ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ರಹಾನೆ ಗಾಯಕ್ಕೆ ತುತ್ತಾಗಿದ್ದರು. ಇದರಿಂದಾಗಿ ಕೆಕೆಆರ್ ಬಯೋಬಬಲ್ ತೊರೆಯಲಿರುವ ರಹಾನೆ, ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (ಎನ್ಸಿಎ) ಪುನಶ್ಚೇತನ ಶಿಬಿರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
ಪ್ರಸಕ್ತ ಸಾಲಿನ ಐಪಿಎಲ್ನಲ್ಲಿ ಕೆಕೆಆರ್ ಪರ ಆರಂಭಿಕನಾಗಿ ಬ್ಯಾಟಿಂಗ್ ಮಾಡಿರುವ ರಹಾನೆ, ಏಳು ಪಂದ್ಯಗಳಲ್ಲಿ 133 ರನ್ ಗಳಿಸಿದ್ದರು.
ಕೆಕೆಆರ್ 13 ಪಂದ್ಯಗಳಲ್ಲಿ ಆರು ಗೆಲುವಿನೊಂದಿಗೆ ಒಟ್ಟು 12 ಅಂಕ ಗಳಿಸಿದ್ದು, ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ. ಪ್ಲೇ-ಆಫ್ ಪ್ರವೇಶದ ಕನಸು ಜೀವಂತವಾಗಿರಿಸಲು ಕೊನೆಯ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ.
ಶ್ರೇಯಸ್ ಅಯ್ಯರ್ ಪಡೆ, ಮೇ 18ರಂದು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ವಿರುದ್ಧ ಕಣಕ್ಕಿಳಿಯಲಿದೆ.