<p><strong>ಮುಂಬೈ:</strong> ಐಪಿಎಲ್ 2022 ಟೂರ್ನಿಯಲ್ಲಿ ಭಾನುವಾರ ಗುಜರಾತ್ ಟೈಟನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಏಳು ವಿಕೆಟ್ ಅಂತರದ ಸೋಲಿಗೆ ಶರಣಾಗಿದೆ.</p>.<p>ಇದರೊಂದಿಗೆ ನಾಲ್ಕು ಬಾರಿಯ ಚಾಂಪಿಯನ್ ಚೆನ್ನೈ, ಟೂರ್ನಿಯಲ್ಲಿ ಒಂಬತ್ತನೇ ಸೋಲಿನ ಮುಖಭಂಗಕ್ಕೊಳಗಾಗಿದೆ.</p>.<p>ಇದನ್ನೂ ಓದಿ:<a href="https://www.prajavani.net/sports/sports-extra/ruthless-india-make-history-with-first-thomas-cup-crown-936944.html" itemprop="url">Thomas Cup: ಐತಿಹಾಸಿಕ ಗೆಲುವು, ಇತಿಹಾಸ ನಿರ್ಮಿಸಿದ ಭಾರತ </a></p>.<p>ಈ ಕುರಿತು ಪ್ರತಿಕ್ರಿಯಿಸಿರುವ ನಾಯಕ ಮಹೇಂದ್ರ ಸಿಂಗ್ ಧೋನಿ, ಮೊದಲು ಬ್ಯಾಟಿಂಗ್ ನಡೆಸುವ ನಿರ್ಧಾರ ಸರಿಯಾಗಿರಲಿಲ್ಲ ಎಂದು ಹೇಳಿದ್ದಾರೆ.</p>.<p>ಇನ್ನಿಂಗ್ಸ್ನ ಮೊದಲಾರ್ಧದಲ್ಲಿ ವೇಗದ ಬೌಲರ್ಗಳನ್ನು ಎದುರಿಸುವುದು ಕಷ್ಟಕರವಾಗಿತ್ತು. ಸ್ಪಿನ್ನರ್ಗಳು ಉತ್ತಮ ದಾಳಿ ಸಂಘಟಿಸಿದರು. ಇದರಿಂದಾಗಿ ಹಿನ್ನಡೆ ಎದುರಾಯಿತು ಎಂದು ಹೇಳಿದರು.</p>.<p>ಎನ್. ಜಗದೀಶನ್ ಅವರಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಶಿವಂ ದುಬೆ ಅವರಿಗೆ ಬ್ಯಾಟಿಂಗ್ ಕ್ರಮಾಂಕದಲ್ಲಿ ಹಿಂಬಡ್ತಿ ನೀಡಲಾಯಿತು ಎಂದು ಮಹಿ ತಿಳಿಸಿದರು.</p>.<p>ಈ ನಡುವೆ ಗುಜರಾತ್ ನಾಯಕ ಹಾರ್ದಿಕ್ ಪಾಂಡ್ಯ ಹಾಗೂ ಶುಭಮನ್ ಗಿಲ್ ವಿಕೆಟ್ ಗಳಿಸಿ ಪ್ರಭಾವ ಮೂಡಿಸಿರುವ ಮತೀಶ ಪತಿರಾನ ಅವರನ್ನು ಧೋನಿ ಶ್ಲಾಘಿಸಿದರು.</p>.<p>ಶ್ರೀಲಂಕಾ ದಿಗ್ಗಜ ಲಸಿತ್ ಮಾಲಿಂಗ ಶೈಲಿಯನ್ನು ಹೋಲುವ ಲಂಕಾದವರೇ ಆದ ಮತೀಶ, ನಿಧಾನಗತಿಯ ಬೌಲಿಂಗ್ ಹಾಗೂ ಇನ್ನಿಂಗ್ಸ್ನ ಕೊನೆಯಲ್ಲಿ ಪರಿಣಾಮಕಾರಿ ಬೌಲಿಂಗ್ ಮಾಡಬಲ್ಲರು ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಐಪಿಎಲ್ 2022 ಟೂರ್ನಿಯಲ್ಲಿ ಭಾನುವಾರ ಗುಜರಾತ್ ಟೈಟನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಏಳು ವಿಕೆಟ್ ಅಂತರದ ಸೋಲಿಗೆ ಶರಣಾಗಿದೆ.</p>.<p>ಇದರೊಂದಿಗೆ ನಾಲ್ಕು ಬಾರಿಯ ಚಾಂಪಿಯನ್ ಚೆನ್ನೈ, ಟೂರ್ನಿಯಲ್ಲಿ ಒಂಬತ್ತನೇ ಸೋಲಿನ ಮುಖಭಂಗಕ್ಕೊಳಗಾಗಿದೆ.</p>.<p>ಇದನ್ನೂ ಓದಿ:<a href="https://www.prajavani.net/sports/sports-extra/ruthless-india-make-history-with-first-thomas-cup-crown-936944.html" itemprop="url">Thomas Cup: ಐತಿಹಾಸಿಕ ಗೆಲುವು, ಇತಿಹಾಸ ನಿರ್ಮಿಸಿದ ಭಾರತ </a></p>.<p>ಈ ಕುರಿತು ಪ್ರತಿಕ್ರಿಯಿಸಿರುವ ನಾಯಕ ಮಹೇಂದ್ರ ಸಿಂಗ್ ಧೋನಿ, ಮೊದಲು ಬ್ಯಾಟಿಂಗ್ ನಡೆಸುವ ನಿರ್ಧಾರ ಸರಿಯಾಗಿರಲಿಲ್ಲ ಎಂದು ಹೇಳಿದ್ದಾರೆ.</p>.<p>ಇನ್ನಿಂಗ್ಸ್ನ ಮೊದಲಾರ್ಧದಲ್ಲಿ ವೇಗದ ಬೌಲರ್ಗಳನ್ನು ಎದುರಿಸುವುದು ಕಷ್ಟಕರವಾಗಿತ್ತು. ಸ್ಪಿನ್ನರ್ಗಳು ಉತ್ತಮ ದಾಳಿ ಸಂಘಟಿಸಿದರು. ಇದರಿಂದಾಗಿ ಹಿನ್ನಡೆ ಎದುರಾಯಿತು ಎಂದು ಹೇಳಿದರು.</p>.<p>ಎನ್. ಜಗದೀಶನ್ ಅವರಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಶಿವಂ ದುಬೆ ಅವರಿಗೆ ಬ್ಯಾಟಿಂಗ್ ಕ್ರಮಾಂಕದಲ್ಲಿ ಹಿಂಬಡ್ತಿ ನೀಡಲಾಯಿತು ಎಂದು ಮಹಿ ತಿಳಿಸಿದರು.</p>.<p>ಈ ನಡುವೆ ಗುಜರಾತ್ ನಾಯಕ ಹಾರ್ದಿಕ್ ಪಾಂಡ್ಯ ಹಾಗೂ ಶುಭಮನ್ ಗಿಲ್ ವಿಕೆಟ್ ಗಳಿಸಿ ಪ್ರಭಾವ ಮೂಡಿಸಿರುವ ಮತೀಶ ಪತಿರಾನ ಅವರನ್ನು ಧೋನಿ ಶ್ಲಾಘಿಸಿದರು.</p>.<p>ಶ್ರೀಲಂಕಾ ದಿಗ್ಗಜ ಲಸಿತ್ ಮಾಲಿಂಗ ಶೈಲಿಯನ್ನು ಹೋಲುವ ಲಂಕಾದವರೇ ಆದ ಮತೀಶ, ನಿಧಾನಗತಿಯ ಬೌಲಿಂಗ್ ಹಾಗೂ ಇನ್ನಿಂಗ್ಸ್ನ ಕೊನೆಯಲ್ಲಿ ಪರಿಣಾಮಕಾರಿ ಬೌಲಿಂಗ್ ಮಾಡಬಲ್ಲರು ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>