<p><strong>ಗುವಾಹಟಿ</strong>: ಭಾನುವಾರ ರಾತ್ರಿ ಇಲ್ಲಿ ನಡೆಯಬೇಕಿದ್ದ ರಾಜಸ್ಥಾನ ರಾಯಲ್ಸ್ ಮತ್ತು ಕೋಲ್ಕತ್ತ ನೈಟ್ ರೈಡರ್ಸ್ ಪಂದ್ಯವು ಮಳೆಯಿಂದಾಗಿ ರದ್ದಾಯಿತು. ಇದರೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಪಡೆಯುವ ರಾಜಸ್ಥಾನದ ಗುರಿ ಈಡೇರಲಿಲ್ಲ. ಟೂರ್ನಿಯ ಕೊನೆಯ ಲೀಗ್ ಪಂದ್ಯ ಇದಾಗಿತ್ತು. </p><p>ಇದೇ 22ರಂದು ಅಹಮದಾಬಾದಿನಲ್ಲಿ ನಡೆಯಲಿರುವ ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ರಾಜಸ್ಥಾನ ರಾಯಲ್ಸ್ ಎದುರಿಸಲಿದೆ. ಆರ್ಸಿಬಿ ಅಂಕಪಟ್ಟಿಯ ನಾಲ್ಕನೇ ಸ್ಥಾನದಲ್ಲಿದೆ. </p><p>ಅಗ್ರಸ್ಥಾನದಲ್ಲಿರುವ ಕೋಲ್ಕತ್ತ ನೈಟ್ ರೈಡರ್ಸ್ ಹಾಗೂ ಎರಡನೇ ಸ್ಥಾನದಲ್ಲಿರುವ ಸನ್ರೈಸರ್ಸ್ ಹೈದರಾಬಾದ್ ತಂಡಗಳು 21ರಂದು ನಡೆಯುವ ಮೊದಲ ಕ್ವಾಲಿಫೈಯರ್ನಲ್ಲಿ ಮುಖಾಮುಖಿಯಾಗಲಿವೆ. ಈ ಪಂದ್ಯದಲ್ಲಿ ಸೋತ ತಂಡ ಹಾಗೂ ಎಲಿಮಿನೇಟರ್ನಲ್ಲಿ ಜಯಿಸಿದ ತಂಡವು 24ರಂದು ಚೆನ್ನೈನಲ್ಲಿ ನಡೆಯುವ ಎರಡನೇ ಕ್ವಾಲಿಫೈಯರ್ನಲ್ಲಿ ಹಣಾಹಣಿ ನಡೆಸಲಿವೆ. 26ರಂದು ಫೈನಲ್ ನಡೆಯಲಿದೆ. </p><p>ರಾಜಸ್ಥಾನ ತಂಡಕ್ಕೆ ಎರಡನೇ ಸ್ಥಾನ ಪಡೆಯಲು ಈ ಪಂದ್ಯದ ಗೆಲುವು ಮುಖ್ಯವಾಗಿತ್ತು. ಆದರೆ ಸಂಜೆಯಿಂದಲೇ ಮಳೆ ಸುರಿಯಲು ಆರಂಭವಾಯಿತು. ಗುವಾಹಟಿಯು ರಾಜಸ್ಥಾನ ತಂಡಕ್ಕೆ ಎರಡನೇ ತವರು ತಾಣವಾಗಿದೆ.</p><p>ಬರ್ಸಾಪರ ಕ್ರಿಕೆಟ್ ಕ್ರೀಡಾಂಗಣದಲ್ಲಿ ಸೇರಿದ್ದ ಪ್ರೇಕ್ಷಕರು ನಿರಾಶೆಗೊಂಡರು. ಸ್ಥಳೀಯ ಹುಡುಗ ರಿಯಾನ್ ಪರಾಗ್ ಅವರ ಆಟ ನೋಡುವ ಅವರ ನಿರೀಕ್ಷೆಯೂ ಈಡೇರಲಿಲ್ಲ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ</strong>: ಭಾನುವಾರ ರಾತ್ರಿ ಇಲ್ಲಿ ನಡೆಯಬೇಕಿದ್ದ ರಾಜಸ್ಥಾನ ರಾಯಲ್ಸ್ ಮತ್ತು ಕೋಲ್ಕತ್ತ ನೈಟ್ ರೈಡರ್ಸ್ ಪಂದ್ಯವು ಮಳೆಯಿಂದಾಗಿ ರದ್ದಾಯಿತು. ಇದರೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಪಡೆಯುವ ರಾಜಸ್ಥಾನದ ಗುರಿ ಈಡೇರಲಿಲ್ಲ. ಟೂರ್ನಿಯ ಕೊನೆಯ ಲೀಗ್ ಪಂದ್ಯ ಇದಾಗಿತ್ತು. </p><p>ಇದೇ 22ರಂದು ಅಹಮದಾಬಾದಿನಲ್ಲಿ ನಡೆಯಲಿರುವ ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ರಾಜಸ್ಥಾನ ರಾಯಲ್ಸ್ ಎದುರಿಸಲಿದೆ. ಆರ್ಸಿಬಿ ಅಂಕಪಟ್ಟಿಯ ನಾಲ್ಕನೇ ಸ್ಥಾನದಲ್ಲಿದೆ. </p><p>ಅಗ್ರಸ್ಥಾನದಲ್ಲಿರುವ ಕೋಲ್ಕತ್ತ ನೈಟ್ ರೈಡರ್ಸ್ ಹಾಗೂ ಎರಡನೇ ಸ್ಥಾನದಲ್ಲಿರುವ ಸನ್ರೈಸರ್ಸ್ ಹೈದರಾಬಾದ್ ತಂಡಗಳು 21ರಂದು ನಡೆಯುವ ಮೊದಲ ಕ್ವಾಲಿಫೈಯರ್ನಲ್ಲಿ ಮುಖಾಮುಖಿಯಾಗಲಿವೆ. ಈ ಪಂದ್ಯದಲ್ಲಿ ಸೋತ ತಂಡ ಹಾಗೂ ಎಲಿಮಿನೇಟರ್ನಲ್ಲಿ ಜಯಿಸಿದ ತಂಡವು 24ರಂದು ಚೆನ್ನೈನಲ್ಲಿ ನಡೆಯುವ ಎರಡನೇ ಕ್ವಾಲಿಫೈಯರ್ನಲ್ಲಿ ಹಣಾಹಣಿ ನಡೆಸಲಿವೆ. 26ರಂದು ಫೈನಲ್ ನಡೆಯಲಿದೆ. </p><p>ರಾಜಸ್ಥಾನ ತಂಡಕ್ಕೆ ಎರಡನೇ ಸ್ಥಾನ ಪಡೆಯಲು ಈ ಪಂದ್ಯದ ಗೆಲುವು ಮುಖ್ಯವಾಗಿತ್ತು. ಆದರೆ ಸಂಜೆಯಿಂದಲೇ ಮಳೆ ಸುರಿಯಲು ಆರಂಭವಾಯಿತು. ಗುವಾಹಟಿಯು ರಾಜಸ್ಥಾನ ತಂಡಕ್ಕೆ ಎರಡನೇ ತವರು ತಾಣವಾಗಿದೆ.</p><p>ಬರ್ಸಾಪರ ಕ್ರಿಕೆಟ್ ಕ್ರೀಡಾಂಗಣದಲ್ಲಿ ಸೇರಿದ್ದ ಪ್ರೇಕ್ಷಕರು ನಿರಾಶೆಗೊಂಡರು. ಸ್ಥಳೀಯ ಹುಡುಗ ರಿಯಾನ್ ಪರಾಗ್ ಅವರ ಆಟ ನೋಡುವ ಅವರ ನಿರೀಕ್ಷೆಯೂ ಈಡೇರಲಿಲ್ಲ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>