<p><strong>ಮುಂಬೈ:</strong> ಮಹೇಂದ್ರ ಸಿಂಗ್ ಧೋನಿ ಅವರ ಜೊತೆಗೆ ಸಮಾಲೋಚನೆ ಮಾಡುವ ಚಿತ್ರವನ್ನು ಹಂಚಿಕೊಂಡಿರುವಗೌತಮ್ ಗಂಭೀರ್, 'ನಾಯಕನನ್ನು ಭೇಟಿಯಾಗಿರುವುದು ಖುಷಿ ತಂದಿದೆ' ಎಂಬ ಅಡಿಬರಹವನ್ನು ನೀಡಿದ್ದಾರೆ.</p>.<p>ಪ್ರಸ್ತುತ ಗಂಭೀರ್ ಇನ್ಸ್ಟಾಗ್ರಾಂನಲ್ಲಿ ಮಾಡಿರುವ ಪೋಸ್ಟ್ ವೈರಲ್ ಆಗಿದ್ದು, ಅಭಿಮಾನಿಗಳು ಕಾಮೆಂಟಿಸಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/sports/cricket/ipl-2022-dwayne-bravo-milestone-becomes-highest-wicket-taker-in-indian-premier-league-history-924682.html" itemprop="url">IPL 2022: ಲಸಿತ್ ಮಾಲಿಂಗ ದಾಖಲೆ ಮುರಿದ ಡ್ವೇನ್ ಬ್ರಾವೊ </a></p>.<p>ಐಪಿಎಲ್ನಲ್ಲಿ ಗುರುವಾರ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಲಖನೌ ಸೂಪರ್ ಜೈಂಟ್ಸ್ ನಡುವಣ ಪಂದ್ಯದ ವೇಳೆ ಧೋನಿ ಅವರನ್ನು ಗಂಭೀರ್ ಭೇಟಿಯಾಗಿ ಮಾತುಕತೆ ನಡೆಸಿದ್ದರು.</p>.<p><strong>ಗಂಭೀರ್ ಸಂಭ್ರಮ...</strong><br />ಚೆನ್ನೈ ವಿರುದ್ಧ ಲಖನೌ ಆರು ವಿಕೆಟ್ ಅಂತರದ ರೋಚಕ ಗೆಲುವು ದಾಖಲಿಸಿತ್ತು. 211 ರನ್ ಗೆಲುವಿನ ಗುರಿಯನ್ನು ಇನ್ನೂ ಮೂರು ಎಸೆತಗಳು ಬಾಕಿ ಉಳಿದಿರುವಂತೆಯೇ ನಾಲ್ಕು ವಿಕೆಟ್ ನಷ್ಟಕ್ಕೆ ಗುರಿ ತಲುಪಿತು.</p>.<p>ಈ ಸಂದರ್ಭದಲ್ಲಿ ಡಗೌಟ್ನಲ್ಲಿದ್ದ ಲಖನೌ ತಂಡದ ಮಾರ್ಗದರ್ಶಕ ಗಂಭೀರ್ ಸಂಭ್ರಮಾಚರಣೆ ಮಾಡಿರುವ ದೃಶ್ಯವು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಗಂಭೀರ್ ಅವರಲ್ಲಿ ಹೋರಾಟ ಮನೋಭಾವ ಕಿಂಚಿತ್ತು ಕಡಿಮೆಯಾಗಿಲ್ಲ ಎಂದು ಅಭಿಮಾನಿಗಳು ಬರೆದುಕೊಂಡಿದ್ದಾರೆ.</p>.<p>ಧೋನಿ ನಾಯಕತ್ವದಲ್ಲಿ 2007ರ ಟ್ವೆಂಟಿ-20 ವಿಶ್ವಕಪ್ ಹಾಗೂ 2011ರ ಏಕದಿನ ವಿಶ್ವಕಪ್ ಗೆಲುವಿನಲ್ಲಿ ಗೌತಮ್ ಗಂಭೀರ್ ನಿರ್ಣಾಯಕ ಪಾತ್ರ ವಹಿಸಿದ್ದರು. ಬಳಿಕ ಧೋನಿ ಜೊತೆಗಿನ ಭಿನ್ನಾಭಿಪ್ರಾಯವನ್ನು ಗಂಭೀರ್ ಬಹಿರಂಗವಾಗಿ ತೋಡಿಕೊಂಡಿದ್ದರು.</p>.<p>ಆದರೆ ಇತ್ತೀಚೆಗಷ್ಟೇ ಧೋನಿ ಬಗ್ಗೆ ಅಪಾರ ಗೌರವವಿದೆ ಎಂದು ಗಂಭೀರ್ ಹೇಳಿಕೆ ಕೊಟ್ಟಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಮಹೇಂದ್ರ ಸಿಂಗ್ ಧೋನಿ ಅವರ ಜೊತೆಗೆ ಸಮಾಲೋಚನೆ ಮಾಡುವ ಚಿತ್ರವನ್ನು ಹಂಚಿಕೊಂಡಿರುವಗೌತಮ್ ಗಂಭೀರ್, 'ನಾಯಕನನ್ನು ಭೇಟಿಯಾಗಿರುವುದು ಖುಷಿ ತಂದಿದೆ' ಎಂಬ ಅಡಿಬರಹವನ್ನು ನೀಡಿದ್ದಾರೆ.</p>.<p>ಪ್ರಸ್ತುತ ಗಂಭೀರ್ ಇನ್ಸ್ಟಾಗ್ರಾಂನಲ್ಲಿ ಮಾಡಿರುವ ಪೋಸ್ಟ್ ವೈರಲ್ ಆಗಿದ್ದು, ಅಭಿಮಾನಿಗಳು ಕಾಮೆಂಟಿಸಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/sports/cricket/ipl-2022-dwayne-bravo-milestone-becomes-highest-wicket-taker-in-indian-premier-league-history-924682.html" itemprop="url">IPL 2022: ಲಸಿತ್ ಮಾಲಿಂಗ ದಾಖಲೆ ಮುರಿದ ಡ್ವೇನ್ ಬ್ರಾವೊ </a></p>.<p>ಐಪಿಎಲ್ನಲ್ಲಿ ಗುರುವಾರ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಲಖನೌ ಸೂಪರ್ ಜೈಂಟ್ಸ್ ನಡುವಣ ಪಂದ್ಯದ ವೇಳೆ ಧೋನಿ ಅವರನ್ನು ಗಂಭೀರ್ ಭೇಟಿಯಾಗಿ ಮಾತುಕತೆ ನಡೆಸಿದ್ದರು.</p>.<p><strong>ಗಂಭೀರ್ ಸಂಭ್ರಮ...</strong><br />ಚೆನ್ನೈ ವಿರುದ್ಧ ಲಖನೌ ಆರು ವಿಕೆಟ್ ಅಂತರದ ರೋಚಕ ಗೆಲುವು ದಾಖಲಿಸಿತ್ತು. 211 ರನ್ ಗೆಲುವಿನ ಗುರಿಯನ್ನು ಇನ್ನೂ ಮೂರು ಎಸೆತಗಳು ಬಾಕಿ ಉಳಿದಿರುವಂತೆಯೇ ನಾಲ್ಕು ವಿಕೆಟ್ ನಷ್ಟಕ್ಕೆ ಗುರಿ ತಲುಪಿತು.</p>.<p>ಈ ಸಂದರ್ಭದಲ್ಲಿ ಡಗೌಟ್ನಲ್ಲಿದ್ದ ಲಖನೌ ತಂಡದ ಮಾರ್ಗದರ್ಶಕ ಗಂಭೀರ್ ಸಂಭ್ರಮಾಚರಣೆ ಮಾಡಿರುವ ದೃಶ್ಯವು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಗಂಭೀರ್ ಅವರಲ್ಲಿ ಹೋರಾಟ ಮನೋಭಾವ ಕಿಂಚಿತ್ತು ಕಡಿಮೆಯಾಗಿಲ್ಲ ಎಂದು ಅಭಿಮಾನಿಗಳು ಬರೆದುಕೊಂಡಿದ್ದಾರೆ.</p>.<p>ಧೋನಿ ನಾಯಕತ್ವದಲ್ಲಿ 2007ರ ಟ್ವೆಂಟಿ-20 ವಿಶ್ವಕಪ್ ಹಾಗೂ 2011ರ ಏಕದಿನ ವಿಶ್ವಕಪ್ ಗೆಲುವಿನಲ್ಲಿ ಗೌತಮ್ ಗಂಭೀರ್ ನಿರ್ಣಾಯಕ ಪಾತ್ರ ವಹಿಸಿದ್ದರು. ಬಳಿಕ ಧೋನಿ ಜೊತೆಗಿನ ಭಿನ್ನಾಭಿಪ್ರಾಯವನ್ನು ಗಂಭೀರ್ ಬಹಿರಂಗವಾಗಿ ತೋಡಿಕೊಂಡಿದ್ದರು.</p>.<p>ಆದರೆ ಇತ್ತೀಚೆಗಷ್ಟೇ ಧೋನಿ ಬಗ್ಗೆ ಅಪಾರ ಗೌರವವಿದೆ ಎಂದು ಗಂಭೀರ್ ಹೇಳಿಕೆ ಕೊಟ್ಟಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>