<p><strong>ಮುಂಬೈ:</strong> ಇದೀಗ ಎಲ್ಲವೂ ಅಧಿಕೃತಗೊಂಡಿದ್ದು, ಕೋವಿಡ್ನಿಂದಾಗಿ ಅರ್ಧದಲ್ಲೇ ಮೊಟಕುಗೊಂಡಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2021ನೇ ಸಾಲಿನ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ ಉಳಿದಿರುವ ಪಂದ್ಯಗಳು ಯುಎಇನಲ್ಲಿ ಆಯೋಜನೆಯಾಗಲಿವೆ.</p>.<p>ಸೌರವ್ ಗಂಗೂಲಿ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ವಿಶೇಷ ಸಾಮಾನ್ಯ ಸಭೆಯಲ್ಲಿ ಈ ಕುರಿತು ನಿರ್ಧರಿಸಲಾಗಿದೆ.</p>.<p>ಇದನ್ನೂ ಓದಿ:<a href="https://www.prajavani.net/sports/cricket/icc-wtc-final-india-and-new-zealand-will-be-declared-winners-if-game-ends-in-draw-or-tie-834047.html" itemprop="url">ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ ಪಂದ್ಯ 'ಡ್ರಾ' ಆದರೆ ವಿಜೇತರು ಯಾರು? </a></p>.<p>ಕೊರೊನಾವೈರಸ್ ಸಾಂಕ್ರಾಮಿಕ ರೋಗದಿಂದಾಗಿ ಮುಂದೂಡಿರುವ ಐಪಿಎಲ್ ಟೂರ್ನಿಯ ಉಳಿದಿರುವ ಪಂದ್ಯಗಳನ್ನು ಯುಎಇನಲ್ಲಿ ಆಯೋಜಿಸಲಾಗುವುದು ಎಂದು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಹೇಳಿಕೆಯನ್ನು ಎಎನ್ಐ ಟ್ವೀಟ್ ಮಾಡಿದೆ.</p>.<p>ಐಪಿಎಲ್ನಲ್ಲಿ ಬಾಕಿ ಉಳಿದಿರುವ 31 ಪಂದ್ಯಗಳನ್ನು ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳಲ್ಲಿ ಆಯೋಜಿಸಲು ಯೋಜನೆ ಇರಿಸಿಕೊಳ್ಳಲಾಗಿದೆ.</p>.<p>ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಆಡಲಿರುವುದರಿಂದ ಇಂಗ್ಲೆಂಡ್ ಆಟಗಾರರು ಐಪಿಎಲ್ನಲ್ಲಿ ಪಾಲ್ಗೊಳ್ಳುವುದಿಲ್ಲ ಎಂಬುದು ವರದಿಯಾಗಿತ್ತು. ಹಾಗಾಗಿ ವಿದೇಶಿ ಆಟಗಾರರ ನಿರ್ವಹಣೆ ಬಗ್ಗೆಯೂ ಚರ್ಚೆ ನಡೆದಿದೆ ಎನ್ನಲಾಗಿದೆ.</p>.<p>ಐಪಿಎಲ್ನಲ್ಲಿ ಕಟ್ಟುನಿಟ್ಟಿನ ಬಯೋಬಯಲ್ ವ್ಯವಸ್ಥೆಯನ್ನು ರೂಪಿಸಿದ್ದರೂ ಅನೇಕ ಆಟಗಾರರಲ್ಲಿ ಕೋವಿಡ್ ಸೋಂಕು ತಗುಲಿದ ಪರಿಣಾಮ ಟೂರ್ನಿಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿತ್ತು. ದೇಶದಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗಿರುವುದರಿಂದ ಈಗಿನ ಪರಿಸ್ಥಿತಿಯಲ್ಲಿ ಭಾರತದಲ್ಲಿ ಟೂರ್ನಿ ಆಯೋಜನೆ ಸಾಧ್ಯವಿಲ್ಲ. ಹಾಗಾಗಿ ಯುಎಇಗೆ ವರ್ಗಾಯಿಸಲು ನಿರ್ಧರಿಸಲಾಗಿದೆ.</p>.<p>ಕಳೆದ ವರ್ಷವೂ ಯುಎಇನಲ್ಲಿ ಐಪಿಎಲ್ ಟೂರ್ನಿಯನ್ನು ಬಿಸಿಸಿಐ ಯಶಸ್ವಿಯಾಗಿ ಆಯೋಜಿಸಿತ್ತು.</p>.<p><strong>ಟಿ20 ವಿಶ್ವಕಪ್: ನಿರ್ಧಾರಕ್ಕೆ ಕಾಲಾವಕಾಶ</strong><br />ಭಾರತದಲ್ಲಿ ನಡೆಸಲು ಉದ್ದೇಶಿಸಿರುವ ಟಿ20 ವಿಶ್ವಕಪ್ ಟೂರ್ನಿ ಅಕ್ಟೋಬರ್ ಕೊನೆಯವಾರದಲ್ಲಿ ಆರಂಭಗೊಳ್ಳಬೇಕಾಗಿದೆ. ಆದರೆ ಟೂರ್ನಿಗೆ ಆತಿಥ್ಯ ವಹಿಸುವ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲು ಐಸಿಸಿ ಬಳಿ ಒಂದು ತಿಂಗಳ ಕಾಲಾವಕಾಶ ಕೋರಲು ತೀರ್ಮಾನಿಸಲಾಗಿದೆ.</p>.<p>‘ಸದ್ಯ ಭಾರತದಲ್ಲಿ ಆರೋಗ್ಯ ವಿಷಮ ಸ್ಥಿತಿ ಇದೆ. ಆದ್ದರಿಂದ ಯಾವುದೇ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ. ಜುಲೈ ಒಂದರಂದು ಮತ್ತೊಂದು ವಿಶೇಷ ಸಭೆ ನಡೆಯಲಿದ್ದು ವಿಶ್ವಕಪ್ ಆಯೋಜಿಸುವ ಬಗ್ಗೆ ಅಂದು ತೀರ್ಮಾನಿಸಲಾಗುವುದು’ ಎಂದು ಬಿಸಿಸಿಐ ತಿಳಿಸಿದೆ.</p>.<p>ಜೂನ್ ಒಂದರಂದು ದುಬೈಯಲ್ಲಿ ನಡೆಯಲಿರುವ ಐಸಿಸಿಯ ಮಂಡಳಿ ಸಭೆಯಲ್ಲಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ. ಕಾರ್ಯದರ್ಶಿ ಜಯ್ ಶಾ ಮತ್ತು ಉಪಾಧ್ಯಕ್ಷ ರಾಜೀವ್ ಶುಕ್ಲಾ ಪಾಲ್ಗೊಳ್ಳಲಿದ್ದು ವಿಶ್ವಕಪ್ ಬಗ್ಗೆ ಅಲ್ಲಿಯೂ ಚರ್ಚೆ ನಡೆಯಲಿದೆ.</p>.<p>ಕಳೆದ ಬಾರಿ ರದ್ದಾದ ರಣಜಿ ಟೂರ್ನಿಗೆ ಸಂಬಂಧಿಸಿ ಆಟಗಾರರಿಗೆ ನೀಡಬೇಕಾದ ಪರಿಹಾರಧನದ ವಿಷಯ ಸಭೆಯಲ್ಲಿ ಚರ್ಚೆಯಾಗಲಿಲ್ಲ. ರಾಜ್ಯವೊಂದರ ಪ್ರತಿನಿಧಿ ಈ ಕುರಿತು ಪ್ರಶ್ನಿಸಿದ್ದರು. ಆದರೆ ಜನವರಿಯಲ್ಲಿ ನಡೆದ ಸಭೆಯಲ್ಲೇ ಈ ಕುರಿತು ನಿರ್ಧಾರ ಪ್ರಕಟಿಸಿದ್ದರಿಂದ ಮತ್ತೊಮ್ಮೆ ಚರ್ಚೆ ನಡೆಸುವ ಅಗತ್ಯವಿಲ್ಲ ಎಂಬ ಅಭಿಪ್ರಾಯ ಮೂಡಿಬಂತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಇದೀಗ ಎಲ್ಲವೂ ಅಧಿಕೃತಗೊಂಡಿದ್ದು, ಕೋವಿಡ್ನಿಂದಾಗಿ ಅರ್ಧದಲ್ಲೇ ಮೊಟಕುಗೊಂಡಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2021ನೇ ಸಾಲಿನ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ ಉಳಿದಿರುವ ಪಂದ್ಯಗಳು ಯುಎಇನಲ್ಲಿ ಆಯೋಜನೆಯಾಗಲಿವೆ.</p>.<p>ಸೌರವ್ ಗಂಗೂಲಿ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ವಿಶೇಷ ಸಾಮಾನ್ಯ ಸಭೆಯಲ್ಲಿ ಈ ಕುರಿತು ನಿರ್ಧರಿಸಲಾಗಿದೆ.</p>.<p>ಇದನ್ನೂ ಓದಿ:<a href="https://www.prajavani.net/sports/cricket/icc-wtc-final-india-and-new-zealand-will-be-declared-winners-if-game-ends-in-draw-or-tie-834047.html" itemprop="url">ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ ಪಂದ್ಯ 'ಡ್ರಾ' ಆದರೆ ವಿಜೇತರು ಯಾರು? </a></p>.<p>ಕೊರೊನಾವೈರಸ್ ಸಾಂಕ್ರಾಮಿಕ ರೋಗದಿಂದಾಗಿ ಮುಂದೂಡಿರುವ ಐಪಿಎಲ್ ಟೂರ್ನಿಯ ಉಳಿದಿರುವ ಪಂದ್ಯಗಳನ್ನು ಯುಎಇನಲ್ಲಿ ಆಯೋಜಿಸಲಾಗುವುದು ಎಂದು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಹೇಳಿಕೆಯನ್ನು ಎಎನ್ಐ ಟ್ವೀಟ್ ಮಾಡಿದೆ.</p>.<p>ಐಪಿಎಲ್ನಲ್ಲಿ ಬಾಕಿ ಉಳಿದಿರುವ 31 ಪಂದ್ಯಗಳನ್ನು ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳಲ್ಲಿ ಆಯೋಜಿಸಲು ಯೋಜನೆ ಇರಿಸಿಕೊಳ್ಳಲಾಗಿದೆ.</p>.<p>ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಆಡಲಿರುವುದರಿಂದ ಇಂಗ್ಲೆಂಡ್ ಆಟಗಾರರು ಐಪಿಎಲ್ನಲ್ಲಿ ಪಾಲ್ಗೊಳ್ಳುವುದಿಲ್ಲ ಎಂಬುದು ವರದಿಯಾಗಿತ್ತು. ಹಾಗಾಗಿ ವಿದೇಶಿ ಆಟಗಾರರ ನಿರ್ವಹಣೆ ಬಗ್ಗೆಯೂ ಚರ್ಚೆ ನಡೆದಿದೆ ಎನ್ನಲಾಗಿದೆ.</p>.<p>ಐಪಿಎಲ್ನಲ್ಲಿ ಕಟ್ಟುನಿಟ್ಟಿನ ಬಯೋಬಯಲ್ ವ್ಯವಸ್ಥೆಯನ್ನು ರೂಪಿಸಿದ್ದರೂ ಅನೇಕ ಆಟಗಾರರಲ್ಲಿ ಕೋವಿಡ್ ಸೋಂಕು ತಗುಲಿದ ಪರಿಣಾಮ ಟೂರ್ನಿಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿತ್ತು. ದೇಶದಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗಿರುವುದರಿಂದ ಈಗಿನ ಪರಿಸ್ಥಿತಿಯಲ್ಲಿ ಭಾರತದಲ್ಲಿ ಟೂರ್ನಿ ಆಯೋಜನೆ ಸಾಧ್ಯವಿಲ್ಲ. ಹಾಗಾಗಿ ಯುಎಇಗೆ ವರ್ಗಾಯಿಸಲು ನಿರ್ಧರಿಸಲಾಗಿದೆ.</p>.<p>ಕಳೆದ ವರ್ಷವೂ ಯುಎಇನಲ್ಲಿ ಐಪಿಎಲ್ ಟೂರ್ನಿಯನ್ನು ಬಿಸಿಸಿಐ ಯಶಸ್ವಿಯಾಗಿ ಆಯೋಜಿಸಿತ್ತು.</p>.<p><strong>ಟಿ20 ವಿಶ್ವಕಪ್: ನಿರ್ಧಾರಕ್ಕೆ ಕಾಲಾವಕಾಶ</strong><br />ಭಾರತದಲ್ಲಿ ನಡೆಸಲು ಉದ್ದೇಶಿಸಿರುವ ಟಿ20 ವಿಶ್ವಕಪ್ ಟೂರ್ನಿ ಅಕ್ಟೋಬರ್ ಕೊನೆಯವಾರದಲ್ಲಿ ಆರಂಭಗೊಳ್ಳಬೇಕಾಗಿದೆ. ಆದರೆ ಟೂರ್ನಿಗೆ ಆತಿಥ್ಯ ವಹಿಸುವ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲು ಐಸಿಸಿ ಬಳಿ ಒಂದು ತಿಂಗಳ ಕಾಲಾವಕಾಶ ಕೋರಲು ತೀರ್ಮಾನಿಸಲಾಗಿದೆ.</p>.<p>‘ಸದ್ಯ ಭಾರತದಲ್ಲಿ ಆರೋಗ್ಯ ವಿಷಮ ಸ್ಥಿತಿ ಇದೆ. ಆದ್ದರಿಂದ ಯಾವುದೇ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ. ಜುಲೈ ಒಂದರಂದು ಮತ್ತೊಂದು ವಿಶೇಷ ಸಭೆ ನಡೆಯಲಿದ್ದು ವಿಶ್ವಕಪ್ ಆಯೋಜಿಸುವ ಬಗ್ಗೆ ಅಂದು ತೀರ್ಮಾನಿಸಲಾಗುವುದು’ ಎಂದು ಬಿಸಿಸಿಐ ತಿಳಿಸಿದೆ.</p>.<p>ಜೂನ್ ಒಂದರಂದು ದುಬೈಯಲ್ಲಿ ನಡೆಯಲಿರುವ ಐಸಿಸಿಯ ಮಂಡಳಿ ಸಭೆಯಲ್ಲಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ. ಕಾರ್ಯದರ್ಶಿ ಜಯ್ ಶಾ ಮತ್ತು ಉಪಾಧ್ಯಕ್ಷ ರಾಜೀವ್ ಶುಕ್ಲಾ ಪಾಲ್ಗೊಳ್ಳಲಿದ್ದು ವಿಶ್ವಕಪ್ ಬಗ್ಗೆ ಅಲ್ಲಿಯೂ ಚರ್ಚೆ ನಡೆಯಲಿದೆ.</p>.<p>ಕಳೆದ ಬಾರಿ ರದ್ದಾದ ರಣಜಿ ಟೂರ್ನಿಗೆ ಸಂಬಂಧಿಸಿ ಆಟಗಾರರಿಗೆ ನೀಡಬೇಕಾದ ಪರಿಹಾರಧನದ ವಿಷಯ ಸಭೆಯಲ್ಲಿ ಚರ್ಚೆಯಾಗಲಿಲ್ಲ. ರಾಜ್ಯವೊಂದರ ಪ್ರತಿನಿಧಿ ಈ ಕುರಿತು ಪ್ರಶ್ನಿಸಿದ್ದರು. ಆದರೆ ಜನವರಿಯಲ್ಲಿ ನಡೆದ ಸಭೆಯಲ್ಲೇ ಈ ಕುರಿತು ನಿರ್ಧಾರ ಪ್ರಕಟಿಸಿದ್ದರಿಂದ ಮತ್ತೊಮ್ಮೆ ಚರ್ಚೆ ನಡೆಸುವ ಅಗತ್ಯವಿಲ್ಲ ಎಂಬ ಅಭಿಪ್ರಾಯ ಮೂಡಿಬಂತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>