<p><strong>ಮೈಸೂರು:</strong> ‘ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಯೇ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಸರ್ಕಾರದ ಹಸಿರು ನಿಶಾನೆ ಅಗತ್ಯವಿತ್ತು. ಮೌಖಿಕ ಒಪ್ಪಿಗೆಯನ್ನು ರಾಜ್ಯ ಸರ್ಕಾರ ಈಗಾಗಲೇ ನೀಡಿದ್ದು, ಶೀಘ್ರದಲ್ಲಿಯೇ ಲಿಖಿತ ಅನುಮತಿ ದೊರೆಯಲಿದೆ’ ಎಂದು ಕೆಎಸ್ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ತಿಳಿಸಿದರು.</p><p>ಮಾನಸ ಗಂಗೋತ್ರಿಯ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಕ್ರೀಡಾಂಗಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಬೆಳಗಾವಿ ವಿಧಾನಮಂಡಲ ಅಧಿವೇಶನದ ನಂತರ ಗೃಹ ಸಚಿವ ಜಿ.ಪರಮೇಶ್ವರ ಅವರೊಂದಿಗೆ ಮಾತನಾಡಲಾಗುವುದು’ ಎಂದರು. </p>.ವೆಂಕಟೇಶ್ ಅಯ್ಯರ್: ಕಳೆದ ವರ್ಷ ಜಸ್ಟ್ ಮಿಸ್, ಈ ಬಾರಿ ಬಿಟ್ಟುಕೊಡದೆ ಖರೀದಿಸಿದ RCB.ಹಂಡ್ರೆಡ್ಸ್ ಟೂರ್ನಿಯಲ್ಲಿ ಡಿಕೆ: RCB ಬ್ಯಾಟಿಂಗ್ ಕೋಚ್ಗೆ ಹೊಸ ಜವಾಬ್ದಾರಿ.<p>‘ಆರ್ಸಿಬಿ ಚಾಂಪಿಯನ್ ಆಗಿರುವುದರಿಂದ ತವರು ನೆಲದಲ್ಲಿಯೇ ಉದ್ಘಾಟನಾ ಪಂದ್ಯ ನಡೆಯಬೇಕು. ಆರ್ಸಿಬಿ ಸಂಭ್ರಮಾಚರಣೆಯಲ್ಲಿ ಉಂಟಾದ ಕಾಲ್ತುಳಿತ ಪ್ರಕರಣದಿಂದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಂತರರಾಷ್ಟ್ರೀಯ ಹಾಗೂ ಐಪಿಎಲ್ ಪಂದ್ಯಗಳನ್ನು ಮತ್ತೆ ಆಯೋಜಿಸುವ ವಾತಾವರಣ ನಿರ್ಮಿಸುವುದು ಸುಲಭವಿರಲಿಲ್ಲ. ರಾಜ್ಯ ಸರ್ಕಾರದ ಬೆಂಬಲ ಅಗತ್ಯವಿತ್ತು. ಈ ಬಗ್ಗೆ ಬಿಸಿಸಿಐ ಜೊತೆಯೂ ಮಾತನಾಡಲಾಗಿದೆ’ ಎಂದು ಹೇಳಿದರು.</p><p>‘ವಿಜಯ್ ಹಜಾರೆ ಟ್ರೋಫಿ ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಆಡಲಿದ್ದು, ಆಲೂರಿನ ಮೂರು ಕ್ರೀಡಾಂಗಣ ಹಾಗೂ ಚಿನ್ನಸ್ವಾಮಿಯಲ್ಲೂ ಪಂದ್ಯಗಳು ನಡೆಯಲಿವೆ. ಕೊಹ್ಲಿ ಎಲ್ಲಿ ಆಡಲಿದ್ದಾರೆ ಎಂಬುದು ಖಚಿತವಾಗಿಲ್ಲ’ ಎಂದರು.</p>.IPL Auction 2026: ಐಪಿಎಲ್ ಮಿನಿ ಹರಾಜು ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಯೇ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಸರ್ಕಾರದ ಹಸಿರು ನಿಶಾನೆ ಅಗತ್ಯವಿತ್ತು. ಮೌಖಿಕ ಒಪ್ಪಿಗೆಯನ್ನು ರಾಜ್ಯ ಸರ್ಕಾರ ಈಗಾಗಲೇ ನೀಡಿದ್ದು, ಶೀಘ್ರದಲ್ಲಿಯೇ ಲಿಖಿತ ಅನುಮತಿ ದೊರೆಯಲಿದೆ’ ಎಂದು ಕೆಎಸ್ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ತಿಳಿಸಿದರು.</p><p>ಮಾನಸ ಗಂಗೋತ್ರಿಯ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಕ್ರೀಡಾಂಗಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಬೆಳಗಾವಿ ವಿಧಾನಮಂಡಲ ಅಧಿವೇಶನದ ನಂತರ ಗೃಹ ಸಚಿವ ಜಿ.ಪರಮೇಶ್ವರ ಅವರೊಂದಿಗೆ ಮಾತನಾಡಲಾಗುವುದು’ ಎಂದರು. </p>.ವೆಂಕಟೇಶ್ ಅಯ್ಯರ್: ಕಳೆದ ವರ್ಷ ಜಸ್ಟ್ ಮಿಸ್, ಈ ಬಾರಿ ಬಿಟ್ಟುಕೊಡದೆ ಖರೀದಿಸಿದ RCB.ಹಂಡ್ರೆಡ್ಸ್ ಟೂರ್ನಿಯಲ್ಲಿ ಡಿಕೆ: RCB ಬ್ಯಾಟಿಂಗ್ ಕೋಚ್ಗೆ ಹೊಸ ಜವಾಬ್ದಾರಿ.<p>‘ಆರ್ಸಿಬಿ ಚಾಂಪಿಯನ್ ಆಗಿರುವುದರಿಂದ ತವರು ನೆಲದಲ್ಲಿಯೇ ಉದ್ಘಾಟನಾ ಪಂದ್ಯ ನಡೆಯಬೇಕು. ಆರ್ಸಿಬಿ ಸಂಭ್ರಮಾಚರಣೆಯಲ್ಲಿ ಉಂಟಾದ ಕಾಲ್ತುಳಿತ ಪ್ರಕರಣದಿಂದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಂತರರಾಷ್ಟ್ರೀಯ ಹಾಗೂ ಐಪಿಎಲ್ ಪಂದ್ಯಗಳನ್ನು ಮತ್ತೆ ಆಯೋಜಿಸುವ ವಾತಾವರಣ ನಿರ್ಮಿಸುವುದು ಸುಲಭವಿರಲಿಲ್ಲ. ರಾಜ್ಯ ಸರ್ಕಾರದ ಬೆಂಬಲ ಅಗತ್ಯವಿತ್ತು. ಈ ಬಗ್ಗೆ ಬಿಸಿಸಿಐ ಜೊತೆಯೂ ಮಾತನಾಡಲಾಗಿದೆ’ ಎಂದು ಹೇಳಿದರು.</p><p>‘ವಿಜಯ್ ಹಜಾರೆ ಟ್ರೋಫಿ ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಆಡಲಿದ್ದು, ಆಲೂರಿನ ಮೂರು ಕ್ರೀಡಾಂಗಣ ಹಾಗೂ ಚಿನ್ನಸ್ವಾಮಿಯಲ್ಲೂ ಪಂದ್ಯಗಳು ನಡೆಯಲಿವೆ. ಕೊಹ್ಲಿ ಎಲ್ಲಿ ಆಡಲಿದ್ದಾರೆ ಎಂಬುದು ಖಚಿತವಾಗಿಲ್ಲ’ ಎಂದರು.</p>.IPL Auction 2026: ಐಪಿಎಲ್ ಮಿನಿ ಹರಾಜು ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>