<p><strong>ಚೆನ್ನೈ:</strong> ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಕಳೆದೆರಡು ಸಾಲಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಕಳಪೆ ಪ್ರದರ್ಶನ ನೀಡಿದೆ ಎಂದು ಒಪ್ಪಿಕೊಂಡಿರುವ ದಿಗ್ಗಜ ಮಹೇಂದ್ರ ಸಿಂಗ್ ಧೋನಿ, ಮುಂದಿನ ಆವೃತ್ತಿಯಲ್ಲಿ ತಪ್ಪುಗಳನ್ನು ಸರಿಪಡಿಸಿಕೊಂಡು ಕಣಕ್ಕಿಳಿಯಲಿದ್ದೇವೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. </p><p>'ಹೌದು, ಕಳೆದೆರಡು ವರ್ಷಗಳು ನಮ್ಮ ಪಾಲಿಗೆ ಉತ್ತಮವಾಗಿರಲಿಲ್ಲ. ನಾವು ನಿರೀಕ್ಷಿತ ಯಶಸ್ಸು ಕಂಡಿಲ್ಲ. ಇದರಿಂದ ಪಾಠ ಕಲಿಯುವುದು ಮುಖ್ಯವೆನಿಸುತ್ತದೆ. ಎಲ್ಲಿ ತಪ್ಪಾಯಿತು ಎಂಬುದನ್ನು ಮನಗಂಡು ಸರಿಪಡಿಸಬೇಕಿದೆ' ಎಂದು ಹೇಳಿದ್ದಾರೆ. </p><p>'ತಂಡದಲ್ಲಿ ಕೆಲವೊಂದು ನ್ಯೂನತೆಗಳಿವೆ. ಅದನ್ನು ನಿಖರವಾಗಿ ಕಂಡುಹಿಡಿದು ಸರಿಪಡಿಸಬೇಕಿದೆ. ಮುಂದಿನ ಡಿಸೆಂಬರ್ನಲ್ಲಿ ನಡೆಯಲಿರುವ ಮಿನಿ ಹರಾಜಿನಲ್ಲಿ ನ್ಯೂನತೆಗಳನ್ನು ಸರಿಪಡಿಸಲು ಪ್ರಯತ್ನಿಸಲಿದ್ದೇವೆ' ಎಂದು ತಿಳಿಸಿದ್ದಾರೆ. </p><p>'ಮುಂದಿನ ಆವೃತ್ತಿಯಲ್ಲಿ ತಂಡದ ನಾಯಕ ಋತುರಾಜ್ ಗಾಯಕವಾಡ್ ಆಗಮನದಿಂದ ಬ್ಯಾಟಿಂಗ್ ವಿಭಾಗದ ಸಮಸ್ಯೆಗೆ ಪರಿಹಾರ ಸಿಗಲಿದೆ' ಎಂದು ಧೋನಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p><p>ಕಳೆದ ಸಾಲಿನಲ್ಲಿ ಟೂರ್ನಿಯ ಮೊದಲಾರ್ಧದಲ್ಲಿ ಋತುರಾಜ್ ಗಾಯಗೊಂಡ ಪರಿಣಾಮ ಧೋನಿ ತಂಡದ ನಾಯಕತ್ವ ವಹಿಸಿದ್ದರು. </p><p>ಈ ಸಂದರ್ಭದಲ್ಲಿ ಚೆನ್ನೈ ತಂಡದ ಭಾಗವಾಗಲು ಸಾಧ್ಯವಾಗಿರುವುದಕ್ಕೆ ಮತ್ತು ಅಭಿಮಾನಿಗಳ ನಿರಂತರ ಬೆಂಬಲಕ್ಕಾಗಿ ಧೋನಿ ಧನ್ಯವಾದ ಸಲ್ಲಿಸಿದ್ದಾರೆ. </p>.Asia Cup 2025 Schedule | ಸೆ.14ರಂದು ದುಬೈಯಲ್ಲಿ ಭಾರತ-ಪಾಕಿಸ್ತಾನ ಹಣಾಹಣಿ.ಇಂಗ್ಲೆಂಡ್ ಸರಣಿಯಲ್ಲಿ 754 ರನ್; ಆದರೂ ಗವಾಸ್ಕರ್ ದಾಖಲೆ ಮುರಿಯುವಲ್ಲಿ ಗಿಲ್ ವಿಫಲ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಕಳೆದೆರಡು ಸಾಲಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಕಳಪೆ ಪ್ರದರ್ಶನ ನೀಡಿದೆ ಎಂದು ಒಪ್ಪಿಕೊಂಡಿರುವ ದಿಗ್ಗಜ ಮಹೇಂದ್ರ ಸಿಂಗ್ ಧೋನಿ, ಮುಂದಿನ ಆವೃತ್ತಿಯಲ್ಲಿ ತಪ್ಪುಗಳನ್ನು ಸರಿಪಡಿಸಿಕೊಂಡು ಕಣಕ್ಕಿಳಿಯಲಿದ್ದೇವೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. </p><p>'ಹೌದು, ಕಳೆದೆರಡು ವರ್ಷಗಳು ನಮ್ಮ ಪಾಲಿಗೆ ಉತ್ತಮವಾಗಿರಲಿಲ್ಲ. ನಾವು ನಿರೀಕ್ಷಿತ ಯಶಸ್ಸು ಕಂಡಿಲ್ಲ. ಇದರಿಂದ ಪಾಠ ಕಲಿಯುವುದು ಮುಖ್ಯವೆನಿಸುತ್ತದೆ. ಎಲ್ಲಿ ತಪ್ಪಾಯಿತು ಎಂಬುದನ್ನು ಮನಗಂಡು ಸರಿಪಡಿಸಬೇಕಿದೆ' ಎಂದು ಹೇಳಿದ್ದಾರೆ. </p><p>'ತಂಡದಲ್ಲಿ ಕೆಲವೊಂದು ನ್ಯೂನತೆಗಳಿವೆ. ಅದನ್ನು ನಿಖರವಾಗಿ ಕಂಡುಹಿಡಿದು ಸರಿಪಡಿಸಬೇಕಿದೆ. ಮುಂದಿನ ಡಿಸೆಂಬರ್ನಲ್ಲಿ ನಡೆಯಲಿರುವ ಮಿನಿ ಹರಾಜಿನಲ್ಲಿ ನ್ಯೂನತೆಗಳನ್ನು ಸರಿಪಡಿಸಲು ಪ್ರಯತ್ನಿಸಲಿದ್ದೇವೆ' ಎಂದು ತಿಳಿಸಿದ್ದಾರೆ. </p><p>'ಮುಂದಿನ ಆವೃತ್ತಿಯಲ್ಲಿ ತಂಡದ ನಾಯಕ ಋತುರಾಜ್ ಗಾಯಕವಾಡ್ ಆಗಮನದಿಂದ ಬ್ಯಾಟಿಂಗ್ ವಿಭಾಗದ ಸಮಸ್ಯೆಗೆ ಪರಿಹಾರ ಸಿಗಲಿದೆ' ಎಂದು ಧೋನಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p><p>ಕಳೆದ ಸಾಲಿನಲ್ಲಿ ಟೂರ್ನಿಯ ಮೊದಲಾರ್ಧದಲ್ಲಿ ಋತುರಾಜ್ ಗಾಯಗೊಂಡ ಪರಿಣಾಮ ಧೋನಿ ತಂಡದ ನಾಯಕತ್ವ ವಹಿಸಿದ್ದರು. </p><p>ಈ ಸಂದರ್ಭದಲ್ಲಿ ಚೆನ್ನೈ ತಂಡದ ಭಾಗವಾಗಲು ಸಾಧ್ಯವಾಗಿರುವುದಕ್ಕೆ ಮತ್ತು ಅಭಿಮಾನಿಗಳ ನಿರಂತರ ಬೆಂಬಲಕ್ಕಾಗಿ ಧೋನಿ ಧನ್ಯವಾದ ಸಲ್ಲಿಸಿದ್ದಾರೆ. </p>.Asia Cup 2025 Schedule | ಸೆ.14ರಂದು ದುಬೈಯಲ್ಲಿ ಭಾರತ-ಪಾಕಿಸ್ತಾನ ಹಣಾಹಣಿ.ಇಂಗ್ಲೆಂಡ್ ಸರಣಿಯಲ್ಲಿ 754 ರನ್; ಆದರೂ ಗವಾಸ್ಕರ್ ದಾಖಲೆ ಮುರಿಯುವಲ್ಲಿ ಗಿಲ್ ವಿಫಲ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>