ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ಯಾಟಿಂಗ್ ಮಾಡಲು ಕ್ರೀಸಿಗಿಳಿಯುವ ಮುನ್ನ ಧೋನಿ ಬ್ಯಾಟ್ ಕಚ್ಚಿದ್ದೇಕೆ?

ಅಕ್ಷರ ಗಾತ್ರ

ಮುಂಬೈ: ಐಪಿಎಲ್ 2022 ಟೂರ್ನಿಯಲ್ಲಿ ಭಾನುವಾರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ನಡುವೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಬ್ಯಾಟ್ ಕಚ್ಚುತ್ತಿರುವ ದೃಶ್ಯ ಹೆಚ್ಚಿನ ಕುತೂಹಲ ಮೂಡಿಸಿದೆ.

ಚೆನ್ನೈ ಇನ್ನಿಂಗ್ಸ್ ವೇಳೆ ಕೊನೆಯ ಹಂತದಲ್ಲಿ ಡಗೌಟ್‌ನಲ್ಲಿಕುಳಿತಿದ್ದ ಧೋನಿ, ತಮ್ಮ ಬ್ಯಾಟ್ ಅನ್ನು ಕಚ್ಚಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಈ ಚಿತ್ರ ಹರಿದಾಡುತ್ತಿದೆ.

ಈ ನಡುವೆ ಧೋನಿ ಬ್ಯಾಟ್ ಕಚ್ಚಿದ್ದರ ಹಿಂದಿನ ರಹಸ್ಯವನ್ನು ಸ್ಪಿನ್ನರ್ ಅಮಿತ್ ಮಿಶ್ರಾ ಬಹಿರಂಗಪಡಿಸಿದ್ದಾರೆ.

'ಧೋನಿ ಬ್ಯಾಟ್ ಅನ್ನು ಕಚ್ಚಿದ್ದೇಕೆ ಎಂದು ನೀವು ಆಶ್ಚರ್ಯಪಟ್ಟಿದ್ದರೆ, ಅವರು (ಧೋನಿ) ಬ್ಯಾಟಲ್ಲಿ ಇದ್ದ ಟೇಪ್ ಅನ್ನು ತೆಗೆಯಲು ಪ್ರಯತ್ನಿಸುತ್ತಿದ್ದರು. ಅವರು ಕ್ಲೀನ್ ಬ್ಯಾಟ್ ಇಷ್ಟಪಡುತ್ತಾರೆ. ಎಂಎಸ್ ಬ್ಯಾಟಿಂಗ್ ಮಾಡುವಾಗ ಒಂದೇ ಒಂದು ತುಂಡು ಟೇಪ್ ಕಾಣಿಸಿಕೊಳ್ಳುವುದಿಲ್ಲ' ಎಂದು ಹೇಳಿದ್ದಾರೆ.

ಡೆಲ್ಲಿ ವಿರುದ್ಧ ನಡೆದ ಪಂದ್ಯದಲ್ಲಿ 91 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿರುವ ಚೆನ್ನೈ, ಪ್ಲೇ-ಆಫ್ ಕನಸನ್ನು ಜೀವಂತವಾರಿಗಿಸಿದೆ. ಬ್ಯಾಟಿಂಗ್‌ನಲ್ಲಿ ಮಿಂಚಿದ ಧೋನಿ ಕೇವಲ 8 ಎಸೆತಗಳಲ್ಲಿ ಎರಡು ಸಿಕ್ಸರ್ ಹಾಗೂ ಒಂದು ಬೌಂಡರಿ ನೆರವಿನಿಂದ 21 ರನ್ ಗಳಿಸಿ ಔಟಾಗದೆ ಉಳಿದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT