<p><strong>ಮುಂಬೈ:</strong> ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಚೊಚ್ಚಲ ಹ್ಯಾಟ್ರಿಕ್ ವಿಕೆಟ್ ಗಳಿಸುವ ಅವಕಾಶದಿಂದ ರಾಜಸ್ಥಾನ್ ರಾಯಲ್ಸ್ ತಂಡದ ರಿಸ್ಟ್ ಸ್ಪಿನ್ನರ್ ಯಜುವೇಂದ್ರ ಚಾಹಲ್ ವಂಚಿತರಾಗಿದ್ದಾರೆ.</p>.<p>ಶನಿವಾರ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ನಿಖರ ದಾಳಿ ಸಂಘಟಿಸಿದ ಆರ್ಸಿಬಿಯ ಮಾಜಿ ಬೌಲರ್ ಚಾಹಲ್, ಸತತ ಎರಡು ವಿಕೆಟ್ಗಳನ್ನು ಕಬಳಿಸುವಲ್ಲಿ ಯಶಸ್ವಿಯಾಗಿದರು.</p>.<p>ಆದರೆ ಮೂರನೇ ಎಸೆತದಲ್ಲಿ ಫೀಲ್ಡರ್ ಕರುಣ್ ನಾಯರ್ ಕ್ಯಾಚ್ ಕೈಚೆಲ್ಲುವುದರೊಂದಿಗೆ ಚಾಹಲ್ ಅದೃಷ್ಟ ವಂಚಿತರಾದರು.</p>.<p>ಮುಂಬೈ ಚೇಸಿಂಗ್ ವೇಳೆ 16ನೇ ಓವರ್ನಲ್ಲಿ ಟಿಮ್ ಡೇವಿಡ್ ಹಾಗೂ ಡ್ಯಾನಿಯಲ್ ಸ್ಯಾಮ್ಸ್ ವಿಕೆಟ್ಗಳನ್ನು ಕಬಳಿಸಿದ ಚಾಹಲ್ ಪಂದ್ಯಕ್ಕೆ ತಿರುವು ನೀಡುವಲ್ಲಿ ಯಶಸ್ವಿಯಾದರು. ಆದರೆ ಮೂರನೇ ಎಸೆತದಲ್ಲಿ ಬ್ಯಾಟರ್ ಮುರುಗನ್ ಅಶ್ವಿನ್ ಬ್ಯಾಟ್ ಸವರಿದ ಚೆಂಡನ್ನು ಕರುಣ್ ನಾಯರ್ ಹಿಡಿಯುವಲ್ಲಿ ವಿಫಲರಾದರು.</p>.<p>ಓವರ್ ಮುಗಿದ ಬಳಿಕ ಚಾಹಲ್ ಬಳಿ ತೆರಳಿದ ಕರುಣ್ ನಾಯರ್, ತಬ್ಬಿಕೊಂಡು ಸಂತೈಸುತ್ತಿರುವ ದೃಶ್ಯ ಕಂಡುಬಂದಿತು.</p>.<p>ಏತನ್ಮಧ್ಯೆ ಮುಂಬೈ ವಿರುದ್ಧದ ಗೆಲುವಿನೊಂದಿಗೆ ಟೂರ್ನಿಯಲ್ಲಿ ಸಂಜು ಸ್ಯಾಮ್ಸನ್ ಪಡೆ ಸತತ ಎರಡನೇ ಗೆಲುವು ದಾಖಲಿಸಿದೆ. ಅತ್ತ ಐದು ಬಾರಿಯ ಚಾಂಪಿಯನ್ ಮುಂಬೈ ಸತತ ಎರಡನೇ ಸೋಲಿಗೆ ಶರಣಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಚೊಚ್ಚಲ ಹ್ಯಾಟ್ರಿಕ್ ವಿಕೆಟ್ ಗಳಿಸುವ ಅವಕಾಶದಿಂದ ರಾಜಸ್ಥಾನ್ ರಾಯಲ್ಸ್ ತಂಡದ ರಿಸ್ಟ್ ಸ್ಪಿನ್ನರ್ ಯಜುವೇಂದ್ರ ಚಾಹಲ್ ವಂಚಿತರಾಗಿದ್ದಾರೆ.</p>.<p>ಶನಿವಾರ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ನಿಖರ ದಾಳಿ ಸಂಘಟಿಸಿದ ಆರ್ಸಿಬಿಯ ಮಾಜಿ ಬೌಲರ್ ಚಾಹಲ್, ಸತತ ಎರಡು ವಿಕೆಟ್ಗಳನ್ನು ಕಬಳಿಸುವಲ್ಲಿ ಯಶಸ್ವಿಯಾಗಿದರು.</p>.<p>ಆದರೆ ಮೂರನೇ ಎಸೆತದಲ್ಲಿ ಫೀಲ್ಡರ್ ಕರುಣ್ ನಾಯರ್ ಕ್ಯಾಚ್ ಕೈಚೆಲ್ಲುವುದರೊಂದಿಗೆ ಚಾಹಲ್ ಅದೃಷ್ಟ ವಂಚಿತರಾದರು.</p>.<p>ಮುಂಬೈ ಚೇಸಿಂಗ್ ವೇಳೆ 16ನೇ ಓವರ್ನಲ್ಲಿ ಟಿಮ್ ಡೇವಿಡ್ ಹಾಗೂ ಡ್ಯಾನಿಯಲ್ ಸ್ಯಾಮ್ಸ್ ವಿಕೆಟ್ಗಳನ್ನು ಕಬಳಿಸಿದ ಚಾಹಲ್ ಪಂದ್ಯಕ್ಕೆ ತಿರುವು ನೀಡುವಲ್ಲಿ ಯಶಸ್ವಿಯಾದರು. ಆದರೆ ಮೂರನೇ ಎಸೆತದಲ್ಲಿ ಬ್ಯಾಟರ್ ಮುರುಗನ್ ಅಶ್ವಿನ್ ಬ್ಯಾಟ್ ಸವರಿದ ಚೆಂಡನ್ನು ಕರುಣ್ ನಾಯರ್ ಹಿಡಿಯುವಲ್ಲಿ ವಿಫಲರಾದರು.</p>.<p>ಓವರ್ ಮುಗಿದ ಬಳಿಕ ಚಾಹಲ್ ಬಳಿ ತೆರಳಿದ ಕರುಣ್ ನಾಯರ್, ತಬ್ಬಿಕೊಂಡು ಸಂತೈಸುತ್ತಿರುವ ದೃಶ್ಯ ಕಂಡುಬಂದಿತು.</p>.<p>ಏತನ್ಮಧ್ಯೆ ಮುಂಬೈ ವಿರುದ್ಧದ ಗೆಲುವಿನೊಂದಿಗೆ ಟೂರ್ನಿಯಲ್ಲಿ ಸಂಜು ಸ್ಯಾಮ್ಸನ್ ಪಡೆ ಸತತ ಎರಡನೇ ಗೆಲುವು ದಾಖಲಿಸಿದೆ. ಅತ್ತ ಐದು ಬಾರಿಯ ಚಾಂಪಿಯನ್ ಮುಂಬೈ ಸತತ ಎರಡನೇ ಸೋಲಿಗೆ ಶರಣಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>