ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IPL 2021: ಔಟ್ ಆದ ಸಿಟ್ಟಲ್ಲಿ ಕುರ್ಚಿ ಹೊಡೆದುರುಳಿಸಿದ ವಿರಾಟ್; ವ್ಯಾಪಕ ಟೀಕೆ

Last Updated 14 ಏಪ್ರಿಲ್ 2021, 17:00 IST
ಅಕ್ಷರ ಗಾತ್ರ

ಚೆನ್ನೈ: ಔಟ್ ಆದ ಸಿಟ್ಟಲ್ಲಿ ಕುರ್ಚಿ ಹೊಡೆದುರುಳಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಅವರು ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಬುಧವಾರ ಸನ್‌ರೈಸರ್ಸ್ ಹೈದರಾಬಾದ್ ವಿರುದ್ದ ನಡೆದ ಪಂದ್ಯದಲ್ಲಿ ಘಟನೆ ನಡೆದಿತ್ತು.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ, ಎಂದಿನಂತೆ ಹಾಯಾಗಿ ಬ್ಯಾಟ್ ಬೀಸಲು ಸಾಧ್ಯವಾಗಿರಲಿಲ್ಲ. 29 ಎಸೆತಗಳನ್ನು ಎದುರಿಸಿದರೂ ಕೇವಲ 33 ರನ್‌ಗಳನ್ನಷ್ಟೇ ಗಳಿಸಿದ್ದರು.

ಜೇಸನ್ ಹೋಲ್ಡರ್ ಎಸೆತದಲ್ಲಿ ವಿಜಯ್ ಶಂಕರ್‌ಗ್ ಕ್ಯಾಚಿತ್ತು ಕೊಹ್ಲಿ ಪೆವಿಲಿಯನ್‌ನತ್ತ ಹೆಜ್ಜೆ ಹಾಕಿದ್ದರು. ಈ ಸಂದರ್ಭದಲ್ಲಿ ಸಂಯಮವನ್ನು ಕಳೆದುಕೊಂಡ ಕೊಹ್ಲಿ ಮೊದಲು ಬೌಂಡರಿ ಹಗ್ಗವನ್ನು ಇನ್ನು ಮುಂದಕ್ಕೆ ಸಾಗಿ ಡಗೌಟ್‌ನಲ್ಲಿದ್ದ ಕುರ್ಚಿಯನ್ನು ಬ್ಯಾಟ್‌ನಿಂದ ಹೊಡೆದುರುಳಿಸಿದರು.

ಕುರ್ಚಿ ಖಾಲಿ ಆಗಿದ್ದರಿಂದ ಯಾವುದೇ ಅಪಾಯ ಎದುರಾಗಲಿಲ್ಲ. ಆದರೆ ನಾಯಕ ಕೊಹ್ಲಿ ವರ್ತನೆಯು ವ್ಯಾಪಕ ಟೀಕೆಗೆ ಕಾರಣವಾಗಿದೆ.

ತಮ್ಮ ಕೆರಿಯರ್ ಆರಂಭದಲ್ಲೇ ಕೆಟ್ಟ ವರ್ತನೆಯಿಂದಾಗಿ ಕೆಂಗಣ್ಣಿಗೆ ಗುರಿಯಾಗಿದ್ದ ವಿರಾಟ್ ಕೊಹ್ಲಿ, ನಾಯಕನಾದ ಬಳಿಕ ತಮ್ಮ ಭಾವನೆಗಳನ್ನು ಹತೋಟಿಯಲ್ಲಿಡುವಲ್ಲಿ ಯಶಸ್ವಿಯಾಗಿದ್ದರು.

ಆದರೆ ಸುದೀರ್ಘ ಸಮಯದ ಬಳಿಕ ಮತ್ತೆ ತಾಳ್ಮೆಯನ್ನು ಕಳೆದುಕೊಂಡಿದ್ದಾರೆ. ಸಭ್ಯರ ಆಟ ಕ್ರಿಕೆಟ್‌ನಲ್ಲಿ ಕಪ್ತಾನ ಹೆಚ್ಚು ಜವಾಬ್ದಾರಿಯುತವಾಗಿ ವರ್ತಿಸಬೇಕಾಗುತ್ತದೆ. ಅಲ್ಲದೆ ಇತರೆ ಕ್ರಿಕೆಟಿಗರಿಗೂ ಮಾದರಿಯಾಗಬೇಕು. ಇಲ್ಲಿ ವಿರಾಟ್ ಕೊಹ್ಲಿ ಮಗದೊಮ್ಮೆ ಎಲ್ಲೇ ಮೀರಿರುವುದು ಕಂಡುಬಂದಿದೆ.

ನಾಯಕ ವಿರಾಟ್ ಕೊಹ್ಲಿ ವಿರುದ್ಧ ಮ್ಯಾಚ್ ರೆಫರಿ ಕ್ರಮ ಕೈಗೊಳ್ಳುವರೇ ಎಂಬುದನ್ನು ಕಾದು ನೋಡಬೇಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT