<p><strong>ದುಬೈ:</strong> ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬಯೋಬಬಲ್ನಿಂದ ಶ್ರೀಲಂಕಾದ ಇಬ್ಬರು ಆಟಗಾರರನ್ನು ಬಿಡುಗಡೆಗೊಳಿಸಲಾಗಿದೆ.</p>.<p>ಮುಂಬರುವ ಟ್ವೆಂಟಿ-20 ವಿಶ್ವಕಪ್ ಅರ್ಹತಾ ಸುತ್ತಿನಲ್ಲಿ ಶ್ರೀಲಂಕಾ ಭಾಗವಹಿಸಲಿರುವುದರಿಂದ ವನಿಂದು ಹಸರಂಗ ಹಾಗೂ ದುಶ್ಮಂತ ಚಮೀರ ಅವರಿಗೆ ರಾಷ್ಟ್ರೀಯ ತಂಡಕ್ಕೆ ಸೇರಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.</p>.<p>ಇದನ್ನೂ ಓದಿ:<a href="https://www.prajavani.net/sports/cricket/ipl-cricket-dc-vs-csk-virat-kohli-praises-ms-dhoni-says-king-is-back-the-greatest-finisher-ever-in-874592.html" itemprop="url">‘ಕಿಂಗ್ ಈಸ್ ಬ್ಯಾಕ್’: ಧೋನಿ ಅದ್ಭುತ ಫಿನಿಷರ್ ಎಂದು ಹಾಡಿಹೊಗಳಿದ ವಿರಾಟ್ ಕೊಹ್ಲಿ </a></p>.<p>ಇದರೊಂದಿಗೆ ಐಪಿಎಲ್ ಪ್ಲೇ-ಆಫ್ ಹಂತದಲ್ಲಿ ಆರ್ಸಿಬಿ ಸೇವೆಗೆ ಅಲಭ್ಯರಾಗಿದ್ದಾರೆ. ಯುಎಇನಲ್ಲಿ ನಡೆಯುತ್ತಿರುವ ಎರಡನೇ ಹಂತದ ಟೂರ್ನಿಗಾಗಿ ಆಸ್ಟ್ರೇಲಿಯಾದ ಆ್ಯಡಂ ಜಂಪಾ ಹಾಗೂ ಡೇನಿಯಲ್ ಸ್ಯಾಮ್ಸ್ ಸ್ಥಾನಕ್ಕೆಹಸರಂಗ ಹಾಗೂ ಚಮೀರ ಅವರನ್ನು ಹೆಸರಿಸಲಾಗಿತ್ತು.</p>.<p>ಹಸರಂಗ ಎರಡು ಪಂದ್ಯಗಳಲ್ಲಿ ಆಡಿದರೂ ಪ್ರಭಾವಿ ಎನಿಸಿಕೊಳ್ಳಲಿಲ್ಲ. ಅತ್ತ ಚಮೀರಗೆ ಅವಕಾಶ ಸಿಗಲಿಲ್ಲ.</p>.<p>ಈ ಕುರಿತು ಟ್ವೀಟ್ ಮಾಡಿರುವ ಆರ್ಸಿಬಿ, ಹಸರಂಗ ಹಾಗೂ ಚಮೀರ ವೃತ್ತಿಪರತೆ ಹಾಗೂ ಕಠಿಣ ಪರಿಶ್ರಮಕ್ಕಾಗಿ ಧನ್ಯವಾದಗಳನ್ನು ಸಲ್ಲಿಸಿದೆ. ಸೋಮವಾರ ನಡೆಯಲಿರುವ ಎಲಿಮಿನೇಟರ್ ಹಣಾಹಣಿಯಲ್ಲಿ ವಿರಾಟ್ ಕೊಹ್ಲಿ ಬಳಗವು ಕೋಲ್ಕತ್ತ ನೈಟ್ ರೈಡರ್ಸ್ ಸವಾಲನ್ನು ಎದುರಿಸಲಿದೆ.</p>.<p>ಟ್ವೆಂಟಿ-20 ವಿಶ್ವಕಪ್ ಅರ್ಹತಾ ಸುತ್ತಿನಲ್ಲಿ ಅಕ್ಟೋಬರ್ 18ರಂದು ನಡೆಯಲಿರುವ 'ಎ' ಗುಂಪಿನ ಪಂದ್ಯದಲ್ಲಿ ಶ್ರೀಲಂಕಾ ತಂಡವು ನಮೀಬಿಯಾ ವಿರುದ್ಧ ಕಣಕ್ಕಿಳಿಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದುಬೈ:</strong> ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬಯೋಬಬಲ್ನಿಂದ ಶ್ರೀಲಂಕಾದ ಇಬ್ಬರು ಆಟಗಾರರನ್ನು ಬಿಡುಗಡೆಗೊಳಿಸಲಾಗಿದೆ.</p>.<p>ಮುಂಬರುವ ಟ್ವೆಂಟಿ-20 ವಿಶ್ವಕಪ್ ಅರ್ಹತಾ ಸುತ್ತಿನಲ್ಲಿ ಶ್ರೀಲಂಕಾ ಭಾಗವಹಿಸಲಿರುವುದರಿಂದ ವನಿಂದು ಹಸರಂಗ ಹಾಗೂ ದುಶ್ಮಂತ ಚಮೀರ ಅವರಿಗೆ ರಾಷ್ಟ್ರೀಯ ತಂಡಕ್ಕೆ ಸೇರಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.</p>.<p>ಇದನ್ನೂ ಓದಿ:<a href="https://www.prajavani.net/sports/cricket/ipl-cricket-dc-vs-csk-virat-kohli-praises-ms-dhoni-says-king-is-back-the-greatest-finisher-ever-in-874592.html" itemprop="url">‘ಕಿಂಗ್ ಈಸ್ ಬ್ಯಾಕ್’: ಧೋನಿ ಅದ್ಭುತ ಫಿನಿಷರ್ ಎಂದು ಹಾಡಿಹೊಗಳಿದ ವಿರಾಟ್ ಕೊಹ್ಲಿ </a></p>.<p>ಇದರೊಂದಿಗೆ ಐಪಿಎಲ್ ಪ್ಲೇ-ಆಫ್ ಹಂತದಲ್ಲಿ ಆರ್ಸಿಬಿ ಸೇವೆಗೆ ಅಲಭ್ಯರಾಗಿದ್ದಾರೆ. ಯುಎಇನಲ್ಲಿ ನಡೆಯುತ್ತಿರುವ ಎರಡನೇ ಹಂತದ ಟೂರ್ನಿಗಾಗಿ ಆಸ್ಟ್ರೇಲಿಯಾದ ಆ್ಯಡಂ ಜಂಪಾ ಹಾಗೂ ಡೇನಿಯಲ್ ಸ್ಯಾಮ್ಸ್ ಸ್ಥಾನಕ್ಕೆಹಸರಂಗ ಹಾಗೂ ಚಮೀರ ಅವರನ್ನು ಹೆಸರಿಸಲಾಗಿತ್ತು.</p>.<p>ಹಸರಂಗ ಎರಡು ಪಂದ್ಯಗಳಲ್ಲಿ ಆಡಿದರೂ ಪ್ರಭಾವಿ ಎನಿಸಿಕೊಳ್ಳಲಿಲ್ಲ. ಅತ್ತ ಚಮೀರಗೆ ಅವಕಾಶ ಸಿಗಲಿಲ್ಲ.</p>.<p>ಈ ಕುರಿತು ಟ್ವೀಟ್ ಮಾಡಿರುವ ಆರ್ಸಿಬಿ, ಹಸರಂಗ ಹಾಗೂ ಚಮೀರ ವೃತ್ತಿಪರತೆ ಹಾಗೂ ಕಠಿಣ ಪರಿಶ್ರಮಕ್ಕಾಗಿ ಧನ್ಯವಾದಗಳನ್ನು ಸಲ್ಲಿಸಿದೆ. ಸೋಮವಾರ ನಡೆಯಲಿರುವ ಎಲಿಮಿನೇಟರ್ ಹಣಾಹಣಿಯಲ್ಲಿ ವಿರಾಟ್ ಕೊಹ್ಲಿ ಬಳಗವು ಕೋಲ್ಕತ್ತ ನೈಟ್ ರೈಡರ್ಸ್ ಸವಾಲನ್ನು ಎದುರಿಸಲಿದೆ.</p>.<p>ಟ್ವೆಂಟಿ-20 ವಿಶ್ವಕಪ್ ಅರ್ಹತಾ ಸುತ್ತಿನಲ್ಲಿ ಅಕ್ಟೋಬರ್ 18ರಂದು ನಡೆಯಲಿರುವ 'ಎ' ಗುಂಪಿನ ಪಂದ್ಯದಲ್ಲಿ ಶ್ರೀಲಂಕಾ ತಂಡವು ನಮೀಬಿಯಾ ವಿರುದ್ಧ ಕಣಕ್ಕಿಳಿಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>