<p><strong>ಹೈದರಾಬಾದ್</strong>: ಇಲ್ಲಿ ನಡೆಯುತ್ತಿರುವ ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಐಪಿಎಲ್ ಕ್ರಿಕೆಟ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ನಿಗದಿತ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 165 ರನ್ ಕಲೆ ಹಾಕಿದೆ. </p><p>ಚೆನ್ನೈ ಬ್ಯಾಟರ್ಗಳು ಆರಂಭದಿಂದಲೇ ಹೈದರಾಬಾದ್ ಬೌಲಿಂಗ್ ದಾಳಿ ಎದುರು ರನ್ ಗಳಿಸಲು ಪರದಾಡಿದರು. ಶಿವಂ ದುಬೆ ಬಿರುಸಿನ ಬ್ಯಾಟಿಂಗ್ ಮೂಲಕ ಚೆನ್ನೈಗೆ ಹುರುಪು ತುಂಬಿದರು.</p><p>ಶಿವಂ ದುಬೆ 45(24 ಎಸೆತ, 2 ಬೌಂಡರಿ, 4 ಸಿಕ್ಸರ್), ಅಜಿಂಕ್ಯ ರಹಾನೆ 35, ರವೀಂದ್ರ ಜಡೇಜ ಅಜೇಯ 31 ರನ್ ಸಿಡಿಸಿದರು. ನಾಯಕ ಋತುರಾಜ್ ಗಾಯಕ್ವಾಡ್ 26 ರನ್ ಬಾರಿಸಿದರು. ಈ ಪಂದ್ಯದಲ್ಲೂ ನಿರಾಸೆ ಮೂಡಿಸಿದ ಆರಂಭಿಕ ಬ್ಯಾಟರ್ ರಚಿನ್ ರವೀಂದ್ರ 12 ರನ್ಗೆ ಔಟಾದರು.</p><p>ಹೈದರಾಬಾದ್ ಪರ ಭುವನೇಶ್ವರ್ ಕುಮಾರ್ (28/1), ನಾಯಕ ಪ್ಯಾಟ್ ಕಮಿನ್ಸ್(29/1), ಜೈದೇವ್ ಉನಾದ್ಕಟ್(29/1) ಶಿಸ್ತಿನ ಬೌಲಿಂಗ್ ದಾಳಿ ನಡೆಸಿದರು. ಶಾಬಾಸ್ ಮತ್ತು ಟ. ನಟರಾಜನ್ ತಲಾ 1 ವಿಕೆಟ್ ಪಡೆದರು.</p><p> ಯುವ ನಾಯಕ ಋತುರಾಜ್ ಗಾಯಕವಾಡ್ ನೇತೃತ್ವದ ಚೆನ್ನೈ ಪಡೆ, ಮೂರು ಪಂದ್ಯಗಳನ್ನಾಡಿದ್ದು ಎರಡರಲ್ಲಿ ಜಯಿಸಿದೆ. ಮೂರು ಪಂದ್ಯಗಳನ್ನಾಡಿ ಒಂದರಲ್ಲಷ್ಟೇ ಗೆದ್ದಿರುವ ಪ್ಯಾಟ್ ಕಮಿನ್ಸ್ ಪಡೆ, ಈ ಪಂದ್ಯ ಗೆದ್ದು ಪಾಯಿಂಟ್ ಪಟ್ಟಿಯಲ್ಲಿ ಮೇಲೇರುವ ಲೆಕ್ಕಾಚಾರದಲ್ಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್</strong>: ಇಲ್ಲಿ ನಡೆಯುತ್ತಿರುವ ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಐಪಿಎಲ್ ಕ್ರಿಕೆಟ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ನಿಗದಿತ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 165 ರನ್ ಕಲೆ ಹಾಕಿದೆ. </p><p>ಚೆನ್ನೈ ಬ್ಯಾಟರ್ಗಳು ಆರಂಭದಿಂದಲೇ ಹೈದರಾಬಾದ್ ಬೌಲಿಂಗ್ ದಾಳಿ ಎದುರು ರನ್ ಗಳಿಸಲು ಪರದಾಡಿದರು. ಶಿವಂ ದುಬೆ ಬಿರುಸಿನ ಬ್ಯಾಟಿಂಗ್ ಮೂಲಕ ಚೆನ್ನೈಗೆ ಹುರುಪು ತುಂಬಿದರು.</p><p>ಶಿವಂ ದುಬೆ 45(24 ಎಸೆತ, 2 ಬೌಂಡರಿ, 4 ಸಿಕ್ಸರ್), ಅಜಿಂಕ್ಯ ರಹಾನೆ 35, ರವೀಂದ್ರ ಜಡೇಜ ಅಜೇಯ 31 ರನ್ ಸಿಡಿಸಿದರು. ನಾಯಕ ಋತುರಾಜ್ ಗಾಯಕ್ವಾಡ್ 26 ರನ್ ಬಾರಿಸಿದರು. ಈ ಪಂದ್ಯದಲ್ಲೂ ನಿರಾಸೆ ಮೂಡಿಸಿದ ಆರಂಭಿಕ ಬ್ಯಾಟರ್ ರಚಿನ್ ರವೀಂದ್ರ 12 ರನ್ಗೆ ಔಟಾದರು.</p><p>ಹೈದರಾಬಾದ್ ಪರ ಭುವನೇಶ್ವರ್ ಕುಮಾರ್ (28/1), ನಾಯಕ ಪ್ಯಾಟ್ ಕಮಿನ್ಸ್(29/1), ಜೈದೇವ್ ಉನಾದ್ಕಟ್(29/1) ಶಿಸ್ತಿನ ಬೌಲಿಂಗ್ ದಾಳಿ ನಡೆಸಿದರು. ಶಾಬಾಸ್ ಮತ್ತು ಟ. ನಟರಾಜನ್ ತಲಾ 1 ವಿಕೆಟ್ ಪಡೆದರು.</p><p> ಯುವ ನಾಯಕ ಋತುರಾಜ್ ಗಾಯಕವಾಡ್ ನೇತೃತ್ವದ ಚೆನ್ನೈ ಪಡೆ, ಮೂರು ಪಂದ್ಯಗಳನ್ನಾಡಿದ್ದು ಎರಡರಲ್ಲಿ ಜಯಿಸಿದೆ. ಮೂರು ಪಂದ್ಯಗಳನ್ನಾಡಿ ಒಂದರಲ್ಲಷ್ಟೇ ಗೆದ್ದಿರುವ ಪ್ಯಾಟ್ ಕಮಿನ್ಸ್ ಪಡೆ, ಈ ಪಂದ್ಯ ಗೆದ್ದು ಪಾಯಿಂಟ್ ಪಟ್ಟಿಯಲ್ಲಿ ಮೇಲೇರುವ ಲೆಕ್ಕಾಚಾರದಲ್ಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>