ಟೂರ್ನಿ ಆರಂಭಕ್ಕೂ ಮುನ್ನ ಜಡೇಜ ಅವರಿಗೆ ಮಹೇಂದ್ರ ಸಿಂಗ್ ಧೋನಿ, ನಾಯಕ ಸ್ಥಾನ ಹಸ್ತಾಂತರಿಸಿದ್ದರು. ಆದರೆ ತಂಡದ ಕಳಪೆ ನಿರ್ವಹಣೆಯ ಹಿನ್ನೆಲೆಯಲ್ಲಿ ಟೂರ್ನಿ ಮಧ್ಯೆ ಮತ್ತೆ ಧೋನಿಗೆ ನಾಯಕ ಪಟ್ಟ ಹಸ್ತಾಂತರಿಸಿದ್ದರು.
ಇದುವರೆಗೆ 11 ಪಂದ್ಯಗಳನ್ನು ಆಡಿರುವ ಚೆನ್ನೈ, ನಾಲ್ಕು ಗೆಲುವಿನೊಂದಿಗೆ ಒಟ್ಟು ಎಂಟು ಅಂಕ ಗಳಿಸಿದ್ದು, ಅಂಕಪಟ್ಟಿಯಲ್ಲಿ ಒಂಬತ್ತನೇ ಸ್ಥಾನದಲ್ಲಿದೆ.