<p><strong>ಬೆಂಗಳೂರು:</strong> ಕಳೆದ ಕೆಲವು ವರ್ಷಗಳಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಪ್ರತಿನಿಧಿಸಿದ್ದ ಬಲಗೈ ವೇಗದ ಬೌಲರ್ ಮೊಹಮ್ಮದ್ ಸಿರಾಜ್, ಈ ಬಾರಿಯ ಐಪಿಎಲ್ನಲ್ಲಿ ಗುಜರಾತ್ ಟೈಟನ್ಸ್ ತೆಕ್ಕೆಗೆ ಸೇರಿದ್ದಾರೆ. </p><p>ಅಲ್ಲದೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್ಸಿಬಿ ವಿರುದ್ಧದ ಪಂದ್ಯದ ಆರಂಭದಲ್ಲೇ ವಿರಾಟ್ ಕೊಹ್ಲಿ ಅವರಿಗೆ ಬೌಲಿಂಗ್ ಮಾಡಲಾಗದೇ ಭಾವುಕರಾಗಿರುವ ಘಟನೆ ನಡೆದಿದೆ. </p><p>ಬುಧವಾರ ರಾತ್ರಿ ನಡೆದ ಪಂದ್ಯದಲ್ಲಿ ರನ್ ಅಪ್ ತೆಗೆದುಕೊಂಡ ಬಂದ ಸಿರಾಜ್ ಅರ್ಧಕ್ಕೆ ನಿಲ್ಲಿಸಿದರು. ಬಳಿಕ ಮತ್ತೆ ಬೌಲಿಂಗ್ ಆರಂಭಿಸಿದರು. ಈ ಎಸೆತವನ್ನು ವಿರಾಟ್ ಬೌಂಡರಿಗಟ್ಟಿದರು. </p><p>ಪಂದ್ಯದಲ್ಲಿ 19ಕ್ಕೆ ಮೂರು ವಿಕೆಟ್ ಗಳಿಸಿದ ಮೊಹಮ್ಮದ್ ಸಿರಾಜ್, ಗುಜರಾತ್ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದರು. ಆ ಮೂಲಕ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. </p><p>ಪಂದ್ಯದ ಬಳಿಕ ಈ ಕುರಿತು ಪ್ರತಿಕ್ರಿಯಿಸಿರುವ ಸಿರಾಜ್, 'ನಾನು ಸ್ವಲ್ಪ ಭಾವುಕನಾಗಿದ್ದೆ. ಏಳು ವರ್ಷಗಳ ಬಳಿಕ ನನ್ನ ಜೆರ್ಸಿಯನ್ನು ಕೆಂಪು ಬಣ್ಣದಿಂದ ನೀಲಿ ಬಣ್ಣಕ್ಕೆ ಬದಲಿಸಿದ್ದೇನೆ. ಆದರೆ ಒಮ್ಮೆ ಬೌಲಿಂಗ್ ಆರಂಭಿಸಿದಾಗ ಎಲ್ಲವೂ ಸರಿಯಾಯಿತು' ಎಂದು ಹೇಳಿದರು. </p><p>ತಮ್ಮ ಟ್ರೇಡ್ ಮಾರ್ಕ್ ಸಂಭ್ರಮಾಚರಣೆಯ ಕುರಿತು ಪ್ರತಿಕ್ರಿಯಿಸಿದ ಸಿರಾಜ್, 'ನಾನು ರೊನಾಲ್ಡೊ ಅಭಿಮಾನಿ. ಅದಕ್ಕಾಗಿಯೇ ಈ ರೀತಿಯಲ್ಲಿ ಸಂಭ್ರಮಿಸುತ್ತೇನೆ' ಎಂದಿದ್ದಾರೆ. </p><p>ಅಂತರರಾಷ್ಟ್ರೀಯ ಕ್ರಿಕೆಟ್ನಿಂದ ಬಿಡುವಿನ ವೇಳೆ ತಮ್ಮ ತಪ್ಪುಗಳನ್ನು ತಿದ್ದಿಕೊಳ್ಳಲು ಹಾಗೂ ಫಿಟ್ನೆಸ್ ಮೇಲೆ ಹೆಚ್ಚಿನ ಗಮನ ಕೇಂದ್ರಿಕರಿಸಲು ನೆರವಾಗಿರುವುದಾಗಿ ಸಿರಾಜ್ ತಿಳಿಸಿದ್ದಾರೆ. </p><p>'ನಾನು ನಿರಂತರವಾಗಿ ಕ್ರಿಕೆಟ್ ಆಡುತ್ತಿದ್ದೆ. ಹಾಗಾಗಿ ಏನು ತಪ್ಪುಗಳನ್ನು ಮಾಡುತ್ತಿದ್ದೆ ಎಂಬುದರ ಮನವರಿಕೆ ಆಗುತ್ತಿರಲಿಲ್ಲ. ಬಿಡುವಿನ ವೇಳೆ ಬೌಲಿಂಗ್ ಮೇಲೆ ಹೆಚ್ಚಿನ ಗಮನ ಕೇಂದ್ರಿಕರಿಸಿದ್ದೆ' ಎಂದು ಹೇಳಿದ್ದಾರೆ. </p>.ಇನ್ಸ್ಟಾಗ್ರಾಮ್ನಲ್ಲಿ ಆರ್ಸಿಬಿಗೆ 1.80 ಕೋಟಿ ಫಾಲೋವರ್ಸ್.IPL 2025 RCB vs GT | ಸಿರಾಜ್ ಬಿರುಗಾಳಿ: ಬಟ್ಲರ್ ಸಿಡಿಲಬ್ಬರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕಳೆದ ಕೆಲವು ವರ್ಷಗಳಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಪ್ರತಿನಿಧಿಸಿದ್ದ ಬಲಗೈ ವೇಗದ ಬೌಲರ್ ಮೊಹಮ್ಮದ್ ಸಿರಾಜ್, ಈ ಬಾರಿಯ ಐಪಿಎಲ್ನಲ್ಲಿ ಗುಜರಾತ್ ಟೈಟನ್ಸ್ ತೆಕ್ಕೆಗೆ ಸೇರಿದ್ದಾರೆ. </p><p>ಅಲ್ಲದೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್ಸಿಬಿ ವಿರುದ್ಧದ ಪಂದ್ಯದ ಆರಂಭದಲ್ಲೇ ವಿರಾಟ್ ಕೊಹ್ಲಿ ಅವರಿಗೆ ಬೌಲಿಂಗ್ ಮಾಡಲಾಗದೇ ಭಾವುಕರಾಗಿರುವ ಘಟನೆ ನಡೆದಿದೆ. </p><p>ಬುಧವಾರ ರಾತ್ರಿ ನಡೆದ ಪಂದ್ಯದಲ್ಲಿ ರನ್ ಅಪ್ ತೆಗೆದುಕೊಂಡ ಬಂದ ಸಿರಾಜ್ ಅರ್ಧಕ್ಕೆ ನಿಲ್ಲಿಸಿದರು. ಬಳಿಕ ಮತ್ತೆ ಬೌಲಿಂಗ್ ಆರಂಭಿಸಿದರು. ಈ ಎಸೆತವನ್ನು ವಿರಾಟ್ ಬೌಂಡರಿಗಟ್ಟಿದರು. </p><p>ಪಂದ್ಯದಲ್ಲಿ 19ಕ್ಕೆ ಮೂರು ವಿಕೆಟ್ ಗಳಿಸಿದ ಮೊಹಮ್ಮದ್ ಸಿರಾಜ್, ಗುಜರಾತ್ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದರು. ಆ ಮೂಲಕ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. </p><p>ಪಂದ್ಯದ ಬಳಿಕ ಈ ಕುರಿತು ಪ್ರತಿಕ್ರಿಯಿಸಿರುವ ಸಿರಾಜ್, 'ನಾನು ಸ್ವಲ್ಪ ಭಾವುಕನಾಗಿದ್ದೆ. ಏಳು ವರ್ಷಗಳ ಬಳಿಕ ನನ್ನ ಜೆರ್ಸಿಯನ್ನು ಕೆಂಪು ಬಣ್ಣದಿಂದ ನೀಲಿ ಬಣ್ಣಕ್ಕೆ ಬದಲಿಸಿದ್ದೇನೆ. ಆದರೆ ಒಮ್ಮೆ ಬೌಲಿಂಗ್ ಆರಂಭಿಸಿದಾಗ ಎಲ್ಲವೂ ಸರಿಯಾಯಿತು' ಎಂದು ಹೇಳಿದರು. </p><p>ತಮ್ಮ ಟ್ರೇಡ್ ಮಾರ್ಕ್ ಸಂಭ್ರಮಾಚರಣೆಯ ಕುರಿತು ಪ್ರತಿಕ್ರಿಯಿಸಿದ ಸಿರಾಜ್, 'ನಾನು ರೊನಾಲ್ಡೊ ಅಭಿಮಾನಿ. ಅದಕ್ಕಾಗಿಯೇ ಈ ರೀತಿಯಲ್ಲಿ ಸಂಭ್ರಮಿಸುತ್ತೇನೆ' ಎಂದಿದ್ದಾರೆ. </p><p>ಅಂತರರಾಷ್ಟ್ರೀಯ ಕ್ರಿಕೆಟ್ನಿಂದ ಬಿಡುವಿನ ವೇಳೆ ತಮ್ಮ ತಪ್ಪುಗಳನ್ನು ತಿದ್ದಿಕೊಳ್ಳಲು ಹಾಗೂ ಫಿಟ್ನೆಸ್ ಮೇಲೆ ಹೆಚ್ಚಿನ ಗಮನ ಕೇಂದ್ರಿಕರಿಸಲು ನೆರವಾಗಿರುವುದಾಗಿ ಸಿರಾಜ್ ತಿಳಿಸಿದ್ದಾರೆ. </p><p>'ನಾನು ನಿರಂತರವಾಗಿ ಕ್ರಿಕೆಟ್ ಆಡುತ್ತಿದ್ದೆ. ಹಾಗಾಗಿ ಏನು ತಪ್ಪುಗಳನ್ನು ಮಾಡುತ್ತಿದ್ದೆ ಎಂಬುದರ ಮನವರಿಕೆ ಆಗುತ್ತಿರಲಿಲ್ಲ. ಬಿಡುವಿನ ವೇಳೆ ಬೌಲಿಂಗ್ ಮೇಲೆ ಹೆಚ್ಚಿನ ಗಮನ ಕೇಂದ್ರಿಕರಿಸಿದ್ದೆ' ಎಂದು ಹೇಳಿದ್ದಾರೆ. </p>.ಇನ್ಸ್ಟಾಗ್ರಾಮ್ನಲ್ಲಿ ಆರ್ಸಿಬಿಗೆ 1.80 ಕೋಟಿ ಫಾಲೋವರ್ಸ್.IPL 2025 RCB vs GT | ಸಿರಾಜ್ ಬಿರುಗಾಳಿ: ಬಟ್ಲರ್ ಸಿಡಿಲಬ್ಬರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>