ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಬೈ ಗಾಯದ ಮೇಲೆ ಬರೆ; ಗಾಯಾಳು ಸೂರ್ಯಕುಮಾರ್ ಟೂರ್ನಿಯಿಂದ ಔಟ್

ಅಕ್ಷರ ಗಾತ್ರ

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ 2022ನೇ ಸಾಲಿನ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಉಳಿದಿರುವ ಪಂದ್ಯಗಳಲ್ಲಿ ಗಾಯಾಳು ಸೂರ್ಯಕುಮಾರ್ ಯಾದವ್ ಆಟದಿಂದಮುಂಬೈ ಇಂಡಿಯನ್ಸ್ ವಂಚಿತವಾಗಿದೆ.

ಇದರೊಂದಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಎಡಗೈ ನೋವು ಅನುಭವಿಸುತ್ತಿರುವ ಸೂರ್ಯಕುಮಾರ್ ಅವರಿಗೆ ವಿಶ್ರಾಂತಿ ಸೂಚಿಸಲಾಗಿದೆ.

ಮೇ 6ರಂದು ಗುಜರಾತ್ ಟೈಟನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಸೂರ್ಯಕುಮಾರ್‌ಗೆ ಗಾಯವಾಗಿತ್ತು.

ಬಿಸಿಸಿಐ ವೈದ್ಯಕೀಯ ತಂಡದೊಂದಿಗೆ ಸಮಾಲೋಚಿಸಿ ವಿಶ್ರಾಂತಿ ಸೂಚಿಸಲಾಗಿದೆ ಎಂದು ಮುಂಬೈ ಇಂಡಿಯನ್ಸ್ ಟ್ವೀಟ್ ಮೂಲಕ ತಿಳಿಸಿದೆ.

ಸೂರ್ಯಕುಮಾರ್ ಆಡಿರುವ ಎಂಟು ಪಂದ್ಯಗಳಲ್ಲಿ 43.29 ಸರಾಸರಿಯಲ್ಲಿ 303 ರನ್ ಗಳಿಸಿದ್ದಾರೆ. ಇದರಲ್ಲಿ ಮೂರು ಅರ್ಧಶತಕಗಳು ಸೇರಿವೆ.

ಅತ್ತ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡದ ಪ್ಲೇ-ಆಫ್ ಕನಸು ಭಗ್ನಗೊಂಡಿದೆ. 10 ಪಂದ್ಯಗಳಲ್ಲಿ ಎರಡು ಗೆಲುವು ಮಾತ್ರ ಗಳಿಸಿದ್ದು, ನಾಲ್ಕು ಅಂಕಗಳನ್ನು ಹೊಂದಿದೆ.

ಈಗ ಉಳಿದಿರುವ ನಾಲ್ಕು ಪಂದ್ಯಗಳಲ್ಲಿ ಮುಂಬೈಗೆ ಸೂರ್ಯಕುಮಾರ್ ಅಲಭ್ಯತೆ ಕಾಡಲಿದೆ. ಸೋಮವಾರ ನಡೆಯುತ್ತಿರುವ ಪಂದ್ಯದಲ್ಲಿ ಮುಂಬೈ ತಂಡವು ಕೋಲ್ಕತ್ತ ನೈಟ್ ರೈಡರ್ಸ್ ಸವಾಲನ್ನು ಎದುರಿಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT