ಬೆಂಗಳೂರು: ಪಂದ್ಯ ನಡೆಯುವ ಸಮಯದಲ್ಲಿ ಎಷ್ಟೇ ಜೋರಾಗಿ ಮಳೆ ಬಂದರೂ 15 ರಿಂದ 20 ನಿಮಿಷದೊಳಗೆ ಮತ್ತೆ ಪಂದ್ಯ ಮುಂದುವರಿಯಲು ಅವಕಾಶ ಮಾಡಿಕೊಡುವ ಸೌಲಭ್ಯ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿದೆ.
ದಶಕದ ಹಿಂದೆ ಇಲ್ಲಿ ಅಳವಡಿಸಲಾಗಿರುವ ಸಬ್ ಏರ್ ಸಿಸ್ಟಂ ತಂತ್ರಜ್ಞಾನದಿಂದ ಮಳೆ ನೀರನ್ನು ಶೀಘ್ರವಾಗಿ ಹೊರಹಾಕಬಹುದು. ಮೈದಾನವನ್ನು ಪಂದ್ಯಕ್ಕೆ ಅಣಿಗೊಳಿಸಬಹುದು. ಆದ್ದರಿಂದ ಮಳೆಯಿಂದಾಗಿ ಪಂದ್ಯ ರದ್ದಾಗುವುದು ತೀರಾ ವಿರಳ ಎಂದು ಕೆಎಸ್ಸಿಎ ಮೂಲಗಳು ಹೇಳುತ್ತವೆ.