<p><strong>ಮುಂಬೈ:</strong> ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಗುರುವಾರ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದಿರುವ ಲಖನೌ ಸೂಪರ್ ಜೈಂಟ್ಸ್ ತಂಡದ ನಾಯಕ ಕೆ.ಎಲ್. ರಾಹುಲ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ.</p>.<p>ಮುಂಬೈನ ಬ್ರೆಬೋರ್ನ್ ಕ್ರೀಡಾಂಗಣದಲ್ಲಿ ರೋಚಕ ಪಂದ್ಯವನ್ನು ನಿರೀಕ್ಷಿಸಲಾಗಿದೆ.</p>.<p>ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಮೊದಲ ಪಂದ್ಯದಲ್ಲೇ ಕಹಿ ಅನುಭವಿಸಿತ್ತು. ಅತ್ತ ಇದೇ ಮೊದಲ ಬಾರಿಗೆ ಐಪಿಎಲ್ಗೆ ಎಂಟ್ರಿ ಕೊಟ್ಟಿರುವ ಲಖನೌ ಸೂಪರ್ ಜೈಂಟ್ಸ್ ಕೂಡ ಸೋಲಿನೊಂದಿಗೆ ಅಭಿಯಾನ ಆರಂಭಿಸಿತ್ತು.</p>.<p>ಮಹೇಂದ್ರ ಸಿಂಗ್ ಧೋನಿ, ಚೆನ್ನೈ ತಂಡದ ನಾಯಕತ್ವವನ್ನು ರವೀಂದ್ರ ಜಡೇಜ ಅವರಿಗೆ ಹಸ್ತಾಂತರಿಸಿದ್ದಾರೆ. ಇನ್ನೊಂದೆಡೆ ಕೆ.ಎಲ್. ರಾಹುಲ್ ಲಖನೌ ತಂಡದ ಚುಕ್ಕಾಣಿ ಹಿಡಿದಿದ್ದಾರೆ. ಇತ್ತಂಡಗಳಿಗೂ ಈ ಪಂದ್ಯ ಮಹತ್ವದೆನಿಸಿದೆ.<br /></p>.<p><strong>ಪ್ಲೇಯಿಂಗ್ ಇಲೆವೆನ್:</strong><br /><br />ಚೆನ್ನೈ ಸೂಪರ್ ಕಿಂಗ್ಸ್: ಋತುರಾಜ್ ಗಾಯಕವಾಡ್, ರಾಬಿನ್ ಉತ್ತಪ್ಪ, ಮೊಯಿನ್ ಅಲಿ, ಅಂಬಟಿ ರಾಯುಡು, ರವೀಂದ್ರ ಜಡೇಜ (ನಾಯಕ), ಮಹೇಂದ್ರ ಸಿಂಗ್ ಧೋನಿ (ನಾಯಕ), ಶಿವಂ ದುಬೆ, ಡ್ವೇನ್ ಬ್ರಾವೊ, ಡ್ವೇನ್ ಪ್ರಿಟೋರಿಯಸ್, ಮುಕೇಶ್ ಚೌಧರಿ ಮತ್ತು ತುಷಾರ್ ದೇಶಪಾಂಡೆ.<br /><br />ಲಖನೌ ಸೂಪರ್ ಜೈಂಟ್ಸ್: ಕೆ.ಎಲ್. ರಾಹುಲ್ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಎವಿನ್ ಲೂಯಿಸ್, ಮನೀಶ್ ಪಾಂಡೆ, ದೀಪಕ್ ಹೂಡಾ, ಆಯುಷ್ ಬಡೋನಿ, ಕೃಣಾಲ್ ಪಾಂಡ್ಯ, ದುಶ್ಮಂತ ಚಮೀರ, ಆಂಡ್ರ್ಯೂ ಟೈ, ರವಿ ಬೋಪಾರ ಮತ್ತು ಆವೇಶ್ ಖಾನ್.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಗುರುವಾರ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದಿರುವ ಲಖನೌ ಸೂಪರ್ ಜೈಂಟ್ಸ್ ತಂಡದ ನಾಯಕ ಕೆ.ಎಲ್. ರಾಹುಲ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ.</p>.<p>ಮುಂಬೈನ ಬ್ರೆಬೋರ್ನ್ ಕ್ರೀಡಾಂಗಣದಲ್ಲಿ ರೋಚಕ ಪಂದ್ಯವನ್ನು ನಿರೀಕ್ಷಿಸಲಾಗಿದೆ.</p>.<p>ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಮೊದಲ ಪಂದ್ಯದಲ್ಲೇ ಕಹಿ ಅನುಭವಿಸಿತ್ತು. ಅತ್ತ ಇದೇ ಮೊದಲ ಬಾರಿಗೆ ಐಪಿಎಲ್ಗೆ ಎಂಟ್ರಿ ಕೊಟ್ಟಿರುವ ಲಖನೌ ಸೂಪರ್ ಜೈಂಟ್ಸ್ ಕೂಡ ಸೋಲಿನೊಂದಿಗೆ ಅಭಿಯಾನ ಆರಂಭಿಸಿತ್ತು.</p>.<p>ಮಹೇಂದ್ರ ಸಿಂಗ್ ಧೋನಿ, ಚೆನ್ನೈ ತಂಡದ ನಾಯಕತ್ವವನ್ನು ರವೀಂದ್ರ ಜಡೇಜ ಅವರಿಗೆ ಹಸ್ತಾಂತರಿಸಿದ್ದಾರೆ. ಇನ್ನೊಂದೆಡೆ ಕೆ.ಎಲ್. ರಾಹುಲ್ ಲಖನೌ ತಂಡದ ಚುಕ್ಕಾಣಿ ಹಿಡಿದಿದ್ದಾರೆ. ಇತ್ತಂಡಗಳಿಗೂ ಈ ಪಂದ್ಯ ಮಹತ್ವದೆನಿಸಿದೆ.<br /></p>.<p><strong>ಪ್ಲೇಯಿಂಗ್ ಇಲೆವೆನ್:</strong><br /><br />ಚೆನ್ನೈ ಸೂಪರ್ ಕಿಂಗ್ಸ್: ಋತುರಾಜ್ ಗಾಯಕವಾಡ್, ರಾಬಿನ್ ಉತ್ತಪ್ಪ, ಮೊಯಿನ್ ಅಲಿ, ಅಂಬಟಿ ರಾಯುಡು, ರವೀಂದ್ರ ಜಡೇಜ (ನಾಯಕ), ಮಹೇಂದ್ರ ಸಿಂಗ್ ಧೋನಿ (ನಾಯಕ), ಶಿವಂ ದುಬೆ, ಡ್ವೇನ್ ಬ್ರಾವೊ, ಡ್ವೇನ್ ಪ್ರಿಟೋರಿಯಸ್, ಮುಕೇಶ್ ಚೌಧರಿ ಮತ್ತು ತುಷಾರ್ ದೇಶಪಾಂಡೆ.<br /><br />ಲಖನೌ ಸೂಪರ್ ಜೈಂಟ್ಸ್: ಕೆ.ಎಲ್. ರಾಹುಲ್ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಎವಿನ್ ಲೂಯಿಸ್, ಮನೀಶ್ ಪಾಂಡೆ, ದೀಪಕ್ ಹೂಡಾ, ಆಯುಷ್ ಬಡೋನಿ, ಕೃಣಾಲ್ ಪಾಂಡ್ಯ, ದುಶ್ಮಂತ ಚಮೀರ, ಆಂಡ್ರ್ಯೂ ಟೈ, ರವಿ ಬೋಪಾರ ಮತ್ತು ಆವೇಶ್ ಖಾನ್.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>