<p><strong>ಚೆನ್ನೈ:</strong> ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2022ನೇ ಸಾಲಿನ ಟ್ವೆಂಟಿ-20 ಕ್ರಿಕೆಟ್ ಟೂರ್ನಿ ಆರಂಭಕ್ಕೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ತಂಡದ ನಾಯಕತ್ವವನ್ನು ವರ್ಗಾಯಿಸಿರುವ ಮಹೇಂದ್ರ ಸಿಂಗ್ ಧೋನಿ, ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದ್ದಾರೆ.</p>.<p>ಈ ಹಿಂದೆ ಟೀಮ್ ಇಂಡಿಯಾ ನಾಯಕತ್ವ ತ್ಯಜಿಸಿದಾಗಲೂ ಧೋನಿ ದಿಢೀರ್ ನಿರ್ಧಾರ ಕೈಗೊಂಡಿದ್ದರು.</p>.<p>ಇದನ್ನೂ ಓದಿ:<a href="https://www.prajavani.net/sports/cricket/ipl-2022-ms-dhoni-hands-over-captaincy-of-chennai-super-kings-to-ravindra-jadeja-922252.html" itemprop="url">ಬ್ರೇಕಿಂಗ್: ಸಿಎಸ್ಕೆ ನಾಯಕತ್ವ ತ್ಯಜಿಸಿದ ಧೋನಿ, ಹೊಸ ಕಪ್ತಾನ ಯಾರು ? </a></p>.<p>ಆಲ್ರೌಂಡರ್ ರವೀಂದ್ರ ಜಡೇಜ ಅವರಿಗೆ ನಾಯಕತ್ವವನ್ನು ಧೋನಿ ಹಸ್ತಾಂತರಿಸಿದ್ದಾರೆ. ಅಲ್ಲದೆ ಓರ್ವ ಆಟಗಾರನಾಗಿ ಮುಂದುವರಿಯಲಿದ್ದಾರೆ.</p>.<p><strong>ಧೋನಿ ನಡೆ ಹಿಂದಿನ ಕಾರಣವೇನು ?</strong><br />ಹಾಲಿ ಚಾಂಪಿಯನ್ ಚೆನ್ನೈ ತಂಡದ ನಾಯಕತ್ವವನ್ನು ಧೋನಿ ತ್ಯಜಿಸಿರುವುದು ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿರಬಹುದು. ಆದರೆ ಈ ಕುರಿತು 'ಇಎಸ್ಪಿಎನ್ ಕ್ರಿಕ್ಇನ್ಫೋ'ಗೆ ಸಿಎಸ್ಕೆ ಸಿಇಒ ಕಾಶಿ ವಿಶ್ವನಾಥನ್ ಪ್ರತಿಕ್ರಿಯೆ ನೀಡಿದ್ದಾರೆ.</p>.<p>ನಾಯಕತ್ವ ಹಸ್ತಾಂತರ ಪ್ರಕ್ರಿಯೆ ಸುಗಮವಾಗಿರಬೇಕು ಎಂದು ಧೋನಿ ಬಯಸಿದ್ದರು. ಇವೆಲ್ಲಕ್ಕೂ ಮಿಗಿಲಾಗಿ ರವೀಂದ್ರ ಜಡೇಜ ಅವರಿಗೆ ಕಪ್ತಾನಗಿರಿ ವರ್ಗಾಯಿಸಲು ಇದುವೇ ಸೂಕ್ತ ಸಮಯ ಎಂಬುದನ್ನು ಧೋನಿ ಅರಿತುಕೊಂಡಿದ್ದರು ಎಂದು ವಿಶ್ವನಾಥನ್ ವಿವರಿಸಿದ್ದಾರೆ.</p>.<p>ಇದು ಧೋನಿ ಆಲೋಚನೆಯಲ್ಲಿತ್ತು. ಅಲ್ಲದೆಸರಿಯಾದಸಮಯಕ್ಕಾಗಿ ಕಾಯುತ್ತಿದ್ದರು. ತಮ್ಮ ವೃತ್ತಿ ಜೀವನದ ಉತ್ತುಂಗದಲ್ಲಿರುವ ಜಡೇಜ ಅವರಿಗೆ ನಾಯಕತ್ವ ವಹಿಸಿಕೊಡಲು ಇದುವೇಸೂಕ್ತ ಸಮಯ ಎಂದು ನಂಬಿದ್ದರು. ಫ್ರಾಂಚೈಸ್ ಹಿತದೃಷ್ಟಿಯು ಅವರ ಮನದಲ್ಲಿತ್ತು ಎಂದು ಹೇಳಿದ್ದಾರೆ.</p>.<p><br /><br />ವೈಯಕ್ತಿಕವಾಗಿ ಈ ಬಗ್ಗೆ ಧೋನಿ ಹೇಳದಿದ್ದರೂ ಕಳೆದ ವರ್ಷವೇ ಜಡೇಜಗೆ ವಿಷಯ ಮುಟ್ಟಿಸಲಾಗಿತ್ತು. ಯಾಕೆಂದರೆ ಧೋನಿ ಸ್ಥಾನ ತುಂಬಲು ಜಡೇಜ ಸಮರ್ಥರು ಎಂಬುದನ್ನು ಫ್ರಾಂಚೈಸ್ ಅರಿತುಕೊಂಡಿತ್ತು. ಅಲ್ಲದೆ ಓರ್ವ ಆಟಗಾರನಾಗಿ ಹೊಸ ನಾಯಕನಿಗೆ ಧೋನಿ ನೆರವು ಕೂಡಾ ಸಿಗಲಿದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2022ನೇ ಸಾಲಿನ ಟ್ವೆಂಟಿ-20 ಕ್ರಿಕೆಟ್ ಟೂರ್ನಿ ಆರಂಭಕ್ಕೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ತಂಡದ ನಾಯಕತ್ವವನ್ನು ವರ್ಗಾಯಿಸಿರುವ ಮಹೇಂದ್ರ ಸಿಂಗ್ ಧೋನಿ, ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದ್ದಾರೆ.</p>.<p>ಈ ಹಿಂದೆ ಟೀಮ್ ಇಂಡಿಯಾ ನಾಯಕತ್ವ ತ್ಯಜಿಸಿದಾಗಲೂ ಧೋನಿ ದಿಢೀರ್ ನಿರ್ಧಾರ ಕೈಗೊಂಡಿದ್ದರು.</p>.<p>ಇದನ್ನೂ ಓದಿ:<a href="https://www.prajavani.net/sports/cricket/ipl-2022-ms-dhoni-hands-over-captaincy-of-chennai-super-kings-to-ravindra-jadeja-922252.html" itemprop="url">ಬ್ರೇಕಿಂಗ್: ಸಿಎಸ್ಕೆ ನಾಯಕತ್ವ ತ್ಯಜಿಸಿದ ಧೋನಿ, ಹೊಸ ಕಪ್ತಾನ ಯಾರು ? </a></p>.<p>ಆಲ್ರೌಂಡರ್ ರವೀಂದ್ರ ಜಡೇಜ ಅವರಿಗೆ ನಾಯಕತ್ವವನ್ನು ಧೋನಿ ಹಸ್ತಾಂತರಿಸಿದ್ದಾರೆ. ಅಲ್ಲದೆ ಓರ್ವ ಆಟಗಾರನಾಗಿ ಮುಂದುವರಿಯಲಿದ್ದಾರೆ.</p>.<p><strong>ಧೋನಿ ನಡೆ ಹಿಂದಿನ ಕಾರಣವೇನು ?</strong><br />ಹಾಲಿ ಚಾಂಪಿಯನ್ ಚೆನ್ನೈ ತಂಡದ ನಾಯಕತ್ವವನ್ನು ಧೋನಿ ತ್ಯಜಿಸಿರುವುದು ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿರಬಹುದು. ಆದರೆ ಈ ಕುರಿತು 'ಇಎಸ್ಪಿಎನ್ ಕ್ರಿಕ್ಇನ್ಫೋ'ಗೆ ಸಿಎಸ್ಕೆ ಸಿಇಒ ಕಾಶಿ ವಿಶ್ವನಾಥನ್ ಪ್ರತಿಕ್ರಿಯೆ ನೀಡಿದ್ದಾರೆ.</p>.<p>ನಾಯಕತ್ವ ಹಸ್ತಾಂತರ ಪ್ರಕ್ರಿಯೆ ಸುಗಮವಾಗಿರಬೇಕು ಎಂದು ಧೋನಿ ಬಯಸಿದ್ದರು. ಇವೆಲ್ಲಕ್ಕೂ ಮಿಗಿಲಾಗಿ ರವೀಂದ್ರ ಜಡೇಜ ಅವರಿಗೆ ಕಪ್ತಾನಗಿರಿ ವರ್ಗಾಯಿಸಲು ಇದುವೇ ಸೂಕ್ತ ಸಮಯ ಎಂಬುದನ್ನು ಧೋನಿ ಅರಿತುಕೊಂಡಿದ್ದರು ಎಂದು ವಿಶ್ವನಾಥನ್ ವಿವರಿಸಿದ್ದಾರೆ.</p>.<p>ಇದು ಧೋನಿ ಆಲೋಚನೆಯಲ್ಲಿತ್ತು. ಅಲ್ಲದೆಸರಿಯಾದಸಮಯಕ್ಕಾಗಿ ಕಾಯುತ್ತಿದ್ದರು. ತಮ್ಮ ವೃತ್ತಿ ಜೀವನದ ಉತ್ತುಂಗದಲ್ಲಿರುವ ಜಡೇಜ ಅವರಿಗೆ ನಾಯಕತ್ವ ವಹಿಸಿಕೊಡಲು ಇದುವೇಸೂಕ್ತ ಸಮಯ ಎಂದು ನಂಬಿದ್ದರು. ಫ್ರಾಂಚೈಸ್ ಹಿತದೃಷ್ಟಿಯು ಅವರ ಮನದಲ್ಲಿತ್ತು ಎಂದು ಹೇಳಿದ್ದಾರೆ.</p>.<p><br /><br />ವೈಯಕ್ತಿಕವಾಗಿ ಈ ಬಗ್ಗೆ ಧೋನಿ ಹೇಳದಿದ್ದರೂ ಕಳೆದ ವರ್ಷವೇ ಜಡೇಜಗೆ ವಿಷಯ ಮುಟ್ಟಿಸಲಾಗಿತ್ತು. ಯಾಕೆಂದರೆ ಧೋನಿ ಸ್ಥಾನ ತುಂಬಲು ಜಡೇಜ ಸಮರ್ಥರು ಎಂಬುದನ್ನು ಫ್ರಾಂಚೈಸ್ ಅರಿತುಕೊಂಡಿತ್ತು. ಅಲ್ಲದೆ ಓರ್ವ ಆಟಗಾರನಾಗಿ ಹೊಸ ನಾಯಕನಿಗೆ ಧೋನಿ ನೆರವು ಕೂಡಾ ಸಿಗಲಿದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>