<p><strong>ಬೆಂಗಳೂರು: </strong>ತವರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗುರುವಾರ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಆರು ವಿಕೆಟ್ ಅಂತರದ ಸೋಲಿಗೆ ಶರಣಾಗಿತ್ತು. </p><p>ಈ ಪಂದ್ಯದಲ್ಲಿ ಆರ್ಸಿಬಿ ಕಪ್ತಾನ ರಜತ್ ಪಾಟೀದಾರ್ ನಾಯಕತ್ವದ ಕುರಿತು ವಿರಾಟ್ ಕೊಹ್ಲಿ ಮೈದಾನದಲ್ಲೇ ಬಹಿರಂಗವಾಗಿ ಅಸಮಾಧಾನ ತೋಡಿಕೊಂಡಿದ್ದಾರೆ ಎಂಬುದರ ಕುರಿತು ವರದಿಯಾಗಿದೆ.</p><p>ಈ ಸಂಬಂಧ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊ ವ್ಯಾಪಕವಾಗಿ ಹರಿದಾಡುತ್ತಿವೆ. </p><p>ಮೊದಲು ಬ್ಯಾಟಿಂಗ್ ನಡೆಸಿದ ಆರ್ಸಿಬಿ 20 ಓವರ್ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 163 ರನ್ ಗಳಿಸಿತ್ತು. ಬಳಿಕ ಆರ್ಸಿಬಿ ಕ್ಷೇತ್ರರಕ್ಷಣೆಯ ಸಂದರ್ಭದಲ್ಲಿ ಈ ಘಟನೆ ನಡೆದಿದೆ. </p><p>ಬೌಂಡರಿ ಗೆರೆ ಬಳಿ ಆರ್ಸಿಬಿ ತಂಡದ ಮೆಂಟರ್ ಹಾಗೂ ಬ್ಯಾಟಿಂಗ್ ಕೋಚ್ ದಿನೇಶ್ ಕಾರ್ತಿಕ್ ಬಳಿ, ಕೊಹ್ಲಿ ಕೆಲವೊಂದು ವಿಚಾರಗಳ ಕುರಿತು ಅಸಮಾಧಾನ ತೋಡಿಕೊಳ್ಳುತ್ತಿರುವುದು ದೃಶ್ಯದಲ್ಲಿ ಕಂಡುಬಂದಿದೆ.</p><p>ಆದರೆ ಕೊಹ್ಲಿ ಅಸಮಾಧಾನಕ್ಕಿರುವ ನೈಜ ಕಾರಣ ಏನು ಎಂಬುದು ತಿಳಿದು ಬಂದಿಲ್ಲ. </p><p>ಐಪಿಎಲ್ 18ನೇ ಆವೃತ್ತಿಯ ಆರಂಭದಲ್ಲಿ ರಜತ್ ಪಾಟೀದಾರ್ ಅವರಿಗೆ ನಾಯಕತ್ವ ವಹಿಸಿಕೊಡಲಾಗಿತ್ತು. ಈ ಸಂದರ್ಭದಲ್ಲಿ ಪಾಟೀದಾರ್ಗೆ ಸಂಪೂರ್ಣ ಬೆಂಬಲ ನೀಡುವುದಾಗಿ ವಿರಾಟ್ ಹೇಳಿಕೊಂಡಿದ್ದರು. </p><p>ಸ್ಥಳೀಯ ನೆಚ್ಚಿನ ಆಟಗಾರ ಕೆ.ಎಲ್. ರಾಹುಲ್ ಅಬ್ಬರದ ನೆರವಿನಿಂದ ಡೆಲ್ಲಿ ತಂಡವು ಆರ್ಸಿಬಿ ವಿರುದ್ಧ ಆರು ವಿಕೆಟ್ ಅಂತರದ ಜಯ ಗಳಿಸಿತ್ತು. ರಾಹುಲ್ 53 ಎಸೆತಗಳಲ್ಲಿ ಏಳು ಬೌಂಡರಿ ಹಾಗೂ ಆರು ಸಿಕ್ಸರ್ ನೆರವಿನಿಂದ ಅಜೇಯ 93 ರನ್ ಗಳಿಸಿದರು. </p>.IPL 2025 | RCB vs DC: ಇದು ನನ್ನ ನೆಲ ಎಂದ ರಾಹುಲ್.ಮೊಣಕೈ ಮುರಿತ; ಐಪಿಎಲ್ನಿಂದ ಗಾಯಕವಾಡ ಹೊರಕ್ಕೆ: ಚೆನ್ನೈಗೆ ಮತ್ತೆ ಧೋನಿ ನಾಯಕತ್ವ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ತವರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗುರುವಾರ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಆರು ವಿಕೆಟ್ ಅಂತರದ ಸೋಲಿಗೆ ಶರಣಾಗಿತ್ತು. </p><p>ಈ ಪಂದ್ಯದಲ್ಲಿ ಆರ್ಸಿಬಿ ಕಪ್ತಾನ ರಜತ್ ಪಾಟೀದಾರ್ ನಾಯಕತ್ವದ ಕುರಿತು ವಿರಾಟ್ ಕೊಹ್ಲಿ ಮೈದಾನದಲ್ಲೇ ಬಹಿರಂಗವಾಗಿ ಅಸಮಾಧಾನ ತೋಡಿಕೊಂಡಿದ್ದಾರೆ ಎಂಬುದರ ಕುರಿತು ವರದಿಯಾಗಿದೆ.</p><p>ಈ ಸಂಬಂಧ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊ ವ್ಯಾಪಕವಾಗಿ ಹರಿದಾಡುತ್ತಿವೆ. </p><p>ಮೊದಲು ಬ್ಯಾಟಿಂಗ್ ನಡೆಸಿದ ಆರ್ಸಿಬಿ 20 ಓವರ್ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 163 ರನ್ ಗಳಿಸಿತ್ತು. ಬಳಿಕ ಆರ್ಸಿಬಿ ಕ್ಷೇತ್ರರಕ್ಷಣೆಯ ಸಂದರ್ಭದಲ್ಲಿ ಈ ಘಟನೆ ನಡೆದಿದೆ. </p><p>ಬೌಂಡರಿ ಗೆರೆ ಬಳಿ ಆರ್ಸಿಬಿ ತಂಡದ ಮೆಂಟರ್ ಹಾಗೂ ಬ್ಯಾಟಿಂಗ್ ಕೋಚ್ ದಿನೇಶ್ ಕಾರ್ತಿಕ್ ಬಳಿ, ಕೊಹ್ಲಿ ಕೆಲವೊಂದು ವಿಚಾರಗಳ ಕುರಿತು ಅಸಮಾಧಾನ ತೋಡಿಕೊಳ್ಳುತ್ತಿರುವುದು ದೃಶ್ಯದಲ್ಲಿ ಕಂಡುಬಂದಿದೆ.</p><p>ಆದರೆ ಕೊಹ್ಲಿ ಅಸಮಾಧಾನಕ್ಕಿರುವ ನೈಜ ಕಾರಣ ಏನು ಎಂಬುದು ತಿಳಿದು ಬಂದಿಲ್ಲ. </p><p>ಐಪಿಎಲ್ 18ನೇ ಆವೃತ್ತಿಯ ಆರಂಭದಲ್ಲಿ ರಜತ್ ಪಾಟೀದಾರ್ ಅವರಿಗೆ ನಾಯಕತ್ವ ವಹಿಸಿಕೊಡಲಾಗಿತ್ತು. ಈ ಸಂದರ್ಭದಲ್ಲಿ ಪಾಟೀದಾರ್ಗೆ ಸಂಪೂರ್ಣ ಬೆಂಬಲ ನೀಡುವುದಾಗಿ ವಿರಾಟ್ ಹೇಳಿಕೊಂಡಿದ್ದರು. </p><p>ಸ್ಥಳೀಯ ನೆಚ್ಚಿನ ಆಟಗಾರ ಕೆ.ಎಲ್. ರಾಹುಲ್ ಅಬ್ಬರದ ನೆರವಿನಿಂದ ಡೆಲ್ಲಿ ತಂಡವು ಆರ್ಸಿಬಿ ವಿರುದ್ಧ ಆರು ವಿಕೆಟ್ ಅಂತರದ ಜಯ ಗಳಿಸಿತ್ತು. ರಾಹುಲ್ 53 ಎಸೆತಗಳಲ್ಲಿ ಏಳು ಬೌಂಡರಿ ಹಾಗೂ ಆರು ಸಿಕ್ಸರ್ ನೆರವಿನಿಂದ ಅಜೇಯ 93 ರನ್ ಗಳಿಸಿದರು. </p>.IPL 2025 | RCB vs DC: ಇದು ನನ್ನ ನೆಲ ಎಂದ ರಾಹುಲ್.ಮೊಣಕೈ ಮುರಿತ; ಐಪಿಎಲ್ನಿಂದ ಗಾಯಕವಾಡ ಹೊರಕ್ಕೆ: ಚೆನ್ನೈಗೆ ಮತ್ತೆ ಧೋನಿ ನಾಯಕತ್ವ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>