ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IPL: ಯುವ ಆಟಗಾರರಿಗೆ ಜೆರ್ಸಿ ನೀಡಿದ ಧೋನಿ, ಅಭಿಮಾನಿಗಳ ಮನಗೆದ್ದ ಕ್ಯಾಪ್ಟನ್ ಕೂಲ್

ಅಕ್ಷರ ಗಾತ್ರ

ಮುಂಬೈ: ಐಪಿಎಲ್ ಪಂದ್ಯ ಮುಗಿದ ಬಳಿಕ ಮುಂಬೈ ಇಂಡಿಯನ್ಸ್‌ ತಂಡದ ಯುವ ಆಟಗಾರರಿಗೆ ಚೆನ್ನೈ ಸೂಪರ್ ಕಿಂಗ್ಸ್‌ ತಂಡದ ನಾಯಕ ಎಂ.ಎಸ್‌.ಧೋನಿ ಅವರು ಸಹಿ ಹಾಕಿರುವ ಜೆರ್ಸಿ ಹಾಗೂ ಸಲಹೆಗಳನ್ನು ನೀಡುವ ಮೂಲಕ ಗಮನ ಸೆಳೆದಿದ್ದಾರೆ.

ಐಪಿಎಲ್ 2022 ಟೂರ್ನಿಯಲ್ಲಿ ಗುರುವಾರ ವಾಂಖೆಡೆ ಮೈದಾನದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಸಿಎಸ್‌ಕೆ ಸೋಲು ಅನುಭವಿಸಿತು. ಆದರೆ, ಪಂದ್ಯ ಮುಗಿದ ಬಳಿಕ ಉಭಯ ತಂಡಗಳ ಆಟಗಾರರು ಮತ್ತು ಸಹಾಯಕ ಸಿಬ್ಬಂದಿ ಡ್ರೆಸ್ಸಿಂಗ್ ರೂಮ್‌ನಲ್ಲಿಪರಸ್ಪರ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಇದೇ ವೇಳೆ ಧೋನಿ, ಸಹಿ ಹಾಕಿರುವ ಜರ್ಸಿಯನ್ನು ಯುವ ಆಟಗಾರರಿಗೆ ನೀಡುವ ಮೂಲಕ ಉತ್ಸಾಹಿಸಿದ್ದಾರೆ. ಈ ವಿಡಿಯೊ ಮತ್ತು ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕ್ರೀಡಾಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ 16 ಓವರ್‌ಗಳಲ್ಲಿ 97 ರನ್‌ಗಳಿಗೆ ಆಲೌಟ್ ಆಗಿತ್ತು.

98 ರನ್‌ ಗುರಿ ಬೆನ್ನತ್ತಿದ ಮುಂಬೈ 14.5 ಓವರ್‌ಗಳಲ್ಲಿ ಐದು ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿತ್ತು.

ಈ ಬಾರಿಯ ಟೂರ್ನಿಯಲ್ಲಿ ನಿರೀಕ್ಷಿತ ಪ್ರದರ್ಶನ ತೋರದ ಹಿನ್ನೆಲೆಯಲ್ಲಿ ಮುಂಬೈ ಹಾಗೂ ಚೆನ್ನೈ ತಂಡಗಳು ಪ್ಲೇ-ಆಫ್‌ನಿಂದ ಹೊರಬಿದ್ದಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT