ಪಂಜಾಬ್ ಕಿಂಗ್ಸ್ ತಂಡವು ನಾಯಕ, ಕನ್ನಡಿಗ ಕೆ.ಎಲ್.ರಾಹುಲ್ ಅವರನ್ನು ಕೈಬಿಟ್ಟಿದೆ. ಅದೇ ರೀತಿ ಬ್ಯಾಟಿಂಗ್ ದೈತ್ಯ, ವೆಸ್ಟ್ ಇಂಡೀಸ್ನ ಕ್ರಿಸ್ ಗೇಲ್ ಅವರನ್ನೂ ಕೈಬಿಟ್ಟಿದೆ. ಗರಿಷ್ಠ ನಾಲ್ವರನ್ನು ಉಳಿಸಿಕೊಳ್ಳಬಹುದಾಗಿದ್ದರೂ ಮಯಂಕ್ ಅಗರ್ವಾಲ್ ಹಾಗೂ ಆರ್ಶದೀಪ್ ಸಿಂಗ್ರನ್ನು ಮಾತ್ರ ತಂಡದಲ್ಲಿ ಉಳಿಸಿಕೊಂಡಿದೆ.