ಸತತ ಎಂಟು ಸೋಲು ಎದುರಿಸಿರುವ ಮುಂಬೈ ತಂಡದ ಪ್ಲೇ-ಆಫ್ ಹಾದಿ ಕಠಿಣವೆನಿಸಿದೆ. ಹಾಗಾಗಿ ಹನ್ನೊಂದರ ಬಳಗದಲ್ಲಿ ಬದಲಾವಣೆ ತರಲಾಗುವುದೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ರೋಹಿತ್, 'ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆದವದರು ಸಾಕಷ್ಟು ಅವಕಾಶ ಪಡೆಯುತ್ತಾರೆ ಎಂಬುದನ್ನು ಖಾತ್ರಿಪಡಿಸಲು ಬಯಸುತ್ತೇವೆ. ಹಾಗಾಗಿ ಹೆಚ್ಚಿನ ಬದಲಾವಣೆಗಳನ್ನು ಮಾಡದಿರಲು ಪ್ರಯತ್ನಿಸುತ್ತೇವೆ' ಎಂದು ಹೇಳಿದ್ದಾರೆ.