<p><strong>ಜೈಪುರ:</strong> ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ 14ರ ಹರೆಯದ ಉದಯೋನ್ಮುಖ ಎಡಗೈ ಆರಂಭಿಕ ಬ್ಯಾಟರ್ ವೈಭವ್ ಸೂರ್ಯವಂಶಿ ಚೊಚ್ಚಲ ಶತಕ ಗಳಿಸಿದಾಗ ರಾಜಸ್ಥಾನ ರಾಯಲ್ಸ್ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಸಂಭ್ರಮಕ್ಕೆ ಪಾರವೇ ಇಲ್ಲ.</p><p>ತಮ್ಮ ಗಾಯವನ್ನು ಲೆಕ್ಕಿಸದೇ ಗಾಲಿಕುರ್ಚಿಯಿಂದ ಎದ್ದು ನಿಂತು ಚಪ್ಪಾಳೆ ತಟ್ಟುತ್ತಾ ಸಂಭ್ರಮಾಚರಿಸಿದ್ದಾರೆ. </p><p>ಪ್ರಸ್ತುತ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.</p><p>ಕಳೆದ ಮಾರ್ಚ್ನಲ್ಲಿ ಬೆಂಗಳೂರಿನಲ್ಲಿ ನಡೆದಿದ್ದ ಡಿವಿಷನ್ ಕ್ರಿಕೆಟ್ನಲ್ಲಿ ಆಡುವಾಗ ಬಿದ್ದು ಗಾಯಗೊಂಡಿದ್ದ ದ್ರಾವಿಡ್ ಅವರ ಕಾಲಿನ ಮೂಳೆ ಮುರಿದಿತ್ತು. ಅದರಿಂದಾಗಿ ಐಪಿಎಲ್ ಆರಂಭದಿಂದಲೂ ಗಾಲಿಕುರ್ಚಿಯ ಮೇಲೆ ಕುಳಿತುಕೊಂಡೇ ರಾಯಲ್ಸ್ ತಂಡಕ್ಕೆ ಮಾರ್ಗದರ್ಶನ ನೀಡುತ್ತಿದ್ದಾರೆ. </p>. <p>ಸೋಮವಾರ ಗುಜರಾತ್ ಟೈಟನ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ವೈಭವ್ ಕೇವಲ 35 ಎಸೆತಗಳಲ್ಲಿ ಶತಕದ ಸಾಧನೆ ಮಾಡಿದರು. ಆ ಮೂಲಕ ಟಿ20 ಕ್ರಿಕೆಟ್ನಲ್ಲಿ ಶತಕ ಗಳಿಸಿದ ಅತಿ ಕಿರಿಯ ಆಟಗಾರ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ. ಅಲ್ಲದೆ ಐಪಿಎಲ್ನ ಎರಡನೇ ವೇಗದ ಶತಕ ಗಳಿಸಿದ ಗೌರವಕ್ಕೂ ಭಾಜನರಾಗಿದ್ದಾರೆ. </p><p>ರಾಹುಲ್ ದ್ರಾವಿಡ್ ಅವರ ಗರಡಿಯಲ್ಲಿ ವೈಭವ್ ಸೂರ್ಯವಂಶಿ ಪಳಗಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ದ್ರಾವಿಡ್ ಮಾರ್ಗದರ್ಶನದಲ್ಲಿ ಅಭ್ಯಾಸಿಸುತ್ತಿದ್ದಾರೆ. </p><p>₹30 ಲಕ್ಷ ಮೂಲಬೆಲೆ ಹೊಂದಿದ್ದ ವೈಭವ್ ಅವರನ್ನು ರಾಜಸ್ಥಾನ ತಂಡವು ₹1.1 ಕೋಟಿ ನೀಡಿ ಖರೀದಿಸಿತ್ತು. </p>.IPL 2025: 14 ವರ್ಷ, 17 ಬಾಲ್ ಫಿಫ್ಟಿ, 35 ಬಾಲ್ ಸೆಂಚುರಿ; ಸೂರ್ಯವಂಶಿ 'ವೈಭವ'.IPL 2025 | ಬೌಲರ್ಗಳು ಯಾರೆಂದು ನೋಡುವುದಿಲ್ಲ: 14ರ ಪೋರನ ದಿಟ್ಟ ನುಡಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ:</strong> ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ 14ರ ಹರೆಯದ ಉದಯೋನ್ಮುಖ ಎಡಗೈ ಆರಂಭಿಕ ಬ್ಯಾಟರ್ ವೈಭವ್ ಸೂರ್ಯವಂಶಿ ಚೊಚ್ಚಲ ಶತಕ ಗಳಿಸಿದಾಗ ರಾಜಸ್ಥಾನ ರಾಯಲ್ಸ್ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಸಂಭ್ರಮಕ್ಕೆ ಪಾರವೇ ಇಲ್ಲ.</p><p>ತಮ್ಮ ಗಾಯವನ್ನು ಲೆಕ್ಕಿಸದೇ ಗಾಲಿಕುರ್ಚಿಯಿಂದ ಎದ್ದು ನಿಂತು ಚಪ್ಪಾಳೆ ತಟ್ಟುತ್ತಾ ಸಂಭ್ರಮಾಚರಿಸಿದ್ದಾರೆ. </p><p>ಪ್ರಸ್ತುತ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.</p><p>ಕಳೆದ ಮಾರ್ಚ್ನಲ್ಲಿ ಬೆಂಗಳೂರಿನಲ್ಲಿ ನಡೆದಿದ್ದ ಡಿವಿಷನ್ ಕ್ರಿಕೆಟ್ನಲ್ಲಿ ಆಡುವಾಗ ಬಿದ್ದು ಗಾಯಗೊಂಡಿದ್ದ ದ್ರಾವಿಡ್ ಅವರ ಕಾಲಿನ ಮೂಳೆ ಮುರಿದಿತ್ತು. ಅದರಿಂದಾಗಿ ಐಪಿಎಲ್ ಆರಂಭದಿಂದಲೂ ಗಾಲಿಕುರ್ಚಿಯ ಮೇಲೆ ಕುಳಿತುಕೊಂಡೇ ರಾಯಲ್ಸ್ ತಂಡಕ್ಕೆ ಮಾರ್ಗದರ್ಶನ ನೀಡುತ್ತಿದ್ದಾರೆ. </p>. <p>ಸೋಮವಾರ ಗುಜರಾತ್ ಟೈಟನ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ವೈಭವ್ ಕೇವಲ 35 ಎಸೆತಗಳಲ್ಲಿ ಶತಕದ ಸಾಧನೆ ಮಾಡಿದರು. ಆ ಮೂಲಕ ಟಿ20 ಕ್ರಿಕೆಟ್ನಲ್ಲಿ ಶತಕ ಗಳಿಸಿದ ಅತಿ ಕಿರಿಯ ಆಟಗಾರ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ. ಅಲ್ಲದೆ ಐಪಿಎಲ್ನ ಎರಡನೇ ವೇಗದ ಶತಕ ಗಳಿಸಿದ ಗೌರವಕ್ಕೂ ಭಾಜನರಾಗಿದ್ದಾರೆ. </p><p>ರಾಹುಲ್ ದ್ರಾವಿಡ್ ಅವರ ಗರಡಿಯಲ್ಲಿ ವೈಭವ್ ಸೂರ್ಯವಂಶಿ ಪಳಗಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ದ್ರಾವಿಡ್ ಮಾರ್ಗದರ್ಶನದಲ್ಲಿ ಅಭ್ಯಾಸಿಸುತ್ತಿದ್ದಾರೆ. </p><p>₹30 ಲಕ್ಷ ಮೂಲಬೆಲೆ ಹೊಂದಿದ್ದ ವೈಭವ್ ಅವರನ್ನು ರಾಜಸ್ಥಾನ ತಂಡವು ₹1.1 ಕೋಟಿ ನೀಡಿ ಖರೀದಿಸಿತ್ತು. </p>.IPL 2025: 14 ವರ್ಷ, 17 ಬಾಲ್ ಫಿಫ್ಟಿ, 35 ಬಾಲ್ ಸೆಂಚುರಿ; ಸೂರ್ಯವಂಶಿ 'ವೈಭವ'.IPL 2025 | ಬೌಲರ್ಗಳು ಯಾರೆಂದು ನೋಡುವುದಿಲ್ಲ: 14ರ ಪೋರನ ದಿಟ್ಟ ನುಡಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>