<p><strong>ಅಬುಧಾಬಿ:</strong> ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಭಾನುವಾರ ನಡೆಯಲಿರುವ ಐಪಿಎಲ್ ಪಂದ್ಯದಲ್ಲಿ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಆಡುವ ಸಾಧ್ಯತೆಯಿದೆ ಎಂದು ಮುಂಬೈ ಇಂಡಿಯನ್ಸ್ ಕ್ರಿಕೆಟ್ ಕಾರ್ಯಾಚರಣೆನಿರ್ದೇಶಕ ಜಹೀರ್ ಖಾನ್ ಸುಳಿವು ನೀಡಿದ್ದಾರೆ.</p>.<p>ಫಿಟ್ನೆಸ್ ಸಮಸ್ಯೆಯಿಂದಾಗಿ ಹಾರ್ದಿಕ್ ಪಾಂಡ್ಯ ಮೊದಲೆರೆಡು ಪಂದ್ಯಗಳಲ್ಲಿ ಆಡಿರಲಿಲ್ಲ. ಇದು ವ್ಯಾಪಕ ಟೀಕೆಗೂ ಗ್ರಾಸವಾಗಿತ್ತು.</p>.<p>ಸಂಪೂರ್ಣ ದೈಹಿಕ ಸಾಮರ್ಥ್ಯ ಇಲ್ಲದ ಆಟಗಾರನನ್ನು ಟ್ವೆಂಟಿ-20 ವಿಶ್ವಕಪ್ಗಾಗಿ ಭಾರತ ತಂಡಕ್ಕೆ ಆರಿಸಿದ್ದು ಏಕೆ ಎಂದು ಭಾರತದ ಮಾಜಿ ಕ್ರಿಕೆಟಿಗರೊಬ್ಬರು ಟೀಕೆ ಮಾಡಿದ್ದರು.</p>.<p>ಈಗ ಹಾರ್ದಿಕ್ ಪಾಂಡ್ಯ ಫಿಟ್ನೆಸ್ ಬಗ್ಗೆ ಜಹೀರ್ ಖಾನ್ ಮಾಹಿತಿ ನೀಡಿದ್ದಾರೆ. ಚೆನ್ನೈ ಹಾಗೂ ಕೆಕೆಆರ್ ವಿರುದ್ಧದ ಪಂದ್ಯಗಳಿಗೆ ಹಾರ್ದಿಕ್ ಅಲಭ್ಯರಾಗಿದ್ದರು. ಆದರೆ ಬೆಂಗಳೂರು ವಿರುದ್ಧ ಆಡಲು ಸಿದ್ಧರಾಗಿದ್ದಾರೆ ಎಂದು ಜಹೀರ್ ತಿಳಿಸಿದ್ದಾರೆ.</p>.<p>ಮುಂಬೈ ಪಾಲಿಗೆ ತಂಡದ ಸಮತೋಲನ ಕಾಪಾಡಿಕೊಳ್ಳುವುದು ಅತಿ ಮುಖ್ಯವೆನಿಸಿದೆ. ಸತತ ಎರಡು ಸೋಲಿನಿಂದಾಗಿ ಕಂಗೆಟ್ಟಿರುವ ಮುಂಬೈಗೆ ಹಾರ್ದಿಕ್ ಆಗಮನದೊಂದಿಗೆ ಬಲವೃದ್ಧಿಸಿಕೊಳ್ಳಲಿದೆ.</p>.<p>ಹಾರ್ದಿಕ್ ಪಾಂಡ್ಯ ತರಬೇತಿಯಲ್ಲಿ ಭಾಗವಹಿಸಿದ್ದಾರೆ. ಅವರು ತಂಡದ ಅಮೂಲ್ಯ ಆಟಗಾರ. ಬ್ಯಾಟಿಂಗ್ ಹಾಗೂ ಬೌಲಿಂಗ್ನಲ್ಲಿ ಮಹತ್ತರ ಕೊಡುಗೆಯನ್ನು ನೀಡಬಲ್ಲರು ಎಂದು ಜಹೀರ್ ವಿವರಿಸಿದ್ದಾರೆ.</p>.<p>ಮುಂಬರುವ ಟಿ20 ವಿಶ್ವಕಪ್ ಹಿನ್ನೆಲೆಯಲ್ಲಿ ಹಾರ್ದಿಕ್ ಪಾಂಡ್ಯ ಫಿಟ್ನೆಸ್ ಮರಳಿ ಪಡೆಯುವುದು ಅತಿ ಮಹತ್ವದೆನಿಸಿದೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಬುಧಾಬಿ:</strong> ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಭಾನುವಾರ ನಡೆಯಲಿರುವ ಐಪಿಎಲ್ ಪಂದ್ಯದಲ್ಲಿ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಆಡುವ ಸಾಧ್ಯತೆಯಿದೆ ಎಂದು ಮುಂಬೈ ಇಂಡಿಯನ್ಸ್ ಕ್ರಿಕೆಟ್ ಕಾರ್ಯಾಚರಣೆನಿರ್ದೇಶಕ ಜಹೀರ್ ಖಾನ್ ಸುಳಿವು ನೀಡಿದ್ದಾರೆ.</p>.<p>ಫಿಟ್ನೆಸ್ ಸಮಸ್ಯೆಯಿಂದಾಗಿ ಹಾರ್ದಿಕ್ ಪಾಂಡ್ಯ ಮೊದಲೆರೆಡು ಪಂದ್ಯಗಳಲ್ಲಿ ಆಡಿರಲಿಲ್ಲ. ಇದು ವ್ಯಾಪಕ ಟೀಕೆಗೂ ಗ್ರಾಸವಾಗಿತ್ತು.</p>.<p>ಸಂಪೂರ್ಣ ದೈಹಿಕ ಸಾಮರ್ಥ್ಯ ಇಲ್ಲದ ಆಟಗಾರನನ್ನು ಟ್ವೆಂಟಿ-20 ವಿಶ್ವಕಪ್ಗಾಗಿ ಭಾರತ ತಂಡಕ್ಕೆ ಆರಿಸಿದ್ದು ಏಕೆ ಎಂದು ಭಾರತದ ಮಾಜಿ ಕ್ರಿಕೆಟಿಗರೊಬ್ಬರು ಟೀಕೆ ಮಾಡಿದ್ದರು.</p>.<p>ಈಗ ಹಾರ್ದಿಕ್ ಪಾಂಡ್ಯ ಫಿಟ್ನೆಸ್ ಬಗ್ಗೆ ಜಹೀರ್ ಖಾನ್ ಮಾಹಿತಿ ನೀಡಿದ್ದಾರೆ. ಚೆನ್ನೈ ಹಾಗೂ ಕೆಕೆಆರ್ ವಿರುದ್ಧದ ಪಂದ್ಯಗಳಿಗೆ ಹಾರ್ದಿಕ್ ಅಲಭ್ಯರಾಗಿದ್ದರು. ಆದರೆ ಬೆಂಗಳೂರು ವಿರುದ್ಧ ಆಡಲು ಸಿದ್ಧರಾಗಿದ್ದಾರೆ ಎಂದು ಜಹೀರ್ ತಿಳಿಸಿದ್ದಾರೆ.</p>.<p>ಮುಂಬೈ ಪಾಲಿಗೆ ತಂಡದ ಸಮತೋಲನ ಕಾಪಾಡಿಕೊಳ್ಳುವುದು ಅತಿ ಮುಖ್ಯವೆನಿಸಿದೆ. ಸತತ ಎರಡು ಸೋಲಿನಿಂದಾಗಿ ಕಂಗೆಟ್ಟಿರುವ ಮುಂಬೈಗೆ ಹಾರ್ದಿಕ್ ಆಗಮನದೊಂದಿಗೆ ಬಲವೃದ್ಧಿಸಿಕೊಳ್ಳಲಿದೆ.</p>.<p>ಹಾರ್ದಿಕ್ ಪಾಂಡ್ಯ ತರಬೇತಿಯಲ್ಲಿ ಭಾಗವಹಿಸಿದ್ದಾರೆ. ಅವರು ತಂಡದ ಅಮೂಲ್ಯ ಆಟಗಾರ. ಬ್ಯಾಟಿಂಗ್ ಹಾಗೂ ಬೌಲಿಂಗ್ನಲ್ಲಿ ಮಹತ್ತರ ಕೊಡುಗೆಯನ್ನು ನೀಡಬಲ್ಲರು ಎಂದು ಜಹೀರ್ ವಿವರಿಸಿದ್ದಾರೆ.</p>.<p>ಮುಂಬರುವ ಟಿ20 ವಿಶ್ವಕಪ್ ಹಿನ್ನೆಲೆಯಲ್ಲಿ ಹಾರ್ದಿಕ್ ಪಾಂಡ್ಯ ಫಿಟ್ನೆಸ್ ಮರಳಿ ಪಡೆಯುವುದು ಅತಿ ಮಹತ್ವದೆನಿಸಿದೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>