<p><strong>ಧರ್ಮಶಾಲಾ: </strong>ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 61ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರನ್ಗಳ ಗೆಲುವು ಸಾಧಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪ್ಲೇ–ಆಫ್ಗೆ ಲಗ್ಗೆಯಿಟ್ಟಿದೆ.</p><p>ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ ದೇವದತ್ತ ಪಡಿಕ್ಕಲ್ (45 ರನ್), ವಿರಾಟ್ ಕೊಹ್ಲಿ (58 ರನ್), ವೆಂಕಟೇಶ್ ಐಯ್ಯರ್(ಅಜೇಯ 73 ರನ್ ) ಅವರ ಆಟದ ನೆರವಿನಿಂದ 20 ಓವರ್ಗಳ ಅಂತ್ಯಕ್ಕೆ 4 ವಿಕೆಟ್ ನಷ್ಟಕ್ಕೆ 222 ರನ್ ಗಳಿಸಿತು. </p><p>ಪಂಜಾಬ್ ಕಿಂಗ್ಸ್ ಪರ ಹರ್ಪ್ರೀತ್ ಬ್ರಾರ್ 2 ವಿಕೆಟ್, ಚಹಾಲ್ ಹಾಗೂ ಅರ್ಶದೀಪ್ ಸಿಂಗ್ ತಲಾ ಒಂದು ವಿಕೆಟ್ ಪಡೆದುಕೊಂಡರು.</p><p>223 ರನ್ಗಳ ಬೃಹತ್ ಗುರಿ ಬೆನ್ನಟ್ಟಿದ ಪಂಜಾಬ್ ತಂಡಕ್ಕೆ ಭುವನೇಶ್ವರ್ ಕುಮಾರ್ ಆರಂಭಿಕ ಆಘಾತ ನೀಡಿದರು. ಆರಂಭಿಕ ಪ್ರಿಯಾಂಶ್ ಆರ್ಯಾ ಮೂರನೇ ಎಸೆತದಲ್ಲಿ ಡಕ್ ಔಟ್ ಆದರೆ, ಪ್ರಭಸಿಮ್ರಾನ್ ಸಿಂಗ್ 2 ರನ್ಗೆ ವಿಕೆಟ್ ಒಪ್ಪಿಸಿದರು. ನಾಯಕ ಶ್ರೇಯಸ್ ಅಯ್ಯರ್ ಕೂಡ 1 ರನ್ಗಳಿಸಿ ಪೆವಿಲಿಯನ್ ಸೇರಿದರು.</p><p>ಕೂಪರ್ ಕೊನೊಲಿ (37 ರನ್), ಸೂರ್ಯಾಂಶ್ ಶೆಡ್ಜ್ (35 ರನ್), ಮಾರ್ಕಸ್ ಸ್ಟೊಯಿನಿಸ್ (37 ರನ್) ಮತ್ತು ಶಶಾಂಕ್ ಸಿಂಗ್ (56 ರನ್) ಕೆಲಹೊತ್ತು ಪ್ರತಿರೋಧ ತೋರಿಸಿದರು. ಆದರೆ, ಗೆಲುವಿನ ಗಡಿ ದಾಟಿಸಲು ಸಾಧ್ಯವಾಗಲಿಲ್ಲ.</p><p>ಆರ್ಸಿಬಿ ಪರ ರಸಿಕ್ ಸಲಾಂ ದಾರ್ 3 ವಿಕೆಟ್, ಭುವನೇಶ್ವರ್ ಕುಮಾರ್ 2 ವಿಕೆಟ್ ಪಡೆದರು. </p><p>ಈ ಗೆಲುವಿನೊಂದಿಗೆ ಆರ್ಸಿಬಿ ಪ್ಲೇ–ಆಫ್ ಪ್ರವೇಶಿಸಿದರೆ, ಸತತ 6 ಸೋಲಿನೊಂದಿಗೆ ಪಂಜಾಬ್ ತಂಡದ ನಾಕೌಟ್ ದಾರಿ ಕಷ್ಟವಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧರ್ಮಶಾಲಾ: </strong>ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 61ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರನ್ಗಳ ಗೆಲುವು ಸಾಧಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪ್ಲೇ–ಆಫ್ಗೆ ಲಗ್ಗೆಯಿಟ್ಟಿದೆ.</p><p>ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ ದೇವದತ್ತ ಪಡಿಕ್ಕಲ್ (45 ರನ್), ವಿರಾಟ್ ಕೊಹ್ಲಿ (58 ರನ್), ವೆಂಕಟೇಶ್ ಐಯ್ಯರ್(ಅಜೇಯ 73 ರನ್ ) ಅವರ ಆಟದ ನೆರವಿನಿಂದ 20 ಓವರ್ಗಳ ಅಂತ್ಯಕ್ಕೆ 4 ವಿಕೆಟ್ ನಷ್ಟಕ್ಕೆ 222 ರನ್ ಗಳಿಸಿತು. </p><p>ಪಂಜಾಬ್ ಕಿಂಗ್ಸ್ ಪರ ಹರ್ಪ್ರೀತ್ ಬ್ರಾರ್ 2 ವಿಕೆಟ್, ಚಹಾಲ್ ಹಾಗೂ ಅರ್ಶದೀಪ್ ಸಿಂಗ್ ತಲಾ ಒಂದು ವಿಕೆಟ್ ಪಡೆದುಕೊಂಡರು.</p><p>223 ರನ್ಗಳ ಬೃಹತ್ ಗುರಿ ಬೆನ್ನಟ್ಟಿದ ಪಂಜಾಬ್ ತಂಡಕ್ಕೆ ಭುವನೇಶ್ವರ್ ಕುಮಾರ್ ಆರಂಭಿಕ ಆಘಾತ ನೀಡಿದರು. ಆರಂಭಿಕ ಪ್ರಿಯಾಂಶ್ ಆರ್ಯಾ ಮೂರನೇ ಎಸೆತದಲ್ಲಿ ಡಕ್ ಔಟ್ ಆದರೆ, ಪ್ರಭಸಿಮ್ರಾನ್ ಸಿಂಗ್ 2 ರನ್ಗೆ ವಿಕೆಟ್ ಒಪ್ಪಿಸಿದರು. ನಾಯಕ ಶ್ರೇಯಸ್ ಅಯ್ಯರ್ ಕೂಡ 1 ರನ್ಗಳಿಸಿ ಪೆವಿಲಿಯನ್ ಸೇರಿದರು.</p><p>ಕೂಪರ್ ಕೊನೊಲಿ (37 ರನ್), ಸೂರ್ಯಾಂಶ್ ಶೆಡ್ಜ್ (35 ರನ್), ಮಾರ್ಕಸ್ ಸ್ಟೊಯಿನಿಸ್ (37 ರನ್) ಮತ್ತು ಶಶಾಂಕ್ ಸಿಂಗ್ (56 ರನ್) ಕೆಲಹೊತ್ತು ಪ್ರತಿರೋಧ ತೋರಿಸಿದರು. ಆದರೆ, ಗೆಲುವಿನ ಗಡಿ ದಾಟಿಸಲು ಸಾಧ್ಯವಾಗಲಿಲ್ಲ.</p><p>ಆರ್ಸಿಬಿ ಪರ ರಸಿಕ್ ಸಲಾಂ ದಾರ್ 3 ವಿಕೆಟ್, ಭುವನೇಶ್ವರ್ ಕುಮಾರ್ 2 ವಿಕೆಟ್ ಪಡೆದರು. </p><p>ಈ ಗೆಲುವಿನೊಂದಿಗೆ ಆರ್ಸಿಬಿ ಪ್ಲೇ–ಆಫ್ ಪ್ರವೇಶಿಸಿದರೆ, ಸತತ 6 ಸೋಲಿನೊಂದಿಗೆ ಪಂಜಾಬ್ ತಂಡದ ನಾಕೌಟ್ ದಾರಿ ಕಷ್ಟವಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>