'ಸತತ ವೈಫಲ್ಯಗಳ ಬಳಿಕ ನಾನು ವಿರಾಟ್ ಭಾಯ್, ಹಾರ್ದಿಕ್ ಭಾಯ್ (ಹಾರ್ದಿಕ್ ಪಾಂಡ್ಯ) ಹಾಗೂ ಕೆ.ಪಿ (ಕೀರನ್ ಪೊಲಾರ್ಡ್) ಅವರಲ್ಲಿ ಸಮಾಲೋಚನೆ ನಡೆಸಿದ್ದೇನೆ. ಅವರೆಲ್ಲರು ನನಗೆ ಆತ್ಮವಿಶ್ವಾಸವನ್ನು ತುಂಬಿದರು. ವಿಷಯವನ್ನು ಸರಳವಾಗಿಟ್ಟುಕೊಂಡು ಮುಂದಿನ ಪಂದ್ಯದತ್ತ ಗಮನಹರಿಸಲು ಸೂಚಿಸಿದರು. ಆತ್ಮವಿಶ್ವಾಸ ಮರಳಿ ಪಡೆಯಲು ನನ್ನ ಹಳೆಯ ವಿಡಿಯೊಗಳನ್ನು ವೀಕ್ಷಿಸಿದ್ದೇನೆ' ಎಂದು ವಿವರಿಸಿದರು.