<p><strong>ಮುಂಬೈ:</strong> ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಒಂದು ಪಂದ್ಯದ ನಿಷೇಧಕ್ಕೆ ಗುರಿಯಾಗಿರುವ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ, ಮೊದಲ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. </p><p>ಇದರೊಂದಿಗೆ ಮುಂಬೈ ಇಂಡಿಯನ್ಸ್ ತಂಡದ ಮೊದಲ ಪಂದ್ಯಕ್ಕೆ ಸೂರ್ಯಕುಮಾರ್ ಯಾದವ್ ನಾಯಕರಾಗಲಿದ್ದಾರೆ. </p><p>ಕಳೆದ ಆವೃತ್ತಿಯಲ್ಲಿ ಮೂರು ಸಲ ನಿಧಾನಗತಿಯ ಓವರ್ರೇಟ್ಗಾಗಿ ಹಾರ್ದಿಕ್ ಒಂದು ಪಂದ್ಯದ ನಿಷೇಧಕ್ಕೊಳಗಾಗಿದ್ದರು. </p><p>ಮಾರ್ಚ್ 23, ಭಾನುವಾರ ನಡೆಯಲಿರುವ ತನ್ನ ಮೊದಲ ಪಂದ್ಯದಲ್ಲಿ ಮುಂಬೈ ತಂಡವು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸವಾಲನ್ನು ಎದುರಿಸಲಿದೆ. ಈ ಪಂದ್ಯವು ಚೆನ್ನೈನ ಎಂ. ಚಿದಂಬರಂ ಮೈದಾನದಲ್ಲಿ ನಡೆಯಲಿದೆ. </p><p>ಮುಂಬೈ ಇಂಡಿಯನ್ಸ್ ತಂಡದ ಸುದ್ದಿಗೋಷ್ಠಿಯಲ್ಲಿ ಪಾಂಡ್ಯ ಈ ಕುರಿತು ಮಾಹಿತಿ ನೀಡಿದ್ದಾರೆ. 'ಸೂರ್ಯಕುಮಾರ್ ಟೀಮ್ ಇಂಡಿಯಾದ ಟಿ20 ತಂಡದ ನಾಯಕರೂ ಆಗಿದ್ದಾರೆ. ನನ್ನ ಅನುಪಸ್ಥಿತಿಯಲ್ಲಿ ತಂಡವನ್ನು ಮುನ್ನಡೆಸಲು ಯೋಗ್ಯ ಆಯ್ಕೆಯಾಗಿದ್ದಾರೆ' ಎಂದು ತಿಳಿಸಿದ್ದಾರೆ. </p><p>2024ರ ಸಾಲಿನಲ್ಲಿ ರೋಹಿತ್ ಶರ್ಮಾ ಅವರ ಬದಲು ಹಾರ್ದಿಕ್ ಪಾಂಡ್ಯ ಮುನ್ನಡೆಸಿದ್ದರು. ಅಲ್ಲದೆ ಅಭಿಮಾನಿಗಳಿಂದ ಗೇಲಿಗೆ ಒಳಗಾಗಿದ್ದರು. ತಂಡವು ಕಳಪೆ ಪ್ರದರ್ಶನವನ್ನು ನೀಡಿತ್ತು. 10 ಪಂದ್ಯಗಳಲ್ಲಿ ಸೋಲು ಕಂಡಿದ್ದರೆ ಕೇವಲ ನಾಲ್ಕು ಪಂದ್ಯಗಳಲ್ಲಷ್ಟೇ ಗೆಲುವು ಸಾಧಿಸಿತ್ತು. </p> .ಒಬ್ಬಂಟಿಯಾಗಿ ಬೇಸರಪಡಲು ಬಯಸುವುದಿಲ್ಲ: ಫ್ಯಾಮಿಲಿ ಪರ ಕೊಹ್ಲಿ ಬ್ಯಾಟಿಂಗ್.IPL 2025 | ಆರ್ಸಿಬಿಗೆ ಚೊಚ್ಚಲ ಪ್ರಶಸ್ತಿ: ಎಬಿಡಿ ವಿಶ್ವಾಸ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಒಂದು ಪಂದ್ಯದ ನಿಷೇಧಕ್ಕೆ ಗುರಿಯಾಗಿರುವ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ, ಮೊದಲ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. </p><p>ಇದರೊಂದಿಗೆ ಮುಂಬೈ ಇಂಡಿಯನ್ಸ್ ತಂಡದ ಮೊದಲ ಪಂದ್ಯಕ್ಕೆ ಸೂರ್ಯಕುಮಾರ್ ಯಾದವ್ ನಾಯಕರಾಗಲಿದ್ದಾರೆ. </p><p>ಕಳೆದ ಆವೃತ್ತಿಯಲ್ಲಿ ಮೂರು ಸಲ ನಿಧಾನಗತಿಯ ಓವರ್ರೇಟ್ಗಾಗಿ ಹಾರ್ದಿಕ್ ಒಂದು ಪಂದ್ಯದ ನಿಷೇಧಕ್ಕೊಳಗಾಗಿದ್ದರು. </p><p>ಮಾರ್ಚ್ 23, ಭಾನುವಾರ ನಡೆಯಲಿರುವ ತನ್ನ ಮೊದಲ ಪಂದ್ಯದಲ್ಲಿ ಮುಂಬೈ ತಂಡವು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸವಾಲನ್ನು ಎದುರಿಸಲಿದೆ. ಈ ಪಂದ್ಯವು ಚೆನ್ನೈನ ಎಂ. ಚಿದಂಬರಂ ಮೈದಾನದಲ್ಲಿ ನಡೆಯಲಿದೆ. </p><p>ಮುಂಬೈ ಇಂಡಿಯನ್ಸ್ ತಂಡದ ಸುದ್ದಿಗೋಷ್ಠಿಯಲ್ಲಿ ಪಾಂಡ್ಯ ಈ ಕುರಿತು ಮಾಹಿತಿ ನೀಡಿದ್ದಾರೆ. 'ಸೂರ್ಯಕುಮಾರ್ ಟೀಮ್ ಇಂಡಿಯಾದ ಟಿ20 ತಂಡದ ನಾಯಕರೂ ಆಗಿದ್ದಾರೆ. ನನ್ನ ಅನುಪಸ್ಥಿತಿಯಲ್ಲಿ ತಂಡವನ್ನು ಮುನ್ನಡೆಸಲು ಯೋಗ್ಯ ಆಯ್ಕೆಯಾಗಿದ್ದಾರೆ' ಎಂದು ತಿಳಿಸಿದ್ದಾರೆ. </p><p>2024ರ ಸಾಲಿನಲ್ಲಿ ರೋಹಿತ್ ಶರ್ಮಾ ಅವರ ಬದಲು ಹಾರ್ದಿಕ್ ಪಾಂಡ್ಯ ಮುನ್ನಡೆಸಿದ್ದರು. ಅಲ್ಲದೆ ಅಭಿಮಾನಿಗಳಿಂದ ಗೇಲಿಗೆ ಒಳಗಾಗಿದ್ದರು. ತಂಡವು ಕಳಪೆ ಪ್ರದರ್ಶನವನ್ನು ನೀಡಿತ್ತು. 10 ಪಂದ್ಯಗಳಲ್ಲಿ ಸೋಲು ಕಂಡಿದ್ದರೆ ಕೇವಲ ನಾಲ್ಕು ಪಂದ್ಯಗಳಲ್ಲಷ್ಟೇ ಗೆಲುವು ಸಾಧಿಸಿತ್ತು. </p> .ಒಬ್ಬಂಟಿಯಾಗಿ ಬೇಸರಪಡಲು ಬಯಸುವುದಿಲ್ಲ: ಫ್ಯಾಮಿಲಿ ಪರ ಕೊಹ್ಲಿ ಬ್ಯಾಟಿಂಗ್.IPL 2025 | ಆರ್ಸಿಬಿಗೆ ಚೊಚ್ಚಲ ಪ್ರಶಸ್ತಿ: ಎಬಿಡಿ ವಿಶ್ವಾಸ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>