುವಾರದಂದು ಚೆನ್ನೈನಲ್ಲಿ ಆರ್ಸಿಬಿ ಬಯೋಬಬಲ್ ಅನ್ನು ಸೇರಿಕೊಂಡರು. ಇತ್ತೀಚಿನ ಇಂಗ್ಲೆಂಡ್ ಸರಣಿಯಲ್ಲಿ ಭಾಗವಹಿಸಿದ್ದ ಆಟಗಾರರನ್ನು ಹೊರತುಪಡಿಸಿ ಇತರೆಲ್ಲರೂ ಹೋಟೆಲ್ ಕೊಠಡಿಗಳಲ್ಲಿ ಏಳು ದಿನಗಳ ಪ್ರತ್ಯೇಕವಾಸದಲ್ಲಿರುವುದು ಕಡ್ಡಾಯವಾಗಿದೆ. ಈ ಸಂದರ್ಭದಲ್ಲಿ ಎರಡು ಬಾರಿ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗುವುದು. ಫಲಿತಾಂಶ ನೆಗೆಟಿವ್ ಬಂದರೆ ಮಾತ್ರ ನೆಟ್ಸ್ನಲ್ಲಿ ಅಭ್ಯಾಸ ಮಾಡಲು ಅವಕಾಶವಿರುತ್ತದೆ.</p>.<p>ಐಪಿಎಲ್ 14ನೇ ಆವೃತ್ತಿಗಾಗಿ ಆರ್ಸಿಬಿಯ 11 ಆಟಗಾರರು ಈಗಾಗಲೇ ತರಬೇತಿಯನ್ನು ಆರಂಭಿಸಿದ್ದಾರೆ. ಅಲ್ಲದೆ ಚೊಚ್ಚಲ ಕಿರೀಟ ಗೆಲ್ಲುವ ಗುರಿಯನ್ನಿರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ: </strong>ಈ ಬಾರಿ ವಿಭಿನ್ನವಾಗಿ ಆಯೋಜನೆಯಾಗತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ), ಅದೃಷ್ಟ ಬದಲಾಗುವ ಬಗ್ಗೆ ನಾಯಕ ವಿರಾಟ್ ಕೊಹ್ಲಿ ಆಶಾವಾದ ವ್ಯಕ್ತಪಡಿಸಿದ್ದಾರೆ.</p>.<p>'ಇದು ನಿಜ ಎಂದು ನಂಬಲು ಸಾಧ್ಯವಾಗುತ್ತಿಲ್ಲ. ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಈ ಮಧ್ಯೆ ಸಾಕಷ್ಟು ಕ್ರಿಕೆಟ್ ಆಡಿದ್ದರೂ, ನಾವು ದೂರ ಹೋಗಿದ್ದೆವು ಎಂಬಂತೆ ಭಾಸವಾಗುತ್ತಿಲ್ಲ. ಹೌದು, ಮತ್ತೆ ಭಾರತದಲ್ಲಿ ಆಡಲು ತುಂಬಾನೇ ಉತ್ಸುಕರಾಗಿದ್ದೇವೆ' ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ.</p>.<p>'ಆದರೂ ಈ ಬಾರಿ ಸಂಪೂರ್ಣ ವಿಭಿನ್ನ ರೀತಿಯಲ್ಲಿ ಹಾಗೂ ವಿಭಿನ್ನ ವ್ಯವಸ್ಥೆಯಲ್ಲಿ ಐಪಿಎಲ್ ಆಡಲಾಗುತ್ತದೆ. ನಾನು ತುಂಬಾ ಆಶಾವಾದಿಯಾಗಿದ್ದು, ಈ ಬಾರಿ ಉತ್ತಮ ಭಾವನೆಯನ್ನುಂಟು ಮಾಡಿದೆ' ಎಂದು ನುಡಿದಿದ್ದಾರೆ.</p>.<p>ಇದೇ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಿರುವ ಎಬಿ ಡಿ ವಿಲಿಯರ್ಸ್, ಇದೊಂದು ಸುದೀರ್ಘ ಪ್ರಯಾಣವಾಗಿತ್ತು. ಆರ್ಸಿಬಿಗೆ ಮರಳಲು ತುಂಬಾ ಸಂತೋಷವಾಗುತ್ತಿದೆ. ನಿನ್ನೆಯಷ್ಟೇ ಐಪಿಎಲ್ ಮುಗಿದಂತೆ ಭಾಸವಾಗುತ್ತಿದೆ. ನನಗನಿಸುತ್ತದೆ ಕಳೆದ ಟೂರ್ನಿಯ ಹುಮ್ಮಸ್ಸು ನಮ್ಮೊಂದಿಗಿದ್ದು, ಈ ಬಾರಿಯೂ ಆನಂದಿಸಲಿದ್ದೇವೆ ಎಂದು ಹೇಳಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/sports/cricket/kohli-reaches-chennai-to-join-rcb-squad-to-be-in-quarantine-for-seven-days-818448.html" itemprop="url">IPL-2021| ಚೆನ್ನೈಗೆ ಬಂದಿಳಿದ ವಿರಾಟ್–ಎಬಿಡಿ </a></p>.<p>ಹಳೆಯ ಹೆಸರುಗಳ ಜೊತೆಗೆ ಕೆಲವು ಹೊಸ ಹೆಸರುಗಳು ಕಾಣಿಸಿಕೊಂಡಿದೆ. ಹಿಂದಿನಿಂದಲೂ ಪರಿಚಿತವಾಗಿರುವ ಕೆಲವು ಆಟಗಾರರು ನಮ್ಮೊಂದಿಗಿದ್ದಾರೆ. ಗ್ಲೆನ್ ಮ್ಯಾಕ್ಸ್ವೆಲ್ ಅವರನ್ನು ನಾವೆಲ್ಲರೂ ಐಪಿಎಲ್ನಲ್ಲಿ ನೋಡಿದ್ದೇವೆ. ನಾವೆಲ್ಲರೂ ಜೊತೆಯಾಗಿ ಅನೇಕ ಪಂದ್ಯಗಳನ್ನು ಗೆಲ್ಲಬೇಕಾಗಿದ್ದು, ತುಂಬಾ ಆಶಾದಾಯಕವಾಗಿದ್ದೇವೆ ಎಂದು ಹೇಳಿದ್ದಾರೆ.</p>.<p>ನಾಯಕ ವಿರಾಟ್ ಕೊಹ್ಲಿ ಮತ್ತು ಎಬಿ ಡಿ ವಿಲಿಯರ್ಸ್ ಗುರುವಾರದಂದು ಚೆನ್ನೈನಲ್ಲಿ ಆರ್ಸಿಬಿ ಬಯೋಬಬಲ್ ಅನ್ನು ಸೇರಿಕೊಂಡರು. ಇತ್ತೀಚಿನ ಇಂಗ್ಲೆಂಡ್ ಸರಣಿಯಲ್ಲಿ ಭಾಗವಹಿಸಿದ್ದ ಆಟಗಾರರನ್ನು ಹೊರತುಪಡಿಸಿ ಇತರೆಲ್ಲರೂ ಹೋಟೆಲ್ ಕೊಠಡಿಗಳಲ್ಲಿ ಏಳು ದಿನಗಳ ಪ್ರತ್ಯೇಕವಾಸದಲ್ಲಿರುವುದು ಕಡ್ಡಾಯವಾಗಿದೆ. ಈ ಸಂದರ್ಭದಲ್ಲಿ ಎರಡು ಬಾರಿ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗುವುದು. ಫಲಿತಾಂಶ ನೆಗೆಟಿವ್ ಬಂದರೆ ಮಾತ್ರ ನೆಟ್ಸ್ನಲ್ಲಿ ಅಭ್ಯಾಸ ಮಾಡಲು ಅವಕಾಶವಿರುತ್ತದೆ.</p>.<p>ಐಪಿಎಲ್ 14ನೇ ಆವೃತ್ತಿಗಾಗಿ ಆರ್ಸಿಬಿಯ 11 ಆಟಗಾರರು ಈಗಾಗಲೇ ತರಬೇತಿಯನ್ನು ಆರಂಭಿಸಿದ್ದಾರೆ. ಅಲ್ಲದೆ ಚೊಚ್ಚಲ ಕಿರೀಟ ಗೆಲ್ಲುವ ಗುರಿಯನ್ನಿರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>