<p><strong>ಶಾರ್ಜಾ:</strong> ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ನಲ್ಲಿ ಭಾನುವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ನಡೆಯುತ್ತಿರುವ ಪಂದ್ಯದ ವೇಳೆ ಪಂಜಾಬ್ ಕಿಂಗ್ಸ್ ತಂಡದ ನಾಯಕ ಕೆ.ಎಲ್. ರಾಹುಲ್, ಅಂಪೈರ್ ವಿರುದ್ಧ ಅಸಮಾಧಾನವನ್ನು ತೋಡಿಕೊಂಡಿದ್ದಾರೆ. </p>.<p>ಪಂದ್ಯದ ಎಂಟನೇ ಓವರ್ನಲ್ಲಿ ಘಟನೆ ನಡೆದಿತ್ತು. ಸ್ಪಿನ್ನರ್ ರವಿ ಬಿಷ್ಣೋಯಿ ಅವರ ಎಸೆತದಲ್ಲಿ ದೇವದತ್ತ ಪಡಿಕ್ಕಲ್ ರಿವರ್ಸ್ ಸ್ವೀಪ್ ಮಾಡಲು ಯತ್ನಿಸಿದ್ದರು. ಈ ಸಂದರ್ಭದಲ್ಲಿ ಚೆಂಡು ವಿಕೆಟ್ ಕೀಪರ್ ರಾಹುಲ್ ಕೈಯೊಳಗೆ ಭದ್ರವಾಗಿ ಸೇರಿತ್ತು.</p>.<p>ಪಂಜಾಬ್ ಮನವಿಯನ್ನು ಅಂಪೈರ್ ಪುರಸ್ಕರಿಸಲಿಲ್ಲ. ಪರಿಣಾಮ ಡಿಆರ್ಎಸ್ ಮೊರೆ ಹೋಗಲು ರಾಹುಲ್ ನಿರ್ಧರಿಸಿದರು. ಆದರೆ ಮೂರನೇ ಅಂಪೈರ್ ನಾಟೌಟ್ ತೀರ್ಪು ನೀಡಿರುವುದು ರಾಹುಲ್ ಕೋಪಕ್ಕೆ ಕಾರಣವಾಗಿದೆ.</p>.<p>ರಿಪ್ಲೇ ಪರಿಶೀಲಿಸಿದಾಗ ಚೆಂಡು ಪಡಿಕ್ಕಲ್ ಗ್ಲೋವ್ ಸವರಿದಂತೆ ಭಾಸವಾಗುತ್ತಿತ್ತು. ಅಷ್ಟಾದರೂ ಥರ್ಡ್ ಅಂಪೈರ್ ನಾಟೌಟ್ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ಫೀಲ್ಡ್ ಅಂಪೈರ್ನಿಂದ ರಾಹುಲ್ ಸ್ಪಷ್ಪನೆಯನ್ನು ಬಯಸಿದರು. </p>.<p>ಇನ್ನೊಂದೆಡೆ ನಾನ್ ಸ್ಟ್ರೈಕರ್ನಲ್ಲಿದ್ದ ಆರ್ಸಿಬಿ ನಾಯಕ ವಿರಾಟ್ ಕೊಹ್ಲಿ ಇವೆಲ್ಲವನ್ನು ವೀಕ್ಷಿಸುತ್ತಿದ್ದರು. ಆದರೆ ಪ್ರತಿಕ್ರಿಯಿಸಲು ಮುಂದಾಗಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಾರ್ಜಾ:</strong> ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ನಲ್ಲಿ ಭಾನುವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ನಡೆಯುತ್ತಿರುವ ಪಂದ್ಯದ ವೇಳೆ ಪಂಜಾಬ್ ಕಿಂಗ್ಸ್ ತಂಡದ ನಾಯಕ ಕೆ.ಎಲ್. ರಾಹುಲ್, ಅಂಪೈರ್ ವಿರುದ್ಧ ಅಸಮಾಧಾನವನ್ನು ತೋಡಿಕೊಂಡಿದ್ದಾರೆ. </p>.<p>ಪಂದ್ಯದ ಎಂಟನೇ ಓವರ್ನಲ್ಲಿ ಘಟನೆ ನಡೆದಿತ್ತು. ಸ್ಪಿನ್ನರ್ ರವಿ ಬಿಷ್ಣೋಯಿ ಅವರ ಎಸೆತದಲ್ಲಿ ದೇವದತ್ತ ಪಡಿಕ್ಕಲ್ ರಿವರ್ಸ್ ಸ್ವೀಪ್ ಮಾಡಲು ಯತ್ನಿಸಿದ್ದರು. ಈ ಸಂದರ್ಭದಲ್ಲಿ ಚೆಂಡು ವಿಕೆಟ್ ಕೀಪರ್ ರಾಹುಲ್ ಕೈಯೊಳಗೆ ಭದ್ರವಾಗಿ ಸೇರಿತ್ತು.</p>.<p>ಪಂಜಾಬ್ ಮನವಿಯನ್ನು ಅಂಪೈರ್ ಪುರಸ್ಕರಿಸಲಿಲ್ಲ. ಪರಿಣಾಮ ಡಿಆರ್ಎಸ್ ಮೊರೆ ಹೋಗಲು ರಾಹುಲ್ ನಿರ್ಧರಿಸಿದರು. ಆದರೆ ಮೂರನೇ ಅಂಪೈರ್ ನಾಟೌಟ್ ತೀರ್ಪು ನೀಡಿರುವುದು ರಾಹುಲ್ ಕೋಪಕ್ಕೆ ಕಾರಣವಾಗಿದೆ.</p>.<p>ರಿಪ್ಲೇ ಪರಿಶೀಲಿಸಿದಾಗ ಚೆಂಡು ಪಡಿಕ್ಕಲ್ ಗ್ಲೋವ್ ಸವರಿದಂತೆ ಭಾಸವಾಗುತ್ತಿತ್ತು. ಅಷ್ಟಾದರೂ ಥರ್ಡ್ ಅಂಪೈರ್ ನಾಟೌಟ್ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ಫೀಲ್ಡ್ ಅಂಪೈರ್ನಿಂದ ರಾಹುಲ್ ಸ್ಪಷ್ಪನೆಯನ್ನು ಬಯಸಿದರು. </p>.<p>ಇನ್ನೊಂದೆಡೆ ನಾನ್ ಸ್ಟ್ರೈಕರ್ನಲ್ಲಿದ್ದ ಆರ್ಸಿಬಿ ನಾಯಕ ವಿರಾಟ್ ಕೊಹ್ಲಿ ಇವೆಲ್ಲವನ್ನು ವೀಕ್ಷಿಸುತ್ತಿದ್ದರು. ಆದರೆ ಪ್ರತಿಕ್ರಿಯಿಸಲು ಮುಂದಾಗಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>