<p><strong>ನವದೆಹಲಿ</strong>: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಅನ್ನು ಈ ವರ್ಷ ನಡೆಸುವ ನಿರ್ಧಾರ ಭಾರತ ಸರ್ಕಾರ ತೆಗೆದುಕೊಳ್ಳುತ್ತದೆಯೇ ಹೊರತು ಕ್ರಿಕೆಟ್ ಮಂಡಳಿಯಲ್ಲ ಎಂದು ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಭಾನುವಾರ ಹೇಳಿದ್ದಾರೆ.</p>.<p>ಖಾಸಗಿ ಸುದ್ದಿ ವಾಹಿನಿಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಈ ಬಗ್ಗೆ ಮಾತನಾಡಿರುವ ಅವರು, ಮುಂದಿನ ದಿನಗಳಲ್ಲಿ ಕೊರೊನಾ ಸೋಂಕು ನಿಯಂತ್ರಣ ಪ್ರಮಾಣದ ಮೇಲೆ ದೇಶದಲ್ಲಿ ಐಪಿಎಲ್ ನಡೆಸುವುದೋ, ಬೇಡವೋ ಎಂಬುದನ್ನು ಸರ್ಕಾರ ತೀರ್ಮಾನಿಸಲಿದೆ ಎಂದು ತಿಳಿಸಿದ್ದಾರೆ.</p>.<p>ಸಾರ್ವಜನಿಕರ ಆರೋಗ್ಯಕ್ಕೆ ಯಾವುದೇ ಅಪಾಯವಿಲ್ಲದಿದ್ದರೆ ಮಾತ್ರ ಐಪಿಎಲ್ ನಡೆಸುವ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ರಿಜಿಜು ಸ್ಪಷ್ಟಪಡಿಸಿದ್ದಾರೆ.</p>.<p>'ಕ್ರೀಡಾಕೂಟಗಳು ನಡೆಯಬೇಕೆಂದು ನಾವು ಬಯಸಿದ್ದೇವೆ. ಆದರೆ, ಯಾವುದೇ ಕಾರಣಕ್ಕೂ ಸಾರ್ವಜನಿಕರ ಆರೋಗ್ಯವನ್ನು ಅಪಾಯಕ್ಕೆ ತಳ್ಳಲು ಸಾಧ್ಯವಿಲ್ಲ. ನಮ್ಮ ಸಂಪೂರ್ಣ ಗಮನ ಕೋವಿಡ್-19 ವಿರುದ್ಧದ ಹೋರಾಟದ ಮೇಲಿದೆ' ಎಂದು ಕೇಂದ್ರ ಸಚಿವ ರಿಜಿಜು ತಿಳಿಸಿದ್ದಾರೆ.</p>.<p>ಸುಮಾರು ₹50 ಸಾವಿರ ಕೋಟಿ ಬ್ರ್ಯಾಂಡ್ ಮೌಲ್ಯ ಹೊಂದಿರುವ ಟೂರ್ನಿಯು ಸಂಪೂರ್ಣ ರದ್ದಾದರೆ ದೊಡ್ಡ ನಷ್ಟದ ಆತಂಕವಿದೆ. ಆ ಕಾರಣ, ತೀವ್ರ ಒತ್ತಡದಲ್ಲಿರುವ ಬಿಸಿಸಿಐ ಅಕ್ಟೋಬರ್ ಅಥವಾ ನವೆಂಬರ್ನಲ್ಲಿ ಐಪಿಎಲ್ ನಡೆಸುವ ಬಗ್ಗೆ ಯೋಚಿಸಲಾಗುತ್ತಿದೆ ಎಂದು ಹೇಳಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಅನ್ನು ಈ ವರ್ಷ ನಡೆಸುವ ನಿರ್ಧಾರ ಭಾರತ ಸರ್ಕಾರ ತೆಗೆದುಕೊಳ್ಳುತ್ತದೆಯೇ ಹೊರತು ಕ್ರಿಕೆಟ್ ಮಂಡಳಿಯಲ್ಲ ಎಂದು ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಭಾನುವಾರ ಹೇಳಿದ್ದಾರೆ.</p>.<p>ಖಾಸಗಿ ಸುದ್ದಿ ವಾಹಿನಿಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಈ ಬಗ್ಗೆ ಮಾತನಾಡಿರುವ ಅವರು, ಮುಂದಿನ ದಿನಗಳಲ್ಲಿ ಕೊರೊನಾ ಸೋಂಕು ನಿಯಂತ್ರಣ ಪ್ರಮಾಣದ ಮೇಲೆ ದೇಶದಲ್ಲಿ ಐಪಿಎಲ್ ನಡೆಸುವುದೋ, ಬೇಡವೋ ಎಂಬುದನ್ನು ಸರ್ಕಾರ ತೀರ್ಮಾನಿಸಲಿದೆ ಎಂದು ತಿಳಿಸಿದ್ದಾರೆ.</p>.<p>ಸಾರ್ವಜನಿಕರ ಆರೋಗ್ಯಕ್ಕೆ ಯಾವುದೇ ಅಪಾಯವಿಲ್ಲದಿದ್ದರೆ ಮಾತ್ರ ಐಪಿಎಲ್ ನಡೆಸುವ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ರಿಜಿಜು ಸ್ಪಷ್ಟಪಡಿಸಿದ್ದಾರೆ.</p>.<p>'ಕ್ರೀಡಾಕೂಟಗಳು ನಡೆಯಬೇಕೆಂದು ನಾವು ಬಯಸಿದ್ದೇವೆ. ಆದರೆ, ಯಾವುದೇ ಕಾರಣಕ್ಕೂ ಸಾರ್ವಜನಿಕರ ಆರೋಗ್ಯವನ್ನು ಅಪಾಯಕ್ಕೆ ತಳ್ಳಲು ಸಾಧ್ಯವಿಲ್ಲ. ನಮ್ಮ ಸಂಪೂರ್ಣ ಗಮನ ಕೋವಿಡ್-19 ವಿರುದ್ಧದ ಹೋರಾಟದ ಮೇಲಿದೆ' ಎಂದು ಕೇಂದ್ರ ಸಚಿವ ರಿಜಿಜು ತಿಳಿಸಿದ್ದಾರೆ.</p>.<p>ಸುಮಾರು ₹50 ಸಾವಿರ ಕೋಟಿ ಬ್ರ್ಯಾಂಡ್ ಮೌಲ್ಯ ಹೊಂದಿರುವ ಟೂರ್ನಿಯು ಸಂಪೂರ್ಣ ರದ್ದಾದರೆ ದೊಡ್ಡ ನಷ್ಟದ ಆತಂಕವಿದೆ. ಆ ಕಾರಣ, ತೀವ್ರ ಒತ್ತಡದಲ್ಲಿರುವ ಬಿಸಿಸಿಐ ಅಕ್ಟೋಬರ್ ಅಥವಾ ನವೆಂಬರ್ನಲ್ಲಿ ಐಪಿಎಲ್ ನಡೆಸುವ ಬಗ್ಗೆ ಯೋಚಿಸಲಾಗುತ್ತಿದೆ ಎಂದು ಹೇಳಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>