<p><strong>ದುಬೈ:</strong> ‘ಪ್ರಸಕ್ತ ಐಪಿಎಲ್ ಟೂರ್ನಿಯಲ್ಲಿ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಬೌಲಿಂಗ್ ಮಾಡದಿರುವುದು ಕೇವಲ ಮುಂಬೈ ಇಂಡಿಯನ್ಸ್ಗೆ ಮಾತ್ರವಲ್ಲ, ಟಿ–20 ವಿಶ್ವಕಪ್ನಲ್ಲಿ ಭಾಗಿಯಾಗಲಿರುವ ಭಾರತ ತಂಡಕ್ಕೂ ದೊಡ್ಡ ಹೊಡೆತ ನೀಡಲಿದೆ’ ಎಂದು ಹಿರಿಯ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.</p>.<p>ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ‘ಹಾರ್ದಿಕ್ ಪಾಂಡ್ಯ ಅವರನ್ನು ಟಿ–20 ವಿಶ್ವಕಪ್ನಲ್ಲಿ ಭಾಗವಹಿಸಲು ಭಾರತ ತಂಡದ ಆಲ್ರೌಂಡರ್ ಆಗಿ ಆಯ್ಕೆ ಮಾಡಲಾಗಿದ್ದು, ಅವರು 5 ಅಥವಾ 6ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿರುವ ಭರವಸೆಯ ಆಟಗಾರ ಎನ್ನಿಸಿದ್ದಾರೆ’ ಎಂದು ಗವಾಸ್ಕರ್ ಹೇಳಿದ್ದಾರೆ.</p>.<p>ಹಾರ್ದಿಕ್ ಪಾಂಡ್ಯ ಅವರನ್ನು ಮುಂಬರುವ ಟಿ–20 ವಿಶ್ವಕಪ್ ತಂಡಕ್ಕೆ ಬಿಸಿಸಿಐ ಆಯ್ಕೆ ಮಾಡಿದೆ. ಆದರೆ, ಇಂಗ್ಲೆಂಡ್ನಲ್ಲಿ ಸರಣಿ ವೇಳೆ ಗಾಯಗೊಂಡಿದ್ದ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಸದ್ಯ ಐಪಿಎಲ್ನಲ್ಲಿ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿದಿರುವ ಹಾರ್ದಿಕ್ ಬೌಲಿಂಗ್ ಮಾಡದಿರುವುದು ಚರ್ಚೆಗೆ ಗ್ರಾಸವಾಗಿದೆ.</p>.<p>ವಿಶ್ವಕಪ್ ಹಿನ್ನೆಲೆಯಲ್ಲಿ ಭಾರತ ತಂಡಕ್ಕೆ ಆಯ್ಕೆಯಾಗಿರುವ ಮುಂಬೈ ಇಂಡಿಯನ್ಸ್ ತಂಡದ ಸೂರ್ಯಕುಮಾರ್ ಯಾದವ್ ಮತ್ತು ಇಶಾನ್ ಕಿಶಾನ್ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಪ್ರಾಂಚೈಸಿ ತಿಳಿಸಿದೆ.</p>.<p>ಸೂರ್ಯಕುಮಾರ್ ಈ ಬಾರಿ ಐಪಿಎಲ್ನಲ್ಲಿ ಆಡಿರುವ 12 ಪಂದ್ಯಗಳಲ್ಲಿ 222 ರನ್ ಗಳಿಸಿದ್ದಾರೆ. ಈ ವರ್ಷದ ಮಾರ್ಚ್ನಲ್ಲಿ ಇಂಗ್ಲೆಂಡ್ ವಿರುದ್ಧ ಸೂರ್ಯ ಕುಮಾರ್ ಅಂತರಾಷ್ಟ್ರೀಯ ಟಿ–20ಗೆ ಪಾದಾರ್ಪಣೆ ಮಾಡಿದ್ದರು. ಜುಲೈನಲ್ಲಿ ಶ್ರೀಲಂಕಾ ವಿರುದ್ಧ ತಮ್ಮ ಮೊದಲ ಏಕದಿನ ಪಂದ್ಯವನ್ನು ಆಡಿದ್ದರು.</p>.<p>ವಿಕೆಟ್ ಕೀಪರ್ ಇಶಾನ್, ಈ ಬಾರಿ ಐಪಿಎಲ್ನಲ್ಲಿ ಆಡಿದ 8 ಪಂದ್ಯಗಳಲ್ಲಿ ಕೇವಲ 107 ರನ್ ಗಳಿಸಿದ್ದಾರೆ.</p>.<p><strong>ಇದನ್ನೂ ಓದಿ... <a href="https://www.prajavani.net/sports/cricket/definitely-not-a-personal-battle-everybody-is-different-ashwin-on-morgan-872872.html" target="_blank">IPL 2021 | ನನಗೆ ದ್ವೇಷವಿಲ್ಲ: ಮಾರ್ಗನ್ ಆರೋಪಕ್ಕೆ ಅಶ್ವಿನ್ ಸ್ಪಷ್ಟನೆ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದುಬೈ:</strong> ‘ಪ್ರಸಕ್ತ ಐಪಿಎಲ್ ಟೂರ್ನಿಯಲ್ಲಿ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಬೌಲಿಂಗ್ ಮಾಡದಿರುವುದು ಕೇವಲ ಮುಂಬೈ ಇಂಡಿಯನ್ಸ್ಗೆ ಮಾತ್ರವಲ್ಲ, ಟಿ–20 ವಿಶ್ವಕಪ್ನಲ್ಲಿ ಭಾಗಿಯಾಗಲಿರುವ ಭಾರತ ತಂಡಕ್ಕೂ ದೊಡ್ಡ ಹೊಡೆತ ನೀಡಲಿದೆ’ ಎಂದು ಹಿರಿಯ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.</p>.<p>ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ‘ಹಾರ್ದಿಕ್ ಪಾಂಡ್ಯ ಅವರನ್ನು ಟಿ–20 ವಿಶ್ವಕಪ್ನಲ್ಲಿ ಭಾಗವಹಿಸಲು ಭಾರತ ತಂಡದ ಆಲ್ರೌಂಡರ್ ಆಗಿ ಆಯ್ಕೆ ಮಾಡಲಾಗಿದ್ದು, ಅವರು 5 ಅಥವಾ 6ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿರುವ ಭರವಸೆಯ ಆಟಗಾರ ಎನ್ನಿಸಿದ್ದಾರೆ’ ಎಂದು ಗವಾಸ್ಕರ್ ಹೇಳಿದ್ದಾರೆ.</p>.<p>ಹಾರ್ದಿಕ್ ಪಾಂಡ್ಯ ಅವರನ್ನು ಮುಂಬರುವ ಟಿ–20 ವಿಶ್ವಕಪ್ ತಂಡಕ್ಕೆ ಬಿಸಿಸಿಐ ಆಯ್ಕೆ ಮಾಡಿದೆ. ಆದರೆ, ಇಂಗ್ಲೆಂಡ್ನಲ್ಲಿ ಸರಣಿ ವೇಳೆ ಗಾಯಗೊಂಡಿದ್ದ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಸದ್ಯ ಐಪಿಎಲ್ನಲ್ಲಿ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿದಿರುವ ಹಾರ್ದಿಕ್ ಬೌಲಿಂಗ್ ಮಾಡದಿರುವುದು ಚರ್ಚೆಗೆ ಗ್ರಾಸವಾಗಿದೆ.</p>.<p>ವಿಶ್ವಕಪ್ ಹಿನ್ನೆಲೆಯಲ್ಲಿ ಭಾರತ ತಂಡಕ್ಕೆ ಆಯ್ಕೆಯಾಗಿರುವ ಮುಂಬೈ ಇಂಡಿಯನ್ಸ್ ತಂಡದ ಸೂರ್ಯಕುಮಾರ್ ಯಾದವ್ ಮತ್ತು ಇಶಾನ್ ಕಿಶಾನ್ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಪ್ರಾಂಚೈಸಿ ತಿಳಿಸಿದೆ.</p>.<p>ಸೂರ್ಯಕುಮಾರ್ ಈ ಬಾರಿ ಐಪಿಎಲ್ನಲ್ಲಿ ಆಡಿರುವ 12 ಪಂದ್ಯಗಳಲ್ಲಿ 222 ರನ್ ಗಳಿಸಿದ್ದಾರೆ. ಈ ವರ್ಷದ ಮಾರ್ಚ್ನಲ್ಲಿ ಇಂಗ್ಲೆಂಡ್ ವಿರುದ್ಧ ಸೂರ್ಯ ಕುಮಾರ್ ಅಂತರಾಷ್ಟ್ರೀಯ ಟಿ–20ಗೆ ಪಾದಾರ್ಪಣೆ ಮಾಡಿದ್ದರು. ಜುಲೈನಲ್ಲಿ ಶ್ರೀಲಂಕಾ ವಿರುದ್ಧ ತಮ್ಮ ಮೊದಲ ಏಕದಿನ ಪಂದ್ಯವನ್ನು ಆಡಿದ್ದರು.</p>.<p>ವಿಕೆಟ್ ಕೀಪರ್ ಇಶಾನ್, ಈ ಬಾರಿ ಐಪಿಎಲ್ನಲ್ಲಿ ಆಡಿದ 8 ಪಂದ್ಯಗಳಲ್ಲಿ ಕೇವಲ 107 ರನ್ ಗಳಿಸಿದ್ದಾರೆ.</p>.<p><strong>ಇದನ್ನೂ ಓದಿ... <a href="https://www.prajavani.net/sports/cricket/definitely-not-a-personal-battle-everybody-is-different-ashwin-on-morgan-872872.html" target="_blank">IPL 2021 | ನನಗೆ ದ್ವೇಷವಿಲ್ಲ: ಮಾರ್ಗನ್ ಆರೋಪಕ್ಕೆ ಅಶ್ವಿನ್ ಸ್ಪಷ್ಟನೆ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>