<p>ನವದೆಹಲಿ: ಐಪಿಎಲ್ ಫ್ರಾಂಚೈಸ್ ಕೋಲ್ಕತ್ತ ನೈಟ್ ರೈಡರ್ಸ್ ತಂಡದ ಪ್ಯಾಟ್ ಕಮಿನ್ಸ್ ಅವರು ಕೋವಿಡ್ ವಿರುದ್ಧದ ಹೋರಾಟಕ್ಕೆ ಪಿಎಂ ಕೇರ್ಸ್ ನಿಧಿಗೆ ₹ 37 ಲಕ್ಷ ದೇಣಿಗೆ ನೀಡಿದ್ದಾರೆ. ಕೋವಿಡ್ ರೋಗಿಗಳಿಗೆ ಆಮ್ಲಜನಕ ಒದಗಿಸಲು ಅವರು ಈ ನೆರವು ನೀಡಿದ್ದಾರೆ. ಬಿಕ್ಕಟ್ಟಿನ ದಿನಗಳಲ್ಲಿ, ಕೆಲವು ಗಂಟೆಗಳ ಮನರಂಜನೆ ಒದಗಿಸುವ ಐಪಿಎಲ್ ಟೂರ್ನಿ ಮುಂದುವರಿಯಲಿ ಎಂದೂ ಅವರು ಹೇಳಿದ್ದಾರೆ.</p>.<p>ಈ ಕುರಿತು ಟ್ವೀಟ್ ಮಾಡಿರುವ ಆಸ್ಟ್ರೇಲಿಯಾದ ಕಮಿನ್ಸ್ ‘ ಆಟಗಾರರಾಗಿ ನಾವು ಲಕ್ಷಾಂತರ ಜನರನ್ನು ತಲುಪಲು ಅನುವು ಮಾಡಿಕೊಡುವ ವೇದಿಕೆಯನ್ನು ಹೊಂದಿದ್ದೇವೆ. ಅದನ್ನು ಒಳ್ಳೆಯದಕ್ಕಾಗಿ ಬಳಸಿಕೊಳ್ಳಬೇಕು. ಇದನ್ನು ಗಮನದಲ್ಲಿಟ್ಟುಕೊಂಡು ನಾನು ಪಿಎಂ ಕೇರ್ಸ್ ನಿಧಿಗೆ ದೇಣಿಗೆ ನೀಡಿದ್ದೇನೆ‘ ಎಂದಿದ್ದಾರೆ.</p>.<p>‘ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಸಂದರ್ಭದಲ್ಲಿ ಐಪಿಎಲ್ ಟೂರ್ನಿ ನಡೆಸುವುದು ಸೂಕ್ತವೇ ಎಂಬ ಚರ್ಚೆಗಳು ನಡೆದಿವೆ. ಆದರೆ ಲಾಕ್ಡೌನಂತಹ ಕಷ್ಟದ ಸಂದರ್ಭದಲ್ಲಿ ಪ್ರತಿದಿನ ಕೆಲವು ಗಂಟೆಗಳ ಸಂತೋಷವನ್ನು ಐಪಿಎಲ್ ನೀಡುತ್ತದೆ ಎಂಬ ದೃಷ್ಟಿಕೋನವನ್ನು ಭಾರತ ಸರ್ಕಾರ ಹೊಂದಿದೆ‘ ಎಂದು ಕಮಿನ್ಸ್ ಹೇಳಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/sports/cricket/covid-19-this-is-a-good-time-to-continue-the-ipl-or-restart-the-psl-says-shoaib-akhtar-825722.html" itemprop="url">ಐಪಿಎಲ್ ರದ್ದುಗೊಳಿಸಿ; ಆ ದುಡ್ಡು ಆಮ್ಲಜನಕ ಸಿಲಿಂಡರ್ ಖರೀದಿಸಲು ನೀಡಿ: ಅಖ್ತರ್ </a><br /><br />ಈ ಸಂಕಷ್ಟದ ಸಯಮದಲ್ಲಿ ಮಾನವೀಯತೆ ಮೆರೆದ ಪ್ಯಾಟ್ ಕಮಿನ್ಸ್ ಅವರು ಅಭಿಮಾನಿಗಳ ಹೃದಯವನ್ನು ಗೆದ್ದಿದ್ದಾರೆ.</p>.<p>ಏತನ್ಮಧ್ಯೆ ಕೋವಿಡ್ ಭೀತಿ ಹಿನ್ನೆಲೆಯಲ್ಲಿ ವೈಯಕ್ತಿಕ ಕಾರಣಗಳನ್ನು ನೀಡಿರುವ ಆಸ್ಟ್ರೇಲಿಯಾದ ಮೂವರು ಆಟಗಾರರು ಐಪಿಎಲ್ನಿಂದ ಹಿಂದೆ ಸರಿದಿದ್ದಾರೆ. ಆರ್ಸಿಬಿಯ ಕೇನ್ ರಿಚರ್ಡ್ಸನ್ ಹಾಗೂ ಆ್ಯಡಂ ಜಂಪಾ ಮತ್ತು ರಾಜಸ್ಥಾನ ತಂಡದ ಆಂಡ್ರ್ಯ ಟೈ, ತವರಿಗೆ ಹಿಂತಿರುಗಲು ನಿರ್ಧರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ: ಐಪಿಎಲ್ ಫ್ರಾಂಚೈಸ್ ಕೋಲ್ಕತ್ತ ನೈಟ್ ರೈಡರ್ಸ್ ತಂಡದ ಪ್ಯಾಟ್ ಕಮಿನ್ಸ್ ಅವರು ಕೋವಿಡ್ ವಿರುದ್ಧದ ಹೋರಾಟಕ್ಕೆ ಪಿಎಂ ಕೇರ್ಸ್ ನಿಧಿಗೆ ₹ 37 ಲಕ್ಷ ದೇಣಿಗೆ ನೀಡಿದ್ದಾರೆ. ಕೋವಿಡ್ ರೋಗಿಗಳಿಗೆ ಆಮ್ಲಜನಕ ಒದಗಿಸಲು ಅವರು ಈ ನೆರವು ನೀಡಿದ್ದಾರೆ. ಬಿಕ್ಕಟ್ಟಿನ ದಿನಗಳಲ್ಲಿ, ಕೆಲವು ಗಂಟೆಗಳ ಮನರಂಜನೆ ಒದಗಿಸುವ ಐಪಿಎಲ್ ಟೂರ್ನಿ ಮುಂದುವರಿಯಲಿ ಎಂದೂ ಅವರು ಹೇಳಿದ್ದಾರೆ.</p>.<p>ಈ ಕುರಿತು ಟ್ವೀಟ್ ಮಾಡಿರುವ ಆಸ್ಟ್ರೇಲಿಯಾದ ಕಮಿನ್ಸ್ ‘ ಆಟಗಾರರಾಗಿ ನಾವು ಲಕ್ಷಾಂತರ ಜನರನ್ನು ತಲುಪಲು ಅನುವು ಮಾಡಿಕೊಡುವ ವೇದಿಕೆಯನ್ನು ಹೊಂದಿದ್ದೇವೆ. ಅದನ್ನು ಒಳ್ಳೆಯದಕ್ಕಾಗಿ ಬಳಸಿಕೊಳ್ಳಬೇಕು. ಇದನ್ನು ಗಮನದಲ್ಲಿಟ್ಟುಕೊಂಡು ನಾನು ಪಿಎಂ ಕೇರ್ಸ್ ನಿಧಿಗೆ ದೇಣಿಗೆ ನೀಡಿದ್ದೇನೆ‘ ಎಂದಿದ್ದಾರೆ.</p>.<p>‘ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಸಂದರ್ಭದಲ್ಲಿ ಐಪಿಎಲ್ ಟೂರ್ನಿ ನಡೆಸುವುದು ಸೂಕ್ತವೇ ಎಂಬ ಚರ್ಚೆಗಳು ನಡೆದಿವೆ. ಆದರೆ ಲಾಕ್ಡೌನಂತಹ ಕಷ್ಟದ ಸಂದರ್ಭದಲ್ಲಿ ಪ್ರತಿದಿನ ಕೆಲವು ಗಂಟೆಗಳ ಸಂತೋಷವನ್ನು ಐಪಿಎಲ್ ನೀಡುತ್ತದೆ ಎಂಬ ದೃಷ್ಟಿಕೋನವನ್ನು ಭಾರತ ಸರ್ಕಾರ ಹೊಂದಿದೆ‘ ಎಂದು ಕಮಿನ್ಸ್ ಹೇಳಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/sports/cricket/covid-19-this-is-a-good-time-to-continue-the-ipl-or-restart-the-psl-says-shoaib-akhtar-825722.html" itemprop="url">ಐಪಿಎಲ್ ರದ್ದುಗೊಳಿಸಿ; ಆ ದುಡ್ಡು ಆಮ್ಲಜನಕ ಸಿಲಿಂಡರ್ ಖರೀದಿಸಲು ನೀಡಿ: ಅಖ್ತರ್ </a><br /><br />ಈ ಸಂಕಷ್ಟದ ಸಯಮದಲ್ಲಿ ಮಾನವೀಯತೆ ಮೆರೆದ ಪ್ಯಾಟ್ ಕಮಿನ್ಸ್ ಅವರು ಅಭಿಮಾನಿಗಳ ಹೃದಯವನ್ನು ಗೆದ್ದಿದ್ದಾರೆ.</p>.<p>ಏತನ್ಮಧ್ಯೆ ಕೋವಿಡ್ ಭೀತಿ ಹಿನ್ನೆಲೆಯಲ್ಲಿ ವೈಯಕ್ತಿಕ ಕಾರಣಗಳನ್ನು ನೀಡಿರುವ ಆಸ್ಟ್ರೇಲಿಯಾದ ಮೂವರು ಆಟಗಾರರು ಐಪಿಎಲ್ನಿಂದ ಹಿಂದೆ ಸರಿದಿದ್ದಾರೆ. ಆರ್ಸಿಬಿಯ ಕೇನ್ ರಿಚರ್ಡ್ಸನ್ ಹಾಗೂ ಆ್ಯಡಂ ಜಂಪಾ ಮತ್ತು ರಾಜಸ್ಥಾನ ತಂಡದ ಆಂಡ್ರ್ಯ ಟೈ, ತವರಿಗೆ ಹಿಂತಿರುಗಲು ನಿರ್ಧರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>