<p>ಚೆನ್ನೈ: ಔಟ್ ಆದ ಸಿಟ್ಟಲ್ಲಿ ಕುರ್ಚಿ ಹೊಡೆದುರುಳಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಅವರು ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ.</p>.<p>ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಬುಧವಾರ ಸನ್ರೈಸರ್ಸ್ ಹೈದರಾಬಾದ್ ವಿರುದ್ದ ನಡೆದ ಪಂದ್ಯದಲ್ಲಿ ಘಟನೆ ನಡೆದಿತ್ತು.</p>.<p>ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ, ಎಂದಿನಂತೆ ಹಾಯಾಗಿ ಬ್ಯಾಟ್ ಬೀಸಲು ಸಾಧ್ಯವಾಗಿರಲಿಲ್ಲ. 29 ಎಸೆತಗಳನ್ನು ಎದುರಿಸಿದರೂ ಕೇವಲ 33 ರನ್ಗಳನ್ನಷ್ಟೇ ಗಳಿಸಿದ್ದರು.</p>.<p>ಜೇಸನ್ ಹೋಲ್ಡರ್ ಎಸೆತದಲ್ಲಿ ವಿಜಯ್ ಶಂಕರ್ಗ್ ಕ್ಯಾಚಿತ್ತು ಕೊಹ್ಲಿ ಪೆವಿಲಿಯನ್ನತ್ತ ಹೆಜ್ಜೆ ಹಾಕಿದ್ದರು. ಈ ಸಂದರ್ಭದಲ್ಲಿ ಸಂಯಮವನ್ನು ಕಳೆದುಕೊಂಡ ಕೊಹ್ಲಿ ಮೊದಲು ಬೌಂಡರಿ ಹಗ್ಗವನ್ನು ಇನ್ನು ಮುಂದಕ್ಕೆ ಸಾಗಿ ಡಗೌಟ್ನಲ್ಲಿದ್ದ ಕುರ್ಚಿಯನ್ನು ಬ್ಯಾಟ್ನಿಂದ ಹೊಡೆದುರುಳಿಸಿದರು.</p>.<p>ಕುರ್ಚಿ ಖಾಲಿ ಆಗಿದ್ದರಿಂದ ಯಾವುದೇ ಅಪಾಯ ಎದುರಾಗಲಿಲ್ಲ. ಆದರೆ ನಾಯಕ ಕೊಹ್ಲಿ ವರ್ತನೆಯು ವ್ಯಾಪಕ ಟೀಕೆಗೆ ಕಾರಣವಾಗಿದೆ.</p>.<p>ತಮ್ಮ ಕೆರಿಯರ್ ಆರಂಭದಲ್ಲೇ ಕೆಟ್ಟ ವರ್ತನೆಯಿಂದಾಗಿ ಕೆಂಗಣ್ಣಿಗೆ ಗುರಿಯಾಗಿದ್ದ ವಿರಾಟ್ ಕೊಹ್ಲಿ, ನಾಯಕನಾದ ಬಳಿಕ ತಮ್ಮ ಭಾವನೆಗಳನ್ನು ಹತೋಟಿಯಲ್ಲಿಡುವಲ್ಲಿ ಯಶಸ್ವಿಯಾಗಿದ್ದರು.</p>.<p>ಆದರೆ ಸುದೀರ್ಘ ಸಮಯದ ಬಳಿಕ ಮತ್ತೆ ತಾಳ್ಮೆಯನ್ನು ಕಳೆದುಕೊಂಡಿದ್ದಾರೆ. ಸಭ್ಯರ ಆಟ ಕ್ರಿಕೆಟ್ನಲ್ಲಿ ಕಪ್ತಾನ ಹೆಚ್ಚು ಜವಾಬ್ದಾರಿಯುತವಾಗಿ ವರ್ತಿಸಬೇಕಾಗುತ್ತದೆ. ಅಲ್ಲದೆ ಇತರೆ ಕ್ರಿಕೆಟಿಗರಿಗೂ ಮಾದರಿಯಾಗಬೇಕು. ಇಲ್ಲಿ ವಿರಾಟ್ ಕೊಹ್ಲಿ ಮಗದೊಮ್ಮೆ ಎಲ್ಲೇ ಮೀರಿರುವುದು ಕಂಡುಬಂದಿದೆ.</p>.<p>ನಾಯಕ ವಿರಾಟ್ ಕೊಹ್ಲಿ ವಿರುದ್ಧ ಮ್ಯಾಚ್ ರೆಫರಿ ಕ್ರಮ ಕೈಗೊಳ್ಳುವರೇ ಎಂಬುದನ್ನು ಕಾದು ನೋಡಬೇಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚೆನ್ನೈ: ಔಟ್ ಆದ ಸಿಟ್ಟಲ್ಲಿ ಕುರ್ಚಿ ಹೊಡೆದುರುಳಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಅವರು ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ.</p>.<p>ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಬುಧವಾರ ಸನ್ರೈಸರ್ಸ್ ಹೈದರಾಬಾದ್ ವಿರುದ್ದ ನಡೆದ ಪಂದ್ಯದಲ್ಲಿ ಘಟನೆ ನಡೆದಿತ್ತು.</p>.<p>ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ, ಎಂದಿನಂತೆ ಹಾಯಾಗಿ ಬ್ಯಾಟ್ ಬೀಸಲು ಸಾಧ್ಯವಾಗಿರಲಿಲ್ಲ. 29 ಎಸೆತಗಳನ್ನು ಎದುರಿಸಿದರೂ ಕೇವಲ 33 ರನ್ಗಳನ್ನಷ್ಟೇ ಗಳಿಸಿದ್ದರು.</p>.<p>ಜೇಸನ್ ಹೋಲ್ಡರ್ ಎಸೆತದಲ್ಲಿ ವಿಜಯ್ ಶಂಕರ್ಗ್ ಕ್ಯಾಚಿತ್ತು ಕೊಹ್ಲಿ ಪೆವಿಲಿಯನ್ನತ್ತ ಹೆಜ್ಜೆ ಹಾಕಿದ್ದರು. ಈ ಸಂದರ್ಭದಲ್ಲಿ ಸಂಯಮವನ್ನು ಕಳೆದುಕೊಂಡ ಕೊಹ್ಲಿ ಮೊದಲು ಬೌಂಡರಿ ಹಗ್ಗವನ್ನು ಇನ್ನು ಮುಂದಕ್ಕೆ ಸಾಗಿ ಡಗೌಟ್ನಲ್ಲಿದ್ದ ಕುರ್ಚಿಯನ್ನು ಬ್ಯಾಟ್ನಿಂದ ಹೊಡೆದುರುಳಿಸಿದರು.</p>.<p>ಕುರ್ಚಿ ಖಾಲಿ ಆಗಿದ್ದರಿಂದ ಯಾವುದೇ ಅಪಾಯ ಎದುರಾಗಲಿಲ್ಲ. ಆದರೆ ನಾಯಕ ಕೊಹ್ಲಿ ವರ್ತನೆಯು ವ್ಯಾಪಕ ಟೀಕೆಗೆ ಕಾರಣವಾಗಿದೆ.</p>.<p>ತಮ್ಮ ಕೆರಿಯರ್ ಆರಂಭದಲ್ಲೇ ಕೆಟ್ಟ ವರ್ತನೆಯಿಂದಾಗಿ ಕೆಂಗಣ್ಣಿಗೆ ಗುರಿಯಾಗಿದ್ದ ವಿರಾಟ್ ಕೊಹ್ಲಿ, ನಾಯಕನಾದ ಬಳಿಕ ತಮ್ಮ ಭಾವನೆಗಳನ್ನು ಹತೋಟಿಯಲ್ಲಿಡುವಲ್ಲಿ ಯಶಸ್ವಿಯಾಗಿದ್ದರು.</p>.<p>ಆದರೆ ಸುದೀರ್ಘ ಸಮಯದ ಬಳಿಕ ಮತ್ತೆ ತಾಳ್ಮೆಯನ್ನು ಕಳೆದುಕೊಂಡಿದ್ದಾರೆ. ಸಭ್ಯರ ಆಟ ಕ್ರಿಕೆಟ್ನಲ್ಲಿ ಕಪ್ತಾನ ಹೆಚ್ಚು ಜವಾಬ್ದಾರಿಯುತವಾಗಿ ವರ್ತಿಸಬೇಕಾಗುತ್ತದೆ. ಅಲ್ಲದೆ ಇತರೆ ಕ್ರಿಕೆಟಿಗರಿಗೂ ಮಾದರಿಯಾಗಬೇಕು. ಇಲ್ಲಿ ವಿರಾಟ್ ಕೊಹ್ಲಿ ಮಗದೊಮ್ಮೆ ಎಲ್ಲೇ ಮೀರಿರುವುದು ಕಂಡುಬಂದಿದೆ.</p>.<p>ನಾಯಕ ವಿರಾಟ್ ಕೊಹ್ಲಿ ವಿರುದ್ಧ ಮ್ಯಾಚ್ ರೆಫರಿ ಕ್ರಮ ಕೈಗೊಳ್ಳುವರೇ ಎಂಬುದನ್ನು ಕಾದು ನೋಡಬೇಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>