ನವದೆಹಲಿ: ಐಪಿಎಲ್ ಟೂರ್ನಿಯ ಫೈನಲ್ ಪಂದ್ಯವನ್ನು ಚೆನ್ನೈನಿಂದ ಹೈದರಾಬಾದ್ಗೆ ಸ್ಥಳಾಂತರಿಸಲು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ನಿರ್ಧರಿಸಿದೆ. ಎಂ.ಎ.ಚಿದಂಬರಂ ಕ್ರೀಡಾಂಗಣದ ಮೂರು ಕಡೆಯ ಪ್ರೇಕ್ಷಕರ ಸ್ಟ್ಯಾಂಡ್ಗಳಿಗೆ ಸಂಬಂಧಿಸಿದ ವಿವಾದವನ್ನು ಪರಿಹರಿಸಲು ತಮಿಳುನಾಡು ಕ್ರಿಕೆಟ್ ಸಂಸ್ಥೆ ವಿಫಲವಾದ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ.