ಕೋಲ್ಕತ್ತ: ಇನಿಂಗ್ಸ್ನ ಮಧ್ಯದ ಹಂತದ ಓವರ್ಗಳಲ್ಲಿ ಎರಡು ಸಿಕ್ಸರ್ಗಳನ್ನು ಹೊಡೆದ್ದಿದ್ದರೆ ಪಂದ್ಯದ ಜಯ ತಮ್ಮ ತಂಡದತ್ತ ವಾಲುತ್ತಿತ್ತು. ನಮ್ಮ ಬ್ಯಾಟಿಂಗ್ ಪಡೆ ದೊಡ್ಡ ಹೊಡೆತಗಳನ್ನು ಆಡಲು ಪ್ರಯತ್ನಿಸಿತು. ಆದರೆ ಎದುರಾಳಿ ತಂಡದ ಬೌಲರ್ಗಳು ಉತ್ತಮವಾಗಿ ಬೌಲಿಂಗ್ ಮಾಡಿದರು ಎಂದು ಲಖನೌ ಸೂಪರ್ ಜೈಂಟ್ಸ್ ತಂಡದ ನಾಯಕ ಕೆ.ಎಲ್. ರಾಹುಲ್ ಹೇಳಿದ್ದಾರೆ.