ದುಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬಯೋಬಬಲ್ನಿಂದ ಶ್ರೀಲಂಕಾದ ಇಬ್ಬರು ಆಟಗಾರರನ್ನು ಬಿಡುಗಡೆಗೊಳಿಸಲಾಗಿದೆ.
ಮುಂಬರುವ ಟ್ವೆಂಟಿ-20 ವಿಶ್ವಕಪ್ ಅರ್ಹತಾ ಸುತ್ತಿನಲ್ಲಿ ಶ್ರೀಲಂಕಾ ಭಾಗವಹಿಸಲಿರುವುದರಿಂದ ವನಿಂದು ಹಸರಂಗ ಹಾಗೂ ದುಶ್ಮಂತ ಚಮೀರ ಅವರಿಗೆ ರಾಷ್ಟ್ರೀಯ ತಂಡಕ್ಕೆ ಸೇರಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಇದರೊಂದಿಗೆ ಐಪಿಎಲ್ ಪ್ಲೇ-ಆಫ್ ಹಂತದಲ್ಲಿ ಆರ್ಸಿಬಿ ಸೇವೆಗೆ ಅಲಭ್ಯರಾಗಿದ್ದಾರೆ. ಯುಎಇನಲ್ಲಿ ನಡೆಯುತ್ತಿರುವ ಎರಡನೇ ಹಂತದ ಟೂರ್ನಿಗಾಗಿ ಆಸ್ಟ್ರೇಲಿಯಾದ ಆ್ಯಡಂ ಜಂಪಾ ಹಾಗೂ ಡೇನಿಯಲ್ ಸ್ಯಾಮ್ಸ್ ಸ್ಥಾನಕ್ಕೆಹಸರಂಗ ಹಾಗೂ ಚಮೀರ ಅವರನ್ನು ಹೆಸರಿಸಲಾಗಿತ್ತು.
OFFICIAL ANNOUNCEMENT
Wanindu Hasaranga & Dushmantha Chameera have been released from the RCB bio bubble as they join up with the SL team for their #WT20 qualifiers.
ಹಸರಂಗ ಎರಡು ಪಂದ್ಯಗಳಲ್ಲಿ ಆಡಿದರೂ ಪ್ರಭಾವಿ ಎನಿಸಿಕೊಳ್ಳಲಿಲ್ಲ. ಅತ್ತ ಚಮೀರಗೆ ಅವಕಾಶ ಸಿಗಲಿಲ್ಲ.
ಈ ಕುರಿತು ಟ್ವೀಟ್ ಮಾಡಿರುವ ಆರ್ಸಿಬಿ, ಹಸರಂಗ ಹಾಗೂ ಚಮೀರ ವೃತ್ತಿಪರತೆ ಹಾಗೂ ಕಠಿಣ ಪರಿಶ್ರಮಕ್ಕಾಗಿ ಧನ್ಯವಾದಗಳನ್ನು ಸಲ್ಲಿಸಿದೆ. ಸೋಮವಾರ ನಡೆಯಲಿರುವ ಎಲಿಮಿನೇಟರ್ ಹಣಾಹಣಿಯಲ್ಲಿ ವಿರಾಟ್ ಕೊಹ್ಲಿ ಬಳಗವು ಕೋಲ್ಕತ್ತ ನೈಟ್ ರೈಡರ್ಸ್ ಸವಾಲನ್ನು ಎದುರಿಸಲಿದೆ.
ಟ್ವೆಂಟಿ-20 ವಿಶ್ವಕಪ್ ಅರ್ಹತಾ ಸುತ್ತಿನಲ್ಲಿ ಅಕ್ಟೋಬರ್ 18ರಂದು ನಡೆಯಲಿರುವ 'ಎ' ಗುಂಪಿನ ಪಂದ್ಯದಲ್ಲಿ ಶ್ರೀಲಂಕಾ ತಂಡವು ನಮೀಬಿಯಾ ವಿರುದ್ಧ ಕಣಕ್ಕಿಳಿಯಲಿದೆ.