<p><strong>ಚೆನ್ನೈ:</strong> ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ 2024ನೇ ಸಾಲಿನ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ ಆರಂಭಕ್ಕೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಸ್ಥಾನವನ್ನು ಮಹೇಂದ್ರ ಸಿಂಗ್ ಧೋನಿ ತ್ಯಜಿಸಿದ್ದಾರೆ. </p><p>ಅಲ್ಲದೆ ಸಿಎಸ್ಕೆ ತಂಡದ ನೂತನ ಕ್ಯಾಪ್ಟನ್ ಆಗಿ ಯುವ ಭರವಸೆಯ ಆಟಗಾರ ಋತುರಾಜ್ ಗಾಯಕವಾಡ್ ಅವರನ್ನು ನೇಮಕ ಮಾಡಲಾಗಿದೆ. </p><p>ಮಾರ್ಚ್ 22ರಂದು ಚೆನ್ನೈನ ಎಂ.ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸವಾಲನ್ನು ಎದುರಿಸಲಿದೆ. </p><p>ಇದಕ್ಕೂ ಒಂದು ದಿನ ಮುಂಚಿತವಾಗಿ ನಾಯಕ ಸ್ಥಾನ ಬಿಟ್ಟುಕೊಡಲು ಧೋನಿ ನಿರ್ಧರಿಸಿದ್ದಾರೆ. ಈ ಕುರಿತು ಸಿಎಸ್ಕೆ ತನ್ನ ಅಧಿಕೃತ 'ಎಕ್ಸ್' ಖಾತೆಯಲ್ಲಿ ಪ್ರಕಟಿಸಿದೆ. </p>. <p>ಧೋನಿ ನಾಯಕತ್ವದ ಅಡಿಯಲ್ಲಿ ಸಿಎಸ್ಕೆ, ಐದು ಬಾರಿ ಐಪಿಎಲ್ ಟ್ರೋಫಿ ಗೆದ್ದಿದೆ. 42 ವರ್ಷದ ಧೋನಿ, ಪ್ರಸಕ್ತ ಸಾಲಿನ ಬಳಿಕ ಐಪಿಎಲ್ಗೂ ನಿವೃತ್ತಿ ಘೋಷಿಸುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ನಾಯಕತ್ವ ಹಸ್ತಾಂತರ ಪ್ರಕ್ರಿಯೆ ಸುಗಮವಾಗಿ ನಡೆಯಲು ಕ್ಯಾಪ್ಟನ್ ಸ್ಥಾನ ಬಿಟ್ಟುಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ. </p><p>ಮತ್ತೊಂದೆಡೆ 2020ರಲ್ಲಿ ಚೆನ್ನೈ ಪರ ಪದಾರ್ಪಣೆ ಮಾಡಿರುವ ಋತುರಾಜ್, ಒಟ್ಟು 52 ಪಂದ್ಯಗಳನ್ನು ಆಡಿದ್ದಾರೆ. ಒಂದು ಶತಕವನ್ನು ಗಳಿಸಿದ್ದಾರೆ. ಕಳೆದ ವರ್ಷ 16 ಪಂದ್ಯಗಳಲ್ಲಿ 147.50 ಸ್ಟ್ರೈಕ್ರೇಟ್ನಲ್ಲಿ 590 ರನ್ ಗಳಿಸಿದ್ದರು. </p>.IPL 2024: RCB vs CSK ಉದ್ಘಾಟನಾ ಪಂದ್ಯ; ಧೋನಿ-ಕೊಹ್ಲಿ ಮೇಲೆ ಎಲ್ಲರ ಕಣ್ಣು.ಕೊಹ್ಲಿ-ಅನುಷ್ಕಾ ದಂಪತಿಗೆ ಗಂಡು ಮಗು ಜನನ; ಊಹಾಪೋಹಗಳಿಗೆ ತೆರೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ 2024ನೇ ಸಾಲಿನ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ ಆರಂಭಕ್ಕೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಸ್ಥಾನವನ್ನು ಮಹೇಂದ್ರ ಸಿಂಗ್ ಧೋನಿ ತ್ಯಜಿಸಿದ್ದಾರೆ. </p><p>ಅಲ್ಲದೆ ಸಿಎಸ್ಕೆ ತಂಡದ ನೂತನ ಕ್ಯಾಪ್ಟನ್ ಆಗಿ ಯುವ ಭರವಸೆಯ ಆಟಗಾರ ಋತುರಾಜ್ ಗಾಯಕವಾಡ್ ಅವರನ್ನು ನೇಮಕ ಮಾಡಲಾಗಿದೆ. </p><p>ಮಾರ್ಚ್ 22ರಂದು ಚೆನ್ನೈನ ಎಂ.ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸವಾಲನ್ನು ಎದುರಿಸಲಿದೆ. </p><p>ಇದಕ್ಕೂ ಒಂದು ದಿನ ಮುಂಚಿತವಾಗಿ ನಾಯಕ ಸ್ಥಾನ ಬಿಟ್ಟುಕೊಡಲು ಧೋನಿ ನಿರ್ಧರಿಸಿದ್ದಾರೆ. ಈ ಕುರಿತು ಸಿಎಸ್ಕೆ ತನ್ನ ಅಧಿಕೃತ 'ಎಕ್ಸ್' ಖಾತೆಯಲ್ಲಿ ಪ್ರಕಟಿಸಿದೆ. </p>. <p>ಧೋನಿ ನಾಯಕತ್ವದ ಅಡಿಯಲ್ಲಿ ಸಿಎಸ್ಕೆ, ಐದು ಬಾರಿ ಐಪಿಎಲ್ ಟ್ರೋಫಿ ಗೆದ್ದಿದೆ. 42 ವರ್ಷದ ಧೋನಿ, ಪ್ರಸಕ್ತ ಸಾಲಿನ ಬಳಿಕ ಐಪಿಎಲ್ಗೂ ನಿವೃತ್ತಿ ಘೋಷಿಸುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ನಾಯಕತ್ವ ಹಸ್ತಾಂತರ ಪ್ರಕ್ರಿಯೆ ಸುಗಮವಾಗಿ ನಡೆಯಲು ಕ್ಯಾಪ್ಟನ್ ಸ್ಥಾನ ಬಿಟ್ಟುಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ. </p><p>ಮತ್ತೊಂದೆಡೆ 2020ರಲ್ಲಿ ಚೆನ್ನೈ ಪರ ಪದಾರ್ಪಣೆ ಮಾಡಿರುವ ಋತುರಾಜ್, ಒಟ್ಟು 52 ಪಂದ್ಯಗಳನ್ನು ಆಡಿದ್ದಾರೆ. ಒಂದು ಶತಕವನ್ನು ಗಳಿಸಿದ್ದಾರೆ. ಕಳೆದ ವರ್ಷ 16 ಪಂದ್ಯಗಳಲ್ಲಿ 147.50 ಸ್ಟ್ರೈಕ್ರೇಟ್ನಲ್ಲಿ 590 ರನ್ ಗಳಿಸಿದ್ದರು. </p>.IPL 2024: RCB vs CSK ಉದ್ಘಾಟನಾ ಪಂದ್ಯ; ಧೋನಿ-ಕೊಹ್ಲಿ ಮೇಲೆ ಎಲ್ಲರ ಕಣ್ಣು.ಕೊಹ್ಲಿ-ಅನುಷ್ಕಾ ದಂಪತಿಗೆ ಗಂಡು ಮಗು ಜನನ; ಊಹಾಪೋಹಗಳಿಗೆ ತೆರೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>