<p><strong>ಬೆಂಗಳೂರು:</strong> ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತ ನೈಟ್ ರೈಡರ್ಸ್ ನಡುವಣ ಇಂದು (ಶನಿವಾರ) ನಡೆಯಬೇಕಿದ್ದ ಐಪಿಎಲ್ ಪಂದ್ಯ ಮಳೆಯಿಂದಾಗಿ ರದ್ದುಗೊಂಡಿದೆ. </p><p>ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಿಗದಿಯಾಗಿತ್ತು. ಆದರೆ ಸತತವಾಗಿ ಸುರಿದ ಮಳೆಯಿಂದಾಗಿ ಪಂದ್ಯಕ್ಕೆ ಅಡಚಣೆಯಾಯಿತು. ಅಂತಿಮವಾಗಿ ಕೈಬಿಡಲಾಯಿತು. </p><p>ಇದರಿಂದಾಗಿ ಇತ್ತಂಡಗಳಿಗೂ ತಲಾ ಒಂದು ಅಂಕವನ್ನು ಹಂಚಿಕೊಳ್ಳಲಾಯಿತು. ಇದರೊಂದಿಗೆ 12 ಪಂದ್ಯಗಳಲ್ಲಿ 17 ಅಂಕ ಸಂಪಾದಿಸಿರುವ ಆರ್ಸಿಬಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದ್ದು, ಪ್ಲೇ-ಆಫ್ ಸನಿಹದಲ್ಲಿದೆ. </p><p>ಮತ್ತೊಂದೆಡೆ 13 ಪಂದ್ಯಗಳಲ್ಲಿ 12 ಅಂಕ ಮಾತ್ರ ಗಳಿಸಿರುವ ಕೋಲ್ಕತ್ತ ನೈಟ್ ರೈಡರ್ಸ್, ಪ್ಲೇ-ಆಫ್ ರೇಸ್ನಿಂದ ಹೊರಬಿದ್ದಿದೆ. ಸದ್ಯ ಆರನೇ ಸ್ಥಾನದಲ್ಲಿರುವ ಕೆಕೆಆರ್ ಬಳಿ ಇನ್ನೊಂದು ಪಂದ್ಯ ಮಾತ್ರ ಬಾಕಿಯಿದೆ. </p><p>ಭಾರತ ಹಾಗೂ ಪಾಕಿಸ್ತಾನ ನಡುವಣ ಸಂಘರ್ಷದಿಂದಾಗಿ ಐಪಿಎಲ್ ಒಂದು ವಾರಗಳ ಕಾಲ ರದ್ದುಗೊಂಡಿತ್ತು. ಇದೀಗ ಪುನಾರರಂಭದ ಪಂದ್ಯದಲ್ಲಿ ಒಂದು ಎಸೆತವನ್ನು ಕಾಣದೇ ಅಭಿಮಾನಿಗಳು ನಿರಾಸೆಗೊಂಡಿದ್ದಾರೆ.</p><p>ಮತ್ತೊಂದೆಡೆ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿರುವ ವಿರಾಟ್ ಕೊಹ್ಲಿ ಅವರನ್ನು ಮೈದಾನದಲ್ಲಿ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತರದಲ್ಲಿದ್ದರು. ಅವರ ಆಸೆಯೂ ಕೈಗೂಡಲಿಲ್ಲ. ಆದರೂ ವಿರಾಟ್ ಕೊಹ್ಲಿ ಅವರ ಬಿಳಿ ಸಮವಸ್ತ್ರ ಧರಿಸಿ ಗೌರವ ಸೂಚಿಸಿದರು. </p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತ ನೈಟ್ ರೈಡರ್ಸ್ ನಡುವಣ ಇಂದು (ಶನಿವಾರ) ನಡೆಯಬೇಕಿದ್ದ ಐಪಿಎಲ್ ಪಂದ್ಯ ಮಳೆಯಿಂದಾಗಿ ರದ್ದುಗೊಂಡಿದೆ. </p><p>ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಿಗದಿಯಾಗಿತ್ತು. ಆದರೆ ಸತತವಾಗಿ ಸುರಿದ ಮಳೆಯಿಂದಾಗಿ ಪಂದ್ಯಕ್ಕೆ ಅಡಚಣೆಯಾಯಿತು. ಅಂತಿಮವಾಗಿ ಕೈಬಿಡಲಾಯಿತು. </p><p>ಇದರಿಂದಾಗಿ ಇತ್ತಂಡಗಳಿಗೂ ತಲಾ ಒಂದು ಅಂಕವನ್ನು ಹಂಚಿಕೊಳ್ಳಲಾಯಿತು. ಇದರೊಂದಿಗೆ 12 ಪಂದ್ಯಗಳಲ್ಲಿ 17 ಅಂಕ ಸಂಪಾದಿಸಿರುವ ಆರ್ಸಿಬಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದ್ದು, ಪ್ಲೇ-ಆಫ್ ಸನಿಹದಲ್ಲಿದೆ. </p><p>ಮತ್ತೊಂದೆಡೆ 13 ಪಂದ್ಯಗಳಲ್ಲಿ 12 ಅಂಕ ಮಾತ್ರ ಗಳಿಸಿರುವ ಕೋಲ್ಕತ್ತ ನೈಟ್ ರೈಡರ್ಸ್, ಪ್ಲೇ-ಆಫ್ ರೇಸ್ನಿಂದ ಹೊರಬಿದ್ದಿದೆ. ಸದ್ಯ ಆರನೇ ಸ್ಥಾನದಲ್ಲಿರುವ ಕೆಕೆಆರ್ ಬಳಿ ಇನ್ನೊಂದು ಪಂದ್ಯ ಮಾತ್ರ ಬಾಕಿಯಿದೆ. </p><p>ಭಾರತ ಹಾಗೂ ಪಾಕಿಸ್ತಾನ ನಡುವಣ ಸಂಘರ್ಷದಿಂದಾಗಿ ಐಪಿಎಲ್ ಒಂದು ವಾರಗಳ ಕಾಲ ರದ್ದುಗೊಂಡಿತ್ತು. ಇದೀಗ ಪುನಾರರಂಭದ ಪಂದ್ಯದಲ್ಲಿ ಒಂದು ಎಸೆತವನ್ನು ಕಾಣದೇ ಅಭಿಮಾನಿಗಳು ನಿರಾಸೆಗೊಂಡಿದ್ದಾರೆ.</p><p>ಮತ್ತೊಂದೆಡೆ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿರುವ ವಿರಾಟ್ ಕೊಹ್ಲಿ ಅವರನ್ನು ಮೈದಾನದಲ್ಲಿ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತರದಲ್ಲಿದ್ದರು. ಅವರ ಆಸೆಯೂ ಕೈಗೂಡಲಿಲ್ಲ. ಆದರೂ ವಿರಾಟ್ ಕೊಹ್ಲಿ ಅವರ ಬಿಳಿ ಸಮವಸ್ತ್ರ ಧರಿಸಿ ಗೌರವ ಸೂಚಿಸಿದರು. </p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>