<p><strong>ಕೋಲ್ಕತ್ತ:</strong> ಹಾಲಿ ಚಾಂಪಿಯನ್ ಕೋಲ್ಕತ್ತ ನೈಟ್ ರೈಡರ್ಸ್ (ಕೆಕೆಆರ್) ತಂಡದ ವೇಗದ ಬೌಲರ್ ಉಮ್ರಾನ್ ಮಲಿಕ್ ಅವರು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ20 ಕ್ರಿಕೆಟ್ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಅವರ ಬದಲು ಚೇತನ್ ಸಕಾರಿಯಾ ಅವರನ್ನು ತಂಡ ಆಯ್ಕೆ ಮಾಡಿಕೊಂಡಿದೆ.</p><p>ಮಲಿಕ್ ಗಾಯದ ಸಮಸ್ಯೆಯಿಂದಾಗಿ ಟೂರ್ನಿಯಿಂದ ಹೊರಬಿದ್ದಿದ್ದಾರೆ.</p><p>ಭಾರತ ತಂಡದ ಪರ ಏಕದಿನ ಹಾಗೂ ಟಿ20 ಪಂದ್ಯಗಳಲ್ಲಿ ಆಡಿರುವ ಸಕಾರಿಯಾ, ಐಪಿಎಲ್ನಲ್ಲಿ 19 ಪಂದ್ಯಗಳನ್ನು ಆಡಿದ್ದಾರೆ. 29.95ರ ಸರಾಸರಿಯಲ್ಲಿ 20 ವಿಕೆಟ್ಗಳನ್ನು ಪಡೆದಿದ್ದಾರೆ.</p><p>ಹಿಂದಿನ ಆವೃತ್ತಿಗಳಲ್ಲಿ ರಾಜಸ್ಥಾನ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಪರ ಆಡಿದ್ದ ಸಕಾರಿಯಾ ಅವರನ್ನು ಕೋಲ್ಕತ್ತ ₹ 75 ಲಕ್ಷ ನೀಡಿ ತಂಡಕ್ಕೆ ಬರಮಾಡಿಕೊಂಡಿದೆ.</p><p>ಟೂರ್ನಿಯು ಮಾರ್ಚ್ 22ರಂದು ಆರಂಭವಾಗಲಿದೆ. ಕೋಲ್ಕತ್ತದ ಈಡನ್ ಗಾರ್ಡನ್ಸ್ನಲ್ಲಿ ನಡೆಯುವ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೆಕೆಆರ್ ಸೆಣಸಾಟ ನಡೆಸಲಿವೆ.</p>.ಐಪಿಎಲ್ನಲ್ಲಿ ಮಿಂಚುವತ್ತ ಕರುಣ್ ಚಿತ್ತ.Steel Man of India: ಹರ್ಕ್ಯುಲಸ್ ಪಿಲ್ಲರ್ಗಳ ಎಳೆದಿಡಿದು ದಾಖಲೆ ಬರೆದ ಭಾರತೀಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಹಾಲಿ ಚಾಂಪಿಯನ್ ಕೋಲ್ಕತ್ತ ನೈಟ್ ರೈಡರ್ಸ್ (ಕೆಕೆಆರ್) ತಂಡದ ವೇಗದ ಬೌಲರ್ ಉಮ್ರಾನ್ ಮಲಿಕ್ ಅವರು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ20 ಕ್ರಿಕೆಟ್ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಅವರ ಬದಲು ಚೇತನ್ ಸಕಾರಿಯಾ ಅವರನ್ನು ತಂಡ ಆಯ್ಕೆ ಮಾಡಿಕೊಂಡಿದೆ.</p><p>ಮಲಿಕ್ ಗಾಯದ ಸಮಸ್ಯೆಯಿಂದಾಗಿ ಟೂರ್ನಿಯಿಂದ ಹೊರಬಿದ್ದಿದ್ದಾರೆ.</p><p>ಭಾರತ ತಂಡದ ಪರ ಏಕದಿನ ಹಾಗೂ ಟಿ20 ಪಂದ್ಯಗಳಲ್ಲಿ ಆಡಿರುವ ಸಕಾರಿಯಾ, ಐಪಿಎಲ್ನಲ್ಲಿ 19 ಪಂದ್ಯಗಳನ್ನು ಆಡಿದ್ದಾರೆ. 29.95ರ ಸರಾಸರಿಯಲ್ಲಿ 20 ವಿಕೆಟ್ಗಳನ್ನು ಪಡೆದಿದ್ದಾರೆ.</p><p>ಹಿಂದಿನ ಆವೃತ್ತಿಗಳಲ್ಲಿ ರಾಜಸ್ಥಾನ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಪರ ಆಡಿದ್ದ ಸಕಾರಿಯಾ ಅವರನ್ನು ಕೋಲ್ಕತ್ತ ₹ 75 ಲಕ್ಷ ನೀಡಿ ತಂಡಕ್ಕೆ ಬರಮಾಡಿಕೊಂಡಿದೆ.</p><p>ಟೂರ್ನಿಯು ಮಾರ್ಚ್ 22ರಂದು ಆರಂಭವಾಗಲಿದೆ. ಕೋಲ್ಕತ್ತದ ಈಡನ್ ಗಾರ್ಡನ್ಸ್ನಲ್ಲಿ ನಡೆಯುವ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೆಕೆಆರ್ ಸೆಣಸಾಟ ನಡೆಸಲಿವೆ.</p>.ಐಪಿಎಲ್ನಲ್ಲಿ ಮಿಂಚುವತ್ತ ಕರುಣ್ ಚಿತ್ತ.Steel Man of India: ಹರ್ಕ್ಯುಲಸ್ ಪಿಲ್ಲರ್ಗಳ ಎಳೆದಿಡಿದು ದಾಖಲೆ ಬರೆದ ಭಾರತೀಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>