<p><strong>ದುಬೈ:</strong> ಕಳಪೆ ಫಾರ್ಮ್ನಿಂದ ಬಳಲುತ್ತಿರುವ ಡೇವಿಡ್ ವಾರ್ನರ್, ಮನೀಶ್ ಪಾಂಡೆ ಹಾಗೂ ಕೇದಾರ್ ಜಾಧವ್ ಅವರನ್ನು ಸನ್ರೈಸರ್ಸ್ ಹೈದರಾಬಾದ್ ತಂಡದ ಆಡುವಬಳಗದಿಂದ ಕೈಬಿಡಲಾಗಿದೆ.</p>.<p>ಐಪಿಎಲ್ನಲ್ಲಿ ಸೋಮವಾರ ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆಯುತ್ತಿರುವ ಪಂದ್ಯದಿಂದ ಮಾಜಿ ನಾಯಕ ಡೇವಿಡ್ ವಾರ್ನರ್ ಸೇರಿದಂತೆ ಕನ್ನಿಡಿಗ ಮನೀಶ್ ಪಾಂಡೆ ಅವರನ್ನು ಕಡೆಗಣಿಸಲಾಗಿದೆ.</p>.<p>ಪ್ರಸಕ್ತ ಸಾಲಿನಲ್ಲಿ ಕಳಪೆ ಪ್ರದರ್ಶನದಿಂದಾಗಿ ವಾರ್ನರ್ಗೆ ನಾಯಕ ಸ್ಥಾನ ನಷ್ಟವಾಗಿತ್ತು. ಬಳಿಕ ಆಸ್ಟ್ರೇಲಿಯಾದ ಆಟಗಾರನ ಸ್ಥಾನಕ್ಕೆ ನ್ಯೂಜಿಲೆಂಡ್ನ ಕೇನ್ ವಿಲಿಯಮ್ಸನ್ ಅವರನ್ನು ನೇಮಕ ಮಾಡಲಾಗಿತ್ತು.</p>.<p>ಕಳೆದ ಕೆಲವು ವರ್ಷಗಳಿಂದ ಹೈದರಾಬಾದ್ ಪರ ಅಮೂಲ್ಯ ಆಟಗಾರ ಎನಿಸಿರುವ ವಾರ್ನರ್, ಐಪಿಎಲ್ 2021ರ ಆವೃತ್ತಿಯಲ್ಲಿ ಸತತ ವೈಫಲ್ಯವನ್ನು ಅನುಭವಿಸಿದ್ದಾರೆ.</p>.<p>ಅತ್ತ 9 ಪಂದ್ಯಗಳನ್ನು ಆಡಿರುವ ಹೈದರಾಬಾದ್ ಎರಡು ಪಂದ್ಯಗಳನ್ನು ಮಾತ್ರ ಗೆದ್ದಿದ್ದು, ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಹಾಗಾಗಿ ಪ್ಲೇ-ಆಫ್ ಪ್ರವೇಶಿಸಲು ಮುಂದಿನೆಲ್ಲ ಪಂದ್ಯಗಳಲ್ಲಿ ಗೆಲುವು ದಾಖಲಿಸುವುದು ಅನಿವಾರ್ಯವೆನಿಸಿದೆ. ಹಾಗಿದ್ದರೂ ಪ್ಲೇ-ಆಫ್ ಪ್ರವೇಶವು ಇತರೆ ತಂಡಗಳ ಫಲಿತಾಂಶವನ್ನು ಅವಲಂಬಿಸಿರುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದುಬೈ:</strong> ಕಳಪೆ ಫಾರ್ಮ್ನಿಂದ ಬಳಲುತ್ತಿರುವ ಡೇವಿಡ್ ವಾರ್ನರ್, ಮನೀಶ್ ಪಾಂಡೆ ಹಾಗೂ ಕೇದಾರ್ ಜಾಧವ್ ಅವರನ್ನು ಸನ್ರೈಸರ್ಸ್ ಹೈದರಾಬಾದ್ ತಂಡದ ಆಡುವಬಳಗದಿಂದ ಕೈಬಿಡಲಾಗಿದೆ.</p>.<p>ಐಪಿಎಲ್ನಲ್ಲಿ ಸೋಮವಾರ ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆಯುತ್ತಿರುವ ಪಂದ್ಯದಿಂದ ಮಾಜಿ ನಾಯಕ ಡೇವಿಡ್ ವಾರ್ನರ್ ಸೇರಿದಂತೆ ಕನ್ನಿಡಿಗ ಮನೀಶ್ ಪಾಂಡೆ ಅವರನ್ನು ಕಡೆಗಣಿಸಲಾಗಿದೆ.</p>.<p>ಪ್ರಸಕ್ತ ಸಾಲಿನಲ್ಲಿ ಕಳಪೆ ಪ್ರದರ್ಶನದಿಂದಾಗಿ ವಾರ್ನರ್ಗೆ ನಾಯಕ ಸ್ಥಾನ ನಷ್ಟವಾಗಿತ್ತು. ಬಳಿಕ ಆಸ್ಟ್ರೇಲಿಯಾದ ಆಟಗಾರನ ಸ್ಥಾನಕ್ಕೆ ನ್ಯೂಜಿಲೆಂಡ್ನ ಕೇನ್ ವಿಲಿಯಮ್ಸನ್ ಅವರನ್ನು ನೇಮಕ ಮಾಡಲಾಗಿತ್ತು.</p>.<p>ಕಳೆದ ಕೆಲವು ವರ್ಷಗಳಿಂದ ಹೈದರಾಬಾದ್ ಪರ ಅಮೂಲ್ಯ ಆಟಗಾರ ಎನಿಸಿರುವ ವಾರ್ನರ್, ಐಪಿಎಲ್ 2021ರ ಆವೃತ್ತಿಯಲ್ಲಿ ಸತತ ವೈಫಲ್ಯವನ್ನು ಅನುಭವಿಸಿದ್ದಾರೆ.</p>.<p>ಅತ್ತ 9 ಪಂದ್ಯಗಳನ್ನು ಆಡಿರುವ ಹೈದರಾಬಾದ್ ಎರಡು ಪಂದ್ಯಗಳನ್ನು ಮಾತ್ರ ಗೆದ್ದಿದ್ದು, ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಹಾಗಾಗಿ ಪ್ಲೇ-ಆಫ್ ಪ್ರವೇಶಿಸಲು ಮುಂದಿನೆಲ್ಲ ಪಂದ್ಯಗಳಲ್ಲಿ ಗೆಲುವು ದಾಖಲಿಸುವುದು ಅನಿವಾರ್ಯವೆನಿಸಿದೆ. ಹಾಗಿದ್ದರೂ ಪ್ಲೇ-ಆಫ್ ಪ್ರವೇಶವು ಇತರೆ ತಂಡಗಳ ಫಲಿತಾಂಶವನ್ನು ಅವಲಂಬಿಸಿರುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>