<p>ಚೆನ್ನೈ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ ಪ್ರಭಾವಿ ದಾಳಿ ಸಂಘಟಿಸಿರುವ ಮೊಹಮ್ಮದ್ ಸಿರಾಜ್ ಪ್ರದರ್ಶನವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ವಿಶೇಷವಾಗಿ ಕೊಂಡಾಡಿದ್ದಾರೆ.</p>.<p>205 ರನ್ಗಳ ಬೃಹತ್ ಮೊತ್ತ ಬೆನ್ನತ್ತಿದ್ದ ಕೋಲ್ಕತ್ತ ಗೆಲುವಿಗೆ ಅಂತಿಮ ಮೂರು ಓವರ್ಗಳಲ್ಲಿ 59 ರನ್ಗಳ ಅಗತ್ಯವಿತ್ತು. ಆಗಲೇ ಯಜುವೇಂದ್ರ ಚಾಹಲ್ ಓವರ್ವೊಂದರಲ್ಲಿ 20 ರನ್ ಚಚ್ಚಿದ ಆ್ಯಂಡ್ರೆ ರಸೆಲ್, ಅಪಾಯಕಾರಿಯಾಗಿ ಮುನ್ನುಗ್ಗುತ್ತಿದ್ದರು.</p>.<p>ಈ ನಡುವೆ 19ನೇ ಓವರ್ ಎಸೆದ ಮೊಹಮ್ಮದ್ ಸಿರಾಜ್, ರಸೆಲ್ ಅಬ್ಬರಕ್ಕೆ ಕಡಿವಾಣ ಹಾಕಿದರು. ಅಲ್ಲದೆ ಕೇವಲ ಒಂದು ರನ್ ಮಾತ್ರ ಬಿಟ್ಟುಕೊಟ್ಟರು. ಪದೇ ಪದೇ ಸಿಂಗಲ್ ನಿರಾಕರಿಸಿದರೂ ರಸೆಲ್ ಯೋಜನೆ ಫಲಿಸಲಿಲ್ಲ. ಅಂತಿಮ ಎಸೆತದಲ್ಲಿ ಒಂಟಿ ರನ್ ಮಾತ್ರ ಗಳಿಸಿದ್ದರು.</p>.<p>ಇದನ್ನೂ ಓದಿ:<a href="https://www.prajavani.net/sports/cricket/andre-russell-not-interested-to-run-out-kyle-jamieson-despite-easry-opportunity-taken-823681.html" itemprop="url">IPL 2021: ಸುಲಭ ರನೌಟ್ ಅವಕಾಶ ಕೈಚೆಲ್ಲಿದ ಆ್ಯಂಡ್ರೆ ರಸೆಲ್ </a><br /><br />ಈ ಕುರಿತು ಪಂದ್ಯದ ಬಳಿಕ ಪ್ರತಿಕ್ರಿಯೆ ನೀಡಿರುವ ನಾಯಕ ವಿರಾಟ್ ಕೊಹ್ಲಿ, ಆಸ್ಟ್ರೇಲಿಯಾ ಪ್ರವಾಸದ ಬಳಿಕ ಮೊಹಮ್ಮದ್ ಸಿರಾಜ್ ಸಂಪೂರ್ಣ ವಿಭಿನ್ನ ಬೌಲರ್ ಆಗಿ ಮಾರ್ಪಟ್ಟಿದ್ದಾರೆ. ರಸೆಲ್ ವಿರುದ್ಧ ಸಿರಾಜ್ ಓವರ್ ಅತ್ಯುತ್ತಮವಾಗಿತ್ತು. ಎದುರಾಳಿಗಳಿಗೆ ಗೆಲುವಿನ ಅವಕಾಶವನ್ನು ತಡೆಹಿಡಿದರು ಎಂದು ಶ್ಲಾಘಿಸಿದ್ದಾರೆ.</p>.<p>ಹರ್ಷಲ್ ಪಟೇಲ್ ಹಾಗೂ ಕೈಲ್ ಜೇಮಿಸನ್ ಸಹ ಅತ್ಯುತ್ತಮ ದಾಳಿ ಸಂಘಟಿಸಿದರು ಎಂದು ವಿರಾಟ್ ಹೇಳಿದರು.</p>.<p>ಕಳೆದ ಆಸ್ಟ್ರೇಲಿಯಾ ಪ್ರವಾಸದಲ್ಲಿ ಟೆಸ್ಟ್ ಸರಣಿಯಲ್ಲಿ ಭಾರತದ ಐತಿಹಾಸಿಕ ಸರಣಿ ಗೆಲುವಿನಲ್ಲಿ ಮೊಹಮ್ಮದ್ ಸಿರಾಜ್ ನಿರ್ಣಾಯಕ ಪಾತ್ರ ವಹಿಸಿದ್ದರು. ಅಲ್ಲದೆ ಆಸೀಸ್ ನೆಲದಲ್ಲಿ ಟೆಸ್ಟ್ ಕ್ರಿಕೆಟ್ನಲ್ಲಿ ಚೊಚ್ಚಲ ಐದು ವಿಕೆಟ್ ಸಾಧನೆಯನ್ನು ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚೆನ್ನೈ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ ಪ್ರಭಾವಿ ದಾಳಿ ಸಂಘಟಿಸಿರುವ ಮೊಹಮ್ಮದ್ ಸಿರಾಜ್ ಪ್ರದರ್ಶನವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ವಿಶೇಷವಾಗಿ ಕೊಂಡಾಡಿದ್ದಾರೆ.</p>.<p>205 ರನ್ಗಳ ಬೃಹತ್ ಮೊತ್ತ ಬೆನ್ನತ್ತಿದ್ದ ಕೋಲ್ಕತ್ತ ಗೆಲುವಿಗೆ ಅಂತಿಮ ಮೂರು ಓವರ್ಗಳಲ್ಲಿ 59 ರನ್ಗಳ ಅಗತ್ಯವಿತ್ತು. ಆಗಲೇ ಯಜುವೇಂದ್ರ ಚಾಹಲ್ ಓವರ್ವೊಂದರಲ್ಲಿ 20 ರನ್ ಚಚ್ಚಿದ ಆ್ಯಂಡ್ರೆ ರಸೆಲ್, ಅಪಾಯಕಾರಿಯಾಗಿ ಮುನ್ನುಗ್ಗುತ್ತಿದ್ದರು.</p>.<p>ಈ ನಡುವೆ 19ನೇ ಓವರ್ ಎಸೆದ ಮೊಹಮ್ಮದ್ ಸಿರಾಜ್, ರಸೆಲ್ ಅಬ್ಬರಕ್ಕೆ ಕಡಿವಾಣ ಹಾಕಿದರು. ಅಲ್ಲದೆ ಕೇವಲ ಒಂದು ರನ್ ಮಾತ್ರ ಬಿಟ್ಟುಕೊಟ್ಟರು. ಪದೇ ಪದೇ ಸಿಂಗಲ್ ನಿರಾಕರಿಸಿದರೂ ರಸೆಲ್ ಯೋಜನೆ ಫಲಿಸಲಿಲ್ಲ. ಅಂತಿಮ ಎಸೆತದಲ್ಲಿ ಒಂಟಿ ರನ್ ಮಾತ್ರ ಗಳಿಸಿದ್ದರು.</p>.<p>ಇದನ್ನೂ ಓದಿ:<a href="https://www.prajavani.net/sports/cricket/andre-russell-not-interested-to-run-out-kyle-jamieson-despite-easry-opportunity-taken-823681.html" itemprop="url">IPL 2021: ಸುಲಭ ರನೌಟ್ ಅವಕಾಶ ಕೈಚೆಲ್ಲಿದ ಆ್ಯಂಡ್ರೆ ರಸೆಲ್ </a><br /><br />ಈ ಕುರಿತು ಪಂದ್ಯದ ಬಳಿಕ ಪ್ರತಿಕ್ರಿಯೆ ನೀಡಿರುವ ನಾಯಕ ವಿರಾಟ್ ಕೊಹ್ಲಿ, ಆಸ್ಟ್ರೇಲಿಯಾ ಪ್ರವಾಸದ ಬಳಿಕ ಮೊಹಮ್ಮದ್ ಸಿರಾಜ್ ಸಂಪೂರ್ಣ ವಿಭಿನ್ನ ಬೌಲರ್ ಆಗಿ ಮಾರ್ಪಟ್ಟಿದ್ದಾರೆ. ರಸೆಲ್ ವಿರುದ್ಧ ಸಿರಾಜ್ ಓವರ್ ಅತ್ಯುತ್ತಮವಾಗಿತ್ತು. ಎದುರಾಳಿಗಳಿಗೆ ಗೆಲುವಿನ ಅವಕಾಶವನ್ನು ತಡೆಹಿಡಿದರು ಎಂದು ಶ್ಲಾಘಿಸಿದ್ದಾರೆ.</p>.<p>ಹರ್ಷಲ್ ಪಟೇಲ್ ಹಾಗೂ ಕೈಲ್ ಜೇಮಿಸನ್ ಸಹ ಅತ್ಯುತ್ತಮ ದಾಳಿ ಸಂಘಟಿಸಿದರು ಎಂದು ವಿರಾಟ್ ಹೇಳಿದರು.</p>.<p>ಕಳೆದ ಆಸ್ಟ್ರೇಲಿಯಾ ಪ್ರವಾಸದಲ್ಲಿ ಟೆಸ್ಟ್ ಸರಣಿಯಲ್ಲಿ ಭಾರತದ ಐತಿಹಾಸಿಕ ಸರಣಿ ಗೆಲುವಿನಲ್ಲಿ ಮೊಹಮ್ಮದ್ ಸಿರಾಜ್ ನಿರ್ಣಾಯಕ ಪಾತ್ರ ವಹಿಸಿದ್ದರು. ಅಲ್ಲದೆ ಆಸೀಸ್ ನೆಲದಲ್ಲಿ ಟೆಸ್ಟ್ ಕ್ರಿಕೆಟ್ನಲ್ಲಿ ಚೊಚ್ಚಲ ಐದು ವಿಕೆಟ್ ಸಾಧನೆಯನ್ನು ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>