ನಾಯಕನಾಗಿ ಕೊಹ್ಲಿ ಅವರಿಗೆ ಇದು ಕೊನೆಯ ಐಪಿಎಲ್ ಟೂರ್ನಿಯಾಗಿದೆ. ಈ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಳ್ಳುವ ಮೂಲಕ ಕೊಹ್ಲಿ ಅವರಿಗೆ ನಾಯಕತ್ವದಿಂದ ವಿದಾಯ ಹೇಳಬೇಕೆಂದುಕೊಂಡಿದ್ದ ಆರ್ಸಿಬಿಗೆ ಕೆಕೆಆರ್ನ ಸುನಿಲ್ ನರೈನ್ ಭರ್ಜರಿ ಆಟದ ಮೂಲಕ ಆಘಾತ ನೀಡಿದ್ದರು. 4 ವಿಕೆಟ್ ಗಳಿಸುವ ಮೂಲಕ ಆರ್ಸಿಬಿ ಬ್ಯಾಟಿಂಗ್ಗೆ ಕಡಿವಾಣ ಹಾಕಿದ್ದ ನರೈನ್ ಬ್ಯಾಟಿಂಗ್ನಲ್ಲೂ ಮಿಂಚಿದ್ದರು. ಹ್ಯಾಟ್ರಿಕ್ ಸಿಕ್ಸ್ ಸೇರಿದಂತೆ 26 ರನ್ ಗಳಿಸಿ ಆರ್ಸಿಬಿ ಗೆಲುವಿಗೆ ತಡೆಯೊಡ್ಡಿದ್ದರು. ಪರಿಣಾಮವಾಗಿ ಕೆಕೆಆರ್ ನಾಲ್ಕು ವಿಕೆಟ್ ಅಂತರದ ರೋಚಕ ಗೆಲುವು ದಾಖಲಿಸಿತ್ತು. ಆರ್ಸಿಬಿ ಟೂರ್ನಿಯಿಂದ ಹೊರ ನಡೆಯಬೇಕಾಯಿತು.