<p><strong>ಮುಂಬೈ:</strong> ಐಪಿಎಲ್ 2022 ಟೂರ್ನಿಯಲ್ಲಿ ಆರಂಭಿಕ ಏಳು ಪಂದ್ಯಗಳಲ್ಲಿ ಐದರಲ್ಲಿ ಗೆದ್ದು ಉತ್ತಮ ಲಯದಲ್ಲಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಏಕಾಏಕಿ ದಿಢೀರ್ ಪತನ ಕಂಡಿದೆ.</p>.<p>ಏಪ್ರಿಲ್ 23ರಂದು ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ಕೇವಲ 68 ರನ್ನಿಗೆ ಆಲೌಟ್ ಆಗುವ ಮೂಲಕ ಸೋಲಿನ ಆಘಾತ ಎದುರಿಸಿದೆ.</p>.<p>ಇದನ್ನೂ ಓದಿ:<a href="https://www.prajavani.net/sports/cricket/ipl-2022-punjab-kings-vs-chennai-super-kings-live-updates-in-kannada-at-mumbai-931472.html" itemprop="url">IPL 2022 PBKS vs CSK: ಪಂಜಾಬ್ ವಿರುದ್ಧ ಟಾಸ್ ಗೆದ್ದ ಚೆನ್ನೈ ಫೀಲ್ಡಿಂಗ್ </a></p>.<p>ಪ್ಲೇ-ಆಫ್ ಹಂತಕ್ಕೆ ಪ್ರವೇಶಿಸಲು ಆರ್ಸಿಬಿ ಆದಷ್ಟು ಬೇಗನೇ ಚೇತರಿಸಿಕೊಳ್ಳುವುದು ಅತಿ ಮುಖ್ಯವೆನಿಸಿದೆ. ಏಪ್ರಿಲ್ 26 ಮಂಗಳವಾರ ನಡೆಯಲಿರುವ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಸವಾಲನ್ನು ಎದುರಿಸಲಿದೆ.</p>.<p>ಅಮೋಘ ಲಯದಲ್ಲಿರುವ ರಾಜಸ್ಥಾನ್ ತಂಡದ ಸವಾಲನ್ನು ಮೀರಿ ನಿಲ್ಲಲು ಆರ್ಸಿಬಿ ಪಂದ್ಯದ ಎಲ್ಲ ವಿಭಾಗದಲ್ಲೂ ಮೇಲುಗೈ ಸಾಧಿಸಬೇಕಿದೆ.</p>.<p><strong>ಕೊಹ್ಲಿಯನ್ನು ಕೈಬಿಡಬೇಕೇ?</strong><br />ಸತತ ಎರಡು ಪಂದ್ಯಗಳಲ್ಲಿ ಸೊನ್ನೆಗೆ ಔಟ್ ಆಗಿರುವ ವಿರಾಟ್ ಕೊಹ್ಲಿ ಅವರನ್ನು ತಂಡದಿಂದ ಕೈಬಿಡಬೇಕೇ ಎಂಬ ಪ್ರಶ್ನೆ ಉದ್ಘವಿಸಿದೆ.</p>.<p>ಸತತ ವೈಫಲ್ಯ ಎದುರಿಸುತ್ತಿರುವ ಕೊಹ್ಲಿಗೆ ವಿಶ್ರಾಂತಿ ಸೂಚಿಸಬೇಕು ಎಂಬುದು ಮಾಜಿ ಕ್ರಿಕೆಟಿಗರ ಸಲಹೆಯಾಗಿದೆ. ಆದರೆ ಕೊಹ್ಲಿಯನ್ನು ಕೈಬಿಟ್ಟರೆ ತಂಡದ ಮನೋಬಲ ಕುಸಿಯುವ ಭೀತಿಯಿದೆ.</p>.<p><strong>ಮೈಕ್ ಹೆಸ್ಸನ್ ಹೇಳಿದ್ದೇನು?</strong><br />ಅಗ್ರ ಕ್ರಮಾಂಕದ ಬ್ಯಾಟರ್ಗಳಿಂದ ನಿರೀಕ್ಷಿತ ಮಟ್ಟದ ಬ್ಯಾಟಿಂಗ್ ದಾಖಲಾಗಿಲ್ಲ. ಆದರೆ ಈ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಗುಣಮಟ್ಟದ ಆಟಗಾರರು ಅಗ್ರ ಕ್ರಮಾಂಕದಲ್ಲಿದ್ದಾರೆ. ಕೆಲವರು ಉತ್ತಮ ಪ್ರದರ್ಶನ ನೀಡಿದಾಗ ಇನ್ನು ಕೆಲವರು ಹಿನ್ನಡೆ ಅನುಭವಿಸಿದ್ದಾರೆ. ಟ್ವೆಂಟಿ-20 ಕ್ರಿಕೆಟ್ನಲ್ಲಿ ಇದು ಸಾಮಾನ್ಯ ಎಂದು ಆರ್ಸಿಬಿ ಕ್ರಿಕೆಟ್ ಕಾರ್ಯಾಚರಣೆಗಳ ನಿರ್ದೇಶಕ ಮೈಕ್ ಹೆಸ್ಸನ್ ಹೇಳಿದ್ದಾರೆ.</p>.<p>ಅಗ್ರ ಕ್ರಮಾಂಕ ವೈಫಲ್ಯ ಕಂಡಾಗ ಮಧ್ಯಮ ಕ್ರಮಾಂಕದ ಬ್ಯಾಟರ್ಗಳು ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಆದರೆ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಯೋಜನೆಗಳು ವೈಫಲ್ಯ ಕಂಡಿದ್ದವು. ಆದರೆ ಈ ಕುರಿತು ಹೆಚ್ಚು ಚಿಂತಿತರಾಗುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಐಪಿಎಲ್ 2022 ಟೂರ್ನಿಯಲ್ಲಿ ಆರಂಭಿಕ ಏಳು ಪಂದ್ಯಗಳಲ್ಲಿ ಐದರಲ್ಲಿ ಗೆದ್ದು ಉತ್ತಮ ಲಯದಲ್ಲಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಏಕಾಏಕಿ ದಿಢೀರ್ ಪತನ ಕಂಡಿದೆ.</p>.<p>ಏಪ್ರಿಲ್ 23ರಂದು ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ಕೇವಲ 68 ರನ್ನಿಗೆ ಆಲೌಟ್ ಆಗುವ ಮೂಲಕ ಸೋಲಿನ ಆಘಾತ ಎದುರಿಸಿದೆ.</p>.<p>ಇದನ್ನೂ ಓದಿ:<a href="https://www.prajavani.net/sports/cricket/ipl-2022-punjab-kings-vs-chennai-super-kings-live-updates-in-kannada-at-mumbai-931472.html" itemprop="url">IPL 2022 PBKS vs CSK: ಪಂಜಾಬ್ ವಿರುದ್ಧ ಟಾಸ್ ಗೆದ್ದ ಚೆನ್ನೈ ಫೀಲ್ಡಿಂಗ್ </a></p>.<p>ಪ್ಲೇ-ಆಫ್ ಹಂತಕ್ಕೆ ಪ್ರವೇಶಿಸಲು ಆರ್ಸಿಬಿ ಆದಷ್ಟು ಬೇಗನೇ ಚೇತರಿಸಿಕೊಳ್ಳುವುದು ಅತಿ ಮುಖ್ಯವೆನಿಸಿದೆ. ಏಪ್ರಿಲ್ 26 ಮಂಗಳವಾರ ನಡೆಯಲಿರುವ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಸವಾಲನ್ನು ಎದುರಿಸಲಿದೆ.</p>.<p>ಅಮೋಘ ಲಯದಲ್ಲಿರುವ ರಾಜಸ್ಥಾನ್ ತಂಡದ ಸವಾಲನ್ನು ಮೀರಿ ನಿಲ್ಲಲು ಆರ್ಸಿಬಿ ಪಂದ್ಯದ ಎಲ್ಲ ವಿಭಾಗದಲ್ಲೂ ಮೇಲುಗೈ ಸಾಧಿಸಬೇಕಿದೆ.</p>.<p><strong>ಕೊಹ್ಲಿಯನ್ನು ಕೈಬಿಡಬೇಕೇ?</strong><br />ಸತತ ಎರಡು ಪಂದ್ಯಗಳಲ್ಲಿ ಸೊನ್ನೆಗೆ ಔಟ್ ಆಗಿರುವ ವಿರಾಟ್ ಕೊಹ್ಲಿ ಅವರನ್ನು ತಂಡದಿಂದ ಕೈಬಿಡಬೇಕೇ ಎಂಬ ಪ್ರಶ್ನೆ ಉದ್ಘವಿಸಿದೆ.</p>.<p>ಸತತ ವೈಫಲ್ಯ ಎದುರಿಸುತ್ತಿರುವ ಕೊಹ್ಲಿಗೆ ವಿಶ್ರಾಂತಿ ಸೂಚಿಸಬೇಕು ಎಂಬುದು ಮಾಜಿ ಕ್ರಿಕೆಟಿಗರ ಸಲಹೆಯಾಗಿದೆ. ಆದರೆ ಕೊಹ್ಲಿಯನ್ನು ಕೈಬಿಟ್ಟರೆ ತಂಡದ ಮನೋಬಲ ಕುಸಿಯುವ ಭೀತಿಯಿದೆ.</p>.<p><strong>ಮೈಕ್ ಹೆಸ್ಸನ್ ಹೇಳಿದ್ದೇನು?</strong><br />ಅಗ್ರ ಕ್ರಮಾಂಕದ ಬ್ಯಾಟರ್ಗಳಿಂದ ನಿರೀಕ್ಷಿತ ಮಟ್ಟದ ಬ್ಯಾಟಿಂಗ್ ದಾಖಲಾಗಿಲ್ಲ. ಆದರೆ ಈ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಗುಣಮಟ್ಟದ ಆಟಗಾರರು ಅಗ್ರ ಕ್ರಮಾಂಕದಲ್ಲಿದ್ದಾರೆ. ಕೆಲವರು ಉತ್ತಮ ಪ್ರದರ್ಶನ ನೀಡಿದಾಗ ಇನ್ನು ಕೆಲವರು ಹಿನ್ನಡೆ ಅನುಭವಿಸಿದ್ದಾರೆ. ಟ್ವೆಂಟಿ-20 ಕ್ರಿಕೆಟ್ನಲ್ಲಿ ಇದು ಸಾಮಾನ್ಯ ಎಂದು ಆರ್ಸಿಬಿ ಕ್ರಿಕೆಟ್ ಕಾರ್ಯಾಚರಣೆಗಳ ನಿರ್ದೇಶಕ ಮೈಕ್ ಹೆಸ್ಸನ್ ಹೇಳಿದ್ದಾರೆ.</p>.<p>ಅಗ್ರ ಕ್ರಮಾಂಕ ವೈಫಲ್ಯ ಕಂಡಾಗ ಮಧ್ಯಮ ಕ್ರಮಾಂಕದ ಬ್ಯಾಟರ್ಗಳು ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಆದರೆ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಯೋಜನೆಗಳು ವೈಫಲ್ಯ ಕಂಡಿದ್ದವು. ಆದರೆ ಈ ಕುರಿತು ಹೆಚ್ಚು ಚಿಂತಿತರಾಗುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>